ಕ್ರೀಡೆಗಳು ವಿದ್ಯಾರ್ಥಿಗಳಿಗೆ ಅರೋಗ್ಯಕ್ಕೆ ಪೂರಕ: ವಸಂತಕುಮಾರ

KannadaprabhaNewsNetwork |  
Published : Sep 11, 2026, 01:15 AM IST
ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸಹಾಯಕ ಆಯುಕ್ತ ಮಹ್ಮದ್‌ ಜಿಲಾನಿ ಹಾಗೂ ತಹಸೀಲ್ದಾರ್‌ ಚಂದ್ರಶೇಖರ ಭೇಟಿ ನೀಡಿ ತಡರಾತ್ರಿ ರೈತರಿಂದ ಮನವಿ ಸ್ವೀಕರಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳ ದೈಹಿಕ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಪೂರಕವಾಗಿವೆ ಎಂದು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಸಂತಕುಮಾರ ಹೇಳಿದರು. ವಿಸಿ ಫಾರ್ಮ್ ಕ್ರೀಡಾಗಣದಲ್ಲಿ ಜಿ.ಮಲ್ಲಿಗೆರೆ ಪ್ರೌಢಶಾಲೆ ಆಯೋಜಿಸಿದ್ದ ದುದ್ದ ಹೋಬಳಿ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕನ್ನಡಪ್ರಭವಾರ್ತೆ ಮಂಡ್ಯ

ವಿದ್ಯಾರ್ಥಿಗಳ ದೈಹಿಕ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಪೂರಕವಾಗಿವೆ ಎಂದು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಸಂತಕುಮಾರ ಹೇಳಿದರು. ವಿಸಿ ಫಾರ್ಮ್ ಕ್ರೀಡಾಗಣದಲ್ಲಿ ಜಿ.ಮಲ್ಲಿಗೆರೆ ಪ್ರೌಢಶಾಲೆ ಆಯೋಜಿಸಿದ್ದ ದುದ್ದ ಹೋಬಳಿ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಳಿಕ ಮಾತನಾಡಿದ ಎಂ.ಎಂ.ಫೌಂಡೇಶನ್ ಅಧ್ಯಕ್ಷರಾದ ಮುದ್ದನಘಟ್ಟ ಮಹಾಲಿಂಗೇಗೌಡ, ಕ್ರೀಡಾಕೂಟದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಮತ್ತು ಕ್ರೀಡಾ ಮನೋಭಾವ ಹೊಂದಿರಬೇಕು. ಸೋತರೆ ಎದೆಗುಂದದೆ ಗೆಲ್ಲುವ ಕಡೆ ಮನಸು ಮಾಡಿ ಸಾಧಕರಾಗಿ. ನಿಮ್ಮ ಗ್ರಾಮ ಶಾಲೆ ಜಿಲ್ಲೆಗೆ ಹೆಸರು ತರುವ ಕೆಲಸ ಮಾಡಬೇಕು ಎಂದರು.

ಕ್ರೀಡಾಜ್ಯೋತಿಯನ್ನು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ. ಆರ್. ಶಶಿಧರ ಈಚಗೆರೆ ವಿದ್ಯಾರ್ಥಿಗಳಿಂದ ಸ್ವೀಕರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್ ಧ್ವಜಾರೋಹಣ ಮಾಡಿದರು.

ಕ್ರೀಡಾಕೂಟದಲ್ಲಿ ದುದ್ದ ಹೋಬಳಿಯ 13 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಧಿಕಾರಿ ಜಿ.ಆರ್. ಶಿವರಾಮು, ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಬೋರೆಗೌಡ, ಉಪಾಧ್ಯಕ್ಷರಾದ ಜಯಶೀಲಾ, ವೈದ್ಯಾಧಿಕಾರಿ ಸಹನಾ ಡಿ.ಎಸ್., ಕಾರ್ಯದರ್ಶಿ ಕೆ.ಸಿ.ಗೋವಿಂದ, ರಾಜ್ಯ ಪರಿಷತ್ ಸದಸ್ಯ ಎನ್ . ಗೋಪಿನಾಥ್, ಸಂಘದ ಉಪಾಧ್ಯಕ್ಷರಾದ ಯತಿರಾಜು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಮೇಶ್ ಪ್ರಭು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎ.ಚಿಕ್ಕೇಗೌಡ, ಶಿಕ್ಷಣ ಸಂಯೋಜಕರಾದ ಡಿ ಕೆ ರಾಮಯ್ಯ, ಎ.ಎನ್. ಚಂದ್ರಪ್ಪ, ಜಿ. ಮಲ್ಲಿಗೆರೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಮುದ್ದಣ್ಣ, ಎಸ್‌ಡಿಎಂಸಿ ಅಧ್ಯಕ್ಷರಾದ ಕುಮಾರ್, ಬಸವರಾಜು, ಶಿವಾನಂದ , ಮಾದೇಶ್, ಶ್ರೀನಿವಾಸ್ ಮುಂತಾದ ಶಿಕ್ಷಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಚ್ಚಪ್ಪ ಜಮಾದಾರ ನಿಂದನೆ ಖಂಡಿಸಿ ಪ್ರತಿಭಟನೆ
ಭವಿಷ್ಯದ ಸವಾಲುಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ: ಸಂಸದ ರಾಧಾಕೃಷ್ಣ ದೊಡ್ಡಮನಿ