ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ಆದಿಚುಂಚನಗಿರಿಯ ಹೇಮಗಿರಿ ಶಾಖಾಮಠಕ್ಕೆ ಸೇರಿದ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾ ಚಟುವಟಿಕೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸತತ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಗುರಿ ಮುಟ್ಟಲು ಸಾಧ್ಯ ಎಂದರು.ವಿದ್ಯಾರ್ಥಿಗಳು ಹಾಗೂ ಯುವ ಜನರು ಕ್ರೀಡಾ ಚಟುವಟಿಕೆಗಳೆಂದು ನಿರ್ಲಕ್ಷ ಮಾಡದೆ ಶಿಕ್ಷಣಕ್ಕೆ ನೀಡುವಷ್ಟು ಮಹತ್ವವನ್ನು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.
ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಶ್ರೀರಾಮ ಯೋಗೀಶ್ವರ ಮಠದ ಶ್ರೀಶಿವಬಸವ ಸ್ವಾಮೀಜಿಗಳು ಕ್ರೀಡಾ ಜ್ಯೋತಿ ಸ್ವೀಕರಿಸಿ, ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಯ ಅನಾವರಣಕ್ಕೆ ಕ್ರೀಡಾಕೂಟವು ಉತ್ತಮವಾದ ವೇದಿಕೆಯಾಗಿದೆ ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಬೇಕು ಎಂದು ಸಲಹೆ ನೀಡಿದರು.