ಮುಸ್ಲಿಂ ಬಾಂಧವರಿಂದ ಗಣಪತಿಗೆ ವಿಶೇಷ ಪೂಜೆ

KannadaprabhaNewsNetwork |  
Published : Sep 17, 2025, 01:05 AM IST
ಫೋಟೊ :  16ಎಚ್‍ಎಚ್‍ಆರ್1ಹೊಳೆಹೊನ್ನೂರಿನ ನೃಪತುಂಗ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿಯ 56ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಎ.ನಾಗೇಶ್ ಅವರಿಗೆ ಮುಸ್ಲಿಂ ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

ನೃಪತುಂಗ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿಯ 56ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಸಂಜೆ ಪಟ್ಟಣದ ಮುಸ್ಲಿಂ ಬಾಂಧವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗ ಮಾಡಿ ಭಾವೈಕ್ಯತೆ ಮೆರೆದರು.

ಹೊಳೆಹೊನ್ನೂರು: ನೃಪತುಂಗ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿಯ 56ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಸಂಜೆ ಪಟ್ಟಣದ ಮುಸ್ಲಿಂ ಬಾಂಧವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗ ಮಾಡಿ ಭಾವೈಕ್ಯತೆ ಮೆರೆದರು. ಈ ವೇಳೆ ಗಣೇಶ ಮೂರ್ತಿಗೆ ಹೂವಿನ ಹಾರ ಹಾಕಿ ಮಂಗಳಾರತಿ ಮಾಡಲಾಯಿತು. ಸಮಾಜದಲ್ಲಿ ಎಲ್ಲಾ ಧರ್ಮದ ಜನರು ಒಂದಾಗಿ ಸೌಹಾರ್ದಯುತವಾಗಿ ಬಾಳುವಂತೆ ಮನವಿ ಮಾಡಲಾಯಿತು. ಈ ವೇಳೆ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಎ.ನಾಗೇಶ್ ಅವರಿಗೆ ಮುಸ್ಲಿಂ ಮುಖಂಡರು ಅಭಿನಂದಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಶ್ರೀಕಾಂತ್, ಸ್ಥಳೀಯ ಮುಖಂಡರಾದ ಸೈಪುಲ್ಲಾ ಖಾನ್, ಅಮ್ಜದ್ ಖಾನ್, ನೌಷಾದ್ ಆಲಿ ಖಾನ್, ಕಿಜರ್ ಅಹಮ್ಮದ್, ಇಮ್ರಾನ್, ವಾಜೀದ್ ಖಾನ್, ಎಚ್.ಎಂ.ಕೇಶವ, ಕೆ.ಸುಬ್ರಮಣಿ, ಆದಿತ್ಯ, ಪಿಎಸ್‍ಐ ರಮೇಶ್ ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ