ಕ್ರೀಡೆ ಸ್ನೇಹ ಮತ್ತು ಸೌಹಾರ್ದತೆಯ ಸಂಕೇತ: ಮಲ್ಲಿಕಾರ್ಜುನ್

KannadaprabhaNewsNetwork |  
Published : Jul 15, 2026, 01:45 AM IST
14ಕೆಎಂಎನ್ ಡಿ23 | Kannada Prabha

ಸಾರಾಂಶ

ಸಂಘಟನೆಗಳು ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕೆಲಸ ಮಾಡುತ್ತಿವೆ. ಕ್ರೀಡೆಯು ಯುವಕರ ಸರ್ವತೋಮುಖ ಬೆಳವಣಿಗೆಗೆ ಅತ್ಯಂತ ಅಗತ್ಯ. ಕ್ರಿಕೆಟ್ ನಂತಹ ತಂಡದ ಆಟಗಳು ಶಿಸ್ತು, ಸಹಕಾರ, ನಾಯಕತ್ವ ಗುಣಗಳನ್ನು ಬೆಳೆಸುತ್ತವೆ.

ಕೆ.ಆರ್.ಪೇಟೆ:

ಕ್ರೀಡೆ ಎನ್ನುವುದು ಪರಸ್ಪರ ಸ್ನೇಹ ಮತ್ತು ಸೌಹಾರ್ದತೆಯ ಸಂಕೇತ. ಕ್ರೀಡೆ ಮೂಲಕ ನಮ್ಮ ಬಾಂಧವ್ಯಗಳನ್ನು ವೃದ್ಧಿಗೊಳಿಸಿಕೊಳ್ಳಬೇಕು ಎಂದು ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಕರೆ ನೀಡಿದರು.

ತಾಲೂಕಿನ ಬಲ್ಲೇನಹಳ್ಳಿಯಲ್ಲಿ ಸ್ನೇಹ ಜೀವಿ ಬಳಗದ ಯುವಕರ ವತಿಯಿಂದ ಆಯೋಜಿಸಿದ್ದ ಬಿಪಿಎಲ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಸ್ನೇಹ ಜೀವಿ ಬಳಗದ ಯುವಕರು ಗ್ರಾಮದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು ಮಾಡುತ್ತಿರುವ ಪ್ರಯತ್ನ ಅಭಿನಂದನೀಯ ಎಂದರು.

ಸಂಘಟನೆಗಳು ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕೆಲಸ ಮಾಡುತ್ತಿವೆ. ಕ್ರೀಡೆಯು ಯುವಕರ ಸರ್ವತೋಮುಖ ಬೆಳವಣಿಗೆಗೆ ಅತ್ಯಂತ ಅಗತ್ಯ. ಕ್ರಿಕೆಟ್ ನಂತಹ ತಂಡದ ಆಟಗಳು ಶಿಸ್ತು, ಸಹಕಾರ, ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದರು. ಈ ವೇಳೆ ವಿದ್ಯುತ್ ಗುತ್ತಿಗೆದಾರ ಬಲ್ಲೆನಹಳ್ಳಿ ರಾಮು, ದರ್ಶನ್, ಮಂಜುನಾಥ್, ಪ್ರಶಾಂತ್ , ಉಮೇಶ್, ನಂದನ್, ಸಚಿನ್, ಕುಮಾರ್, ಹೇಮಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೌರಕಾರ್ಮಿಕರು ಸುರಕ್ಷಾ ಪರಿಕರ ಧರಿಸಿ ಕೆಲಸ ಮಾಡಬೇಕು: ಸತೀಶ್ ಕುಮಾರ್

ಪಾಂಡವಪುರ:ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಪೌರಕಾರ್ಮಿಕರು ಸುರಕ್ಷಾ ಪರಿಕರ ಧರಿಸಿಕೊಂಡು ಕೆಲಸ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್ ತಿಳಿಸಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಪಂಚಾಯತ್ ರಾಜ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಕೇಂದ್ರ ಸರಕಾರದ ‘ನಮಸ್ತೆ ಯೋಜನೆಯಡಿ’ ಪೌರ ಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ವಿತರಿಸಿ ಮಾತನಾಡಿದರು.ನಮ್ಮ ಸುತ್ತಮುತ್ತಲಿನ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಪೌರಕಾರ್ಮಿಕರು ಸುರಕ್ಷತಾ ಪರಿಕರಗಳನ್ನು ಧರಿಸದೆ ಯಾವುದೇ ಕಾರಣಕ್ಕೂ ಸ್ವಚ್ಛತೆ ಕೆಲಸದಲ್ಲಿ ತೊಡಗಿಕೊಳ್ಳಬಾರದು ಎಂದರು.

ಒಳಚರಂಡಿಯ ಕೆಲಸ ಕಾರ್ಯದಲ್ಲಿ ತೊಡಗಿಕೊಂಡಾಗ ರಕ್ಷಾ ಕವಚಗಳನ್ನು ಕಡ್ಡಾಯವಾಗಿ ಧರಿಸಬೇಕು. ಸ್ವಚ್ಛತೆ ಜೊತೆಗೆ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದು ಮನವಿ ಮಾಡಿದರು.ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಕೋಮಲ, ಪರಿಸರ ಇಂಜಿನಿಯರ್ ಎಂ.ಸಿ.ಸಹನಾ, ಪುರಸಭೆ ಆರೋಗ್ಯಾಧಿಕಾರಿ ಮಂಜುನಾಥ್, ಪೌರಕಾರ್ಮಿಕರಾದ ಶಿವಕುಮಾರ್, ಗಣೇಶ್, ಈಶ್ವರ, ಚಂದ್ರ, ಕುಪ್ಪಸವಾಮಿ, ಮುರುಗೇಶ್‌ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌: ಶೇ.56 ಗಣತಿ ನಮೂನೆ ಗಣಕೀಕರಣ ಪೂರ್ಣ
ಮಣ್ಣೆತ್ತಿನ ಅಮಾವಾಸ್ಯೆ: ಮಾದಪ್ಪನಲ್ಲಿ ಭಕ್ತ ಸಾಗರ