ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಪೋಷಕರು, ಶಿಕ್ಷಕರು ಹಾಗೂ ಸಮಾಜದ ಎಲ್ಲ ಸಾಮಾನ್ಯ ಜನರು ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸ್ವಲ್ಪ ಸಹಾಯ ಮಾಡಿದರೂ ಅವರಿಗೆ ತುಂಬಾ ಅನುಕೂಲವಾಗುತ್ತದೆ. ತಾವೆಲ್ಲರೂ ಈ ನಿಟ್ಟಿನಲ್ಲಿ ಸಾಮಾಜಿಕ ಕಳಕಳಿಯಿಂದ ಸಹಕರಿಸಬೇಕೆಂದು ತಿಳಿಸಿದರು.ಕ್ಷೇತ್ರ ಸಮನ್ವಯಾಧಿಕಾರಿ ಸೌಮ್ಯಾ ಎನ್., ಕಾರ್ಯಕ್ರಮದ ಆಶಯವನ್ನು ಪ್ರಾಸ್ತಾವಿಕ ಭಾಷಣದಲ್ಲಿ ನುಡಿದರು.ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಸಬಿತಾ ಮೋನಿಸ್ ಮಾತಾನಾಡಿ, ತಮ್ಮ ಜೀವನದ ಸಾಧನೆಯ ಮೆಟ್ಟಿಲುಗಳನ್ನು ಎಳೆ ಎಳೆಯಾಗಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ನೆರೆದಿರುವರಿಗೆ ತಿಳಿಸಿದರು.
ಎರಡೂ ಕೈಯಿಲ್ಲದಿದ್ದರೂ ತನ್ನ ದೈನಂದಿನ ಬದುಕಿನಲ್ಲಿ ಇತರರನ್ನು ಹೆಚ್ಚು ಅವಲಂಭಿಸದೆ ಬದುಕುವ ಕಲೆಯನ್ನು ತಿಳಿಸಿ ಮಾದರಿ ಬರವಣಿಗೆಯನ್ನು ಹಾಗೂ ಆಹಾರ ಸೇವನೆಯನ್ನು ಕಾಲಿನಿಂದ ಮಾಡಿ ತೋರಿಸಿದರು. ಅವರ ಸಾಧನೆಯ ಶಿಖರವು ಸಾಮಾನ್ಯ ವ್ಯಕ್ತಿಗಳಿಗೆ ತಮ್ಮನ್ನು ತಾವು ಆತ್ಮಾವಲೋಕನ ಮಾಡಲು ಅನುವು ಮಾಡಿತು. ಶಿಕ್ಷಣ ಸಂಯೋಜಕ ರಾಜೇಶ್ ಭಟ್, ಸಬಿತಾ ಮೋನಿಸ್ ಅವರ ಪರಿಚಯವನ್ನು ಪ್ರಸ್ತುತ ಪಡಿಸಿದ ಬಳಿಕ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮೂಡುಬಿದಿರೆ ತಾಲೂಕು ವೈದ್ಯಾಧಿಕಾರಿ ಡಾ.ಅಕ್ಷತಾ ನಾಯಕ್, ಸಿ.ಆರ್.ಪಿ. ರೋಬರ್ಟ್ ಡಿಸೋಜ, ದಿನಕರ ಹಾಗೂ ಶಾಲಾ ಮುಖ್ಯ ಶಿಕ್ಷಕರಾದ ವತ್ಸಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಹ ಶಿಕ್ಷಕಿ ಸುಜಾತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಿ.ಐ.ಇ.ಆರ್.ಟಿ. ಸುಶೀಲಾ ಸ್ವಾಗತಿಸಿದರು. ಫ್ಲೇವಿ ಡಿಸೋಜ ವಂದಿಸಿದರು.