ವಿಶ್ವದಲ್ಲಿ ಭಾವೈಕ್ಯತೆ ನೆಲೆಗೊಳ್ಳಲು ಆಧ್ಯಾತ್ಮ ಭದ್ರ ಬುನಾದಿ

KannadaprabhaNewsNetwork |  
Published : Feb 19, 2026, 02:30 AM IST
18ಕೆಪಿಎಲ್‌03 ನಗರದ ದೇವರಾಜ್ ಅರಸ್ ಕಾಲೋನಿಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏರ್ಪಡಿಸಿದ ಭಾವೈಕ್ಯತ ಮಹೋತ್ಸವ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಶ್ವದಲ್ಲಿ ಏಕತೆ, ಸಹೋದರತೆ, ಸೌಹಾರ್ದತೆ, ಭಾವೈಕ್ಯತೆ ನೆಲೆಸಬೇಕಾದರೆ ವ್ಯಕ್ತಿ ವ್ಯಕ್ತಿಗಳ ಮಧ್ಯೆ ರಾಷ್ಟ್ರ ರಾಷ್ಟ್ರಗಳ ಮಧ್ಯೆ ಈರ್ಷೆ, ದ್ವೇಷ ಸಮಾಪ್ತಿಯಾಗಿ ಸ್ನೇಹ, ಸಹಯೋಗ, ಸಹಬಾಳ್ವೆ ನೆಲೆಸಬೇಕಾದರೆ ಪ್ರತಿಯೊಬ್ಬ ವ್ಯಕ್ತಿಗೂ ಅಧ್ಯಾತ್ಮ ಶಿಕ್ಷಣ ಅತ್ಯಗತ್ಯವಾಗಿದೆ

ಕೊಪ್ಪಳ: ಭಾರತ ದೇಶ ವಿವಿಧ ವೇಷ, ಭಾಷೆ, ಧರ್ಮ, ಸಂಸ್ಕೃತಿ ಹೊಂದಿದ್ದರೂ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ. ವಿಶ್ವದಲ್ಲಿ ಭಾವೈಕ್ಯತೆ ನೆಲೆಗೊಳ್ಳಬೇಕಾದರೆ ಭದ್ರಬುನಾದಿ ಎಂದರೆ ಅದು ಅಧ್ಯಾತ್ಮ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸದಸ್ಯ ಸಿ.ವಿ. ಚಂದ್ರಶೇಖರ್ ಹೇಳಿದರು.

ನಗರದ ದೇವರಾಜ್ ಅರಸ್ ಕಾಲನಿಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏರ್ಪಡಿಸಿದ ಭಾವೈಕ್ಯತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಬುದ್ಧಿಜೀವಿ. ಒಳ್ಳೆಯ ಕೆಲಸ ಕಾರ್ಯ ಮಾಡಿ ನಾವು ಪರಮಾತ್ಮನ ಮೆಚ್ಚುಗೆಗೆ ಪಾತ್ರರಾಗಬೇಕು ಎಂದರು.

ಈಶ್ವರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ಯೋಗಿನಿ ಮಾತನಾಡಿ, ವಿಶ್ವದಲ್ಲಿ ಏಕತೆ, ಸಹೋದರತೆ, ಸೌಹಾರ್ದತೆ, ಭಾವೈಕ್ಯತೆ ನೆಲೆಸಬೇಕಾದರೆ ವ್ಯಕ್ತಿ ವ್ಯಕ್ತಿಗಳ ಮಧ್ಯೆ ರಾಷ್ಟ್ರ ರಾಷ್ಟ್ರಗಳ ಮಧ್ಯೆ ಈರ್ಷೆ, ದ್ವೇಷ ಸಮಾಪ್ತಿಯಾಗಿ ಸ್ನೇಹ, ಸಹಯೋಗ, ಸಹಬಾಳ್ವೆ ನೆಲೆಸಬೇಕಾದರೆ ಪ್ರತಿಯೊಬ್ಬ ವ್ಯಕ್ತಿಗೂ ಅಧ್ಯಾತ್ಮ ಶಿಕ್ಷಣ ಅತ್ಯಗತ್ಯವಾಗಿದೆ. ವಸುದೈವ ಕುಟುಂಬಕಂ ಎನ್ನುವಂತೆ ವಿಶ್ವವೇ ಒಂದು ಕುಟುಂಬ. ನಾವೆಲ್ಲರೂ ವಿಶ್ವಪಿತ ಪರಮಾತ್ಮನ ಮಕ್ಕಳು ಎಂಬ ಸತ್ಯ ಅರಿವಾದಾಗ ಸಮಾಜದಲ್ಲಿ ಏಕತೆ ವಿಶ್ವಾಸ ನೆಲೆಗೊಳ್ಳಲು ಸಾಧ್ಯ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣಪ್ಪ ಚೌಹಾಣ್ ಮಾತನಾಡಿ, ದೈನಂದಿನ ಒತ್ತಡದ ಬದುಕಿನಲ್ಲಿ ಶಾಂತಿ ಪಡೆಯಲು ಇಂತಹ ಕಾರ್ಯಕ್ರಮಗಳು ದಾರಿದೀಪವಾಗಿದೆ ಎಂದರು.

ನಗರಸಭೆ ಮಾಜಿ ಸದಸ್ಯ ರಫೀಕ್ ಅಹಮದ್ ಮಾತನಾಡಿ, ನಾವೆಲ್ಲರೂ ಒಂದೇ. ನಾವೆಲ್ಲರೂ ಒಂದಾಗಿ ಸಮಾಜ ಸೇವೆಯಲ್ಲಿ ನಮ್ಮ ಬದುಕನ್ನು ಸಾರ್ಥಕ ಪಡಿಸಿಕೊಳ್ಳೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಸ್ತುತಪಡಿಸಿದ ಭಾವೈಕ್ಯತೆ ಸಾರುವ ನೃತ್ಯ ಹಾಗೂ ಕಿರು ನಾಟಕ ಎಲ್ಲರ ಮನಸ್ಸೆಳೆಯಿತು. ಮುಖಂಡ ವೀರೇಶ್ ಮಹಾಂತಯ್ಯನಮಠ, ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ಪದ್ಮ ಜೈನ್, ಪತ್ರಕರ್ತರಾದ ಸಿದ್ದಪ್ಪ ಹಂಚಿನಾಳ, ಶಿವರಾಜ್ ನುಗಡೋಣಿ, ಫಕೀರಪ್ಪ ಗೋಟೂರ್, ಹರೀಶ್ ಕುಲಕರ್ಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಿ.ಕೆ.ಸ್ನೇಹ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಕಗಿರಿ ಕ್ಷೇತ್ರದಲ್ಲಿ ಸಚಿವರಿಂದ ಅಟ್ರಾಸಿಟಿ ಕೇಸ್ ಭಾಗ್ಯ
ಸರ್ವರಲ್ಲೂ ಸಮಾನ ಮನೋಭಾವ ಹೊಂದಿದ್ದ ಶಾಂತವೀರ ಪಟ್ಟಾಧ್ಯಕ್ಷರು: ಡಾ. ತೋಂಟದ ಸಿದ್ದರಾಮ ಸ್ವಾಮೀಜಿ