ಶರನ್ನವರಾತ್ರಿ ಪೂಜಾ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆ

KannadaprabhaNewsNetwork |  
Published : Oct 04, 2024, 01:06 AM IST
3ಎಚ್ಎಸ್ಎನ್9 : ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ವೇದಿಕೆ ನಿರ್ಮಿಸಿ, ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಉತ್ಸವಮೂರ್ತಿ, ಪರಿವಾರ ದೇವತೆಗಳು ಹಾಗೂ ಶ್ರೀ ಲಕ್ಷ್ಮಿದೇವಿ ಮೂರ್ತಿಯ ಪ್ರತಿಷ್ಟಾಪಿಸಿ, ಪೂಜಿಸಲಾಗುತ್ತಿದೆ. | Kannada Prabha

ಸಾರಾಂಶ

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವಾಂಗ ಬಡಾವಣೆಯ ಶ್ರೀ ಚೌಡೇಶ್ವರಿ ಹಾಗೂ ಶ್ರೀ ಬನಶಂಕರಿ ದೇವಿ ದೇವಾಲಯಗಳಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ ಪ್ರಯುಕ್ತ ಪ್ರತಿದಿನ ಸಂಜೆ ವಿಶೇಷ ಪೂಜೆ ವಿಜೃಂಭಣೆಯಿಂದ ನಡೆಯಲಿದೆ.

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವಾಂಗ ಬಡಾವಣೆಯ ಶ್ರೀ ಚೌಡೇಶ್ವರಿ ಹಾಗೂ ಶ್ರೀ ಬನಶಂಕರಿ ದೇವಿ ದೇವಾಲಯಗಳಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ ಪ್ರಯುಕ್ತ ಪ್ರತಿದಿನ ಸಂಜೆ ವಿಶೇಷ ಪೂಜೆ ವಿಜೃಂಭಣೆಯಿಂದ ನಡೆಯಲಿದೆ.

ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ವಿಶೇಷ ವೇದಿಕೆ ನಿರ್ಮಿಸಿ, ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಉತ್ಸವಮೂರ್ತಿ, ಪರಿವಾರ ದೇವತೆಗಳು ಹಾಗೂ ಶ್ರೀ ಲಕ್ಷ್ಮೀದೇವಿ ಮೂರ್ತಿಯ ಪ್ರತಿಷ್ಠಾಪಿಸಲಾಗಿದೆ. ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಪ್ರತಿದಿನ ಶ್ರೀ ಸ್ವಾಮಿಯ ಮೂರ್ತಿಗೆ ಪ್ರತಿದಿನ ಮುಂಜಾನೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇದ್ಯ, ತಥಿ ಆರಾಧನೆ ಸೇವೆ, ಅರ್ಚನೆ, ಮಂಗಳಾರತಿ ನೆರವೇರಿಸಲಾಗುತ್ತದೆ.

ಸಂಜೆ ೬.೩೦ಕ್ಕೆ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ, ಶ್ರೀ ಲಕ್ಷ್ಮೀ ದೇವಿ ಹಾಗೂ ಶ್ರೀ ದುರ್ಗಾದೇವಿ ಹಾಗೂ ಲಲಿತ ಸಹಸ್ರ ನಾಮಾರ್ಚನೆ ನಂತರ ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ.

ದೇವಾಂಗ ಬಡಾವಣೆಯ ಶ್ರೀ ಚೌಡೇಶ್ವರಿ ಹಾಗೂ ಶ್ರೀ ಬನಶಂಕರಿ ದೇವಿ ದೇವಾಲಯಗಳಲ್ಲಿ ಶ್ರೀದೇವಿಯ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಪೂಜಾ ಮಹೋತ್ಸವ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ