ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿತ: ಓರ್ವ ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ.

KannadaprabhaNewsNetwork |  
Published : Apr 27, 2025, 01:31 AM IST
 ಓರ್ವ ಸಾವು,  | Kannada Prabha

ಸಾರಾಂಶ

ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ಹೆಚ್ಚು ಜನರು ಗ್ಯಾಲರಿಯಲ್ಲಿ ಕುಳಿತಿದ್ದ ಹಿನ್ನೆಲೆಯಲ್ಲಿ ವೀಕ್ಷಣಾ ಗ್ಯಾಲರಿ ಕುಸಿದಿದ್ದರಿಂದ ಗ್ರಾಮದ ಪಾಪಣ್ಣಚಾರಿ (50) ಸ್ಥಳದಲ್ಲಿ ಮೃತಪಟ್ಟರು.

ಮಂಡ್ಯ: ಕಬಡ್ಡಿ ಪಂದ್ಯ ನಡೆಯುವ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಕಬಡ್ಡಿ ಪಂದ್ಯಾವಳಿ ವೇಳೆ ಹೆಚ್ಚು ಜನರು ಗ್ಯಾಲರಿಯಲ್ಲಿ ಕುಳಿತಿದ್ದ ಹಿನ್ನೆಲೆಯಲ್ಲಿ ವೀಕ್ಷಣಾ ಗ್ಯಾಲರಿ ಕುಸಿದಿದ್ದರಿಂದ ಗ್ರಾಮದ ಪಾಪಣ್ಣಚಾರಿ (50) ಸ್ಥಳದಲ್ಲಿ ಮೃತಪಟ್ಟರು. ಮಕ್ಕಳು ಸೇರಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಮಂಡ್ಯ ಮಿಮ್ಸ್ ಸೇರಿ ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತನ ಕಡೆಯವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌