ಕನ್ನಡಪ್ರಭ ವಾರ್ತೆ ಹಲಗೂರು
ಚೌಕಿಮಠ ರಸ್ತೆಯ ಲೀಲಾ ನಾಗರಾಜಪ್ಪ ಎಜುಕೇಶನಲ್ ಟ್ರಸ್ಟ್, ವಿದ್ಯಾಧಾರೆ ಪ್ರೀಸ್ಕೂಲ್ ನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಘಟಿಕೋತ್ಸವದಲ್ಲಿ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಕ್ರೀಡಾರಂಗದಲ್ಲಿ ಹಾಗೂ ವಿದ್ಯಾರಂಗದಲ್ಲಿ ಅವಕಾಶಗಳು ಕಡಿಮೆ. ಆದರೆ, ನಗರ ಪ್ರದೇಶಗಳಲ್ಲಿ ಎಲ್ಲಾ ಸೌಲಭ್ಯಗಳು ಸಿಗುವುದರಿಂದ ಅಲ್ಲಿನ ಮಕ್ಕಳಿಗೆ ಅವಕಾಶ ಹೆಚ್ಚಿರುತ್ತದೆ ಎಂದರು.
ಗ್ರಾಮೀಣದ ಭಾಗದ ಮಕ್ಕಳಿಗೂ ಎಲ್ಲಾ ಕ್ಷೇತ್ರದಲ್ಲೂ ಅವಕಾಶಗಳು ಸಿಗಬೇಕೆಂಬ ಗುರಿ ಇಟ್ಟುಕೊಂಡು ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಮ್ಮ ಶಾಲೆಯಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೂ ಆದ್ಯತೆ ನೀಡಲು ಹಲಗೂರಿನಲ್ಲಿ ಸ್ಪೋರ್ಟ್ಸ್ ಅಕಾಡೆಮಿ ಪ್ರಾರಂಭಿಸುತ್ತಿರುವುದಾಗಿ ತಿಳಿಸಿದರು.ಮಂಡ್ಯ ರಾಯಲ್ ಚೆಸ್ ಅಕಾಡೆಮಿ ವೃತ್ತಿಪರ ಚೆಸ್ ತರಬೇತುಗಾರ ಚೇತನ್ ಮಾತನಾಡಿ, ನಾನು ಮೊದಲು ಚದುರಂಗ ಆಟವನ್ನು ಹವ್ಯಾಸವಾಗಿ ಆಡುತ್ತಿದ್ದೆ. ನಂತರ ಅದನ್ನು ವೃತ್ತಿಯಾಗಿ ಜೀವನದಲ್ಲಿ ಅಳವಡಿಸಿಕೊಂಡು ಬೇರೆಯವರಿಗೆ ಅದನ್ನು ಕಲಿಸುವ ತರಗತಿಗಳನ್ನು ನಡೆಸುತ್ತಿರುವುದಾಗಿ ತಿಳಿಸಿದರು.
ಸಂಸ್ಥೆ ಮೇಲ್ವಿಚಾರಕಿ ಎಚ್.ವಿ.ಶ್ವೇತಕುಮಾರಿ ಮಾತನಾಡಿ, ನಾವು ಯಾವುದೇ ಆಟವಾಡಬೇಕಾದರೆ ಏಕಾಗ್ರತೆ ಮುಖ್ಯ. ಇದರಿಂದ ಮಾತ್ರ ಕ್ರೀಡೆಯಲ್ಲಿ ಗೆಲ್ಲುವುದಕ್ಕೆ ಸಾಧ್ಯ. ವ್ಯಾಸಂಗದ ಜೊತೆಗೆ ಕ್ರೀಡೆಗೆ ನಿಮ್ಮ ಮಕ್ಕಳನ್ನು ಸೇರಿಸಿ ಪ್ರೋತ್ಸಾಹಿಸಬೇಕು. ಇದರಿಂದ ದೇಹ ದೃಢವಾಗುವುದರ ಜೊತೆಗೆ ಜ್ಞಾನಾರ್ಜನೆಗೂ ಸಹಕಾರಿಯಾಗಲಿದೆ ಎಂದರು.
ನಂತರ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಸೌಮ್ಯಾ, ಶ್ರುತಿ, ಮಧು, ಲಕ್ಷ್ಮೀ, ಮಾಲಾ , ಶರತ್ ಸೇರಿದಂತೆ ಇತರರು ಇದ್ದರು.