ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಜಿಪಂ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲೆಯ ಅಭಿವೃದ್ಧಿ ಕೆಲಸಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 240 ಎಕರೆ ಭೂ ಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. 40 ಎಕರೆ ಭೂಮಿಗೆ ಪರಿಹಾರ ನೀಡಲು ಶೀಘ್ರವಾಗಿ ಕ್ರಮ ವಹಿಸುವಂತೆ ಹೇಳಿದರು.
ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಜಿಲ್ಲೆಯಲ್ಲಿ 393.85 ಕೋಟಿ ರು. ವೆಚ್ಚದಲ್ಲಿ 46 ಕಿ.ಮೀ. 12 ರಸ್ತೆಗಳನ್ನು ಆಯ್ಕೆ ಮಾಡಲಾಗಿದೆ. ವೈಟ್ ಟಾಪಿಂಗ್ ಮಾಡುವುದರಿಂದ ರಸ್ತೆಯು ಹೆಚ್ಚು ವರ್ಷಗಳ ಕಾಲ ಬಳಕೆಗೆ ಬರಲಿದೆ ಎಂದು ಅವರು ತಿಳಿಸಿದರು.ಶಾಸಕ ತನ್ವೀರ್ ಸೇಠ್ ಮಾತನಾಡಿ, ವಿಮಾನ ನಿಲ್ದಾಣ ವಿಸ್ತರಣೆ ಮಾಡುವುದರಿಂದ ಮೈಸೂರು ನಗರ ಅಭಿವೃದ್ಧಿಯಾಗಲಿದೆ. ಐಟಿ ಕಂಪನಿಗಳ ಬೆಳವಣಿಗೆ ಹಾಗೂ ಕಾರ್ಗೋ ಸಿಸ್ಟಂ ಹೆಚ್ಚಳವಾಗಲಿದೆ. ರೋಡ್ ಟಾಪಿಂಗ್ ಮಾಡುವ ಮೊದಲು ಅಧಿಕಾರಿಗಳು ಶಾಸಕರೊಂದಿಗೆ ರಸ್ತೆಗಳ ವಿಸ್ತರಣೆ, ಯುಜಿಡಿ ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ಚರ್ಚಿಸಿ ನಂತರ ಕೆಲಸಗಳನ್ನು ಪ್ರಾರಂಭಿಸಬೇಕು ಎಂದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಕೆ. ಹರೀಶ್ ಗೌಡ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಮೊದಲಾದವರು ಇದ್ದರು.
- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ
ಕನ್ನಡಪ್ರಭ ವಾರ್ತೆ ಮೈಸೂರು
ನೀವು ಸಚಿವರಾಗಿಯೇ ಇರುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನಂತೂ ಸೇಫ್ ಎಂದು ಮಾರ್ಮಿಕವಾಗಿ ಉತ್ತರ ನೀಡಿದರು.
ಅಧಿಕಾರ ಯಾರಪ್ಪನ ಮನೆ ಆಸ್ತಿ, ಎಂಎಲ್ಎ ಇದ್ದಾಗಲೂ ಕೆಲಸ ಮಾಡಬಹುದು, ಸಚಿವರಾದಾಗಲೂ ಕೆಲಸ ಮಾಡಬಹುದು. ನಾನು ಯಾವಾಗಲೂ ಯಾವುದಕ್ಕೂ ತಲೆ ಕೆಡಿಸಿಕೊಂಡವನಲ್ಲ ಎಂದರು.
ದಲಿತ ಸಮಾವೇಶ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷ ಒಂದು ಚಳವಳಿ. ಚಳವಳಿ ನಿರಂತರವಾಗಿ ನಡೆಯುತ್ತಿರುತ್ತದೆ. ಪಕ್ಷಕ್ಕೆ ಪೂರಕವಾದ ಚಟುವಟಿಕೆಗಳನ್ನ ನಡೆಸಲು ಅನುಮತಿ ಬೇಕಾಗಿಲ್ಲ. ಪಕ್ಷಕ್ಕೆ ವಿರುದ್ಧವಾದ ಸಮಾವೇಶವಾದದರೇ ಪಕ್ಷವೇ ಮಧ್ಯ ಪ್ರವೇಶ ಮಾಡುತ್ತದೆ. ದಲಿತ ಸಮಾವೇಶದ ರೂಪುರೇಷೆಗಳು ನಿರಂತರವಾಗಿ ನಡೆಯುತ್ತಿರುತ್ತದೆ ಎಂದರು.