ಮಂಡ್ಯ:
ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಯಾವುದೇ ಕೆಲಸಗಳನ್ನು ಮಾಡುವಾಗ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಚಿಂತೆಗಳು, ಯೋಜನೆಗಳು ಬರುತ್ತವೆ. ಆದರೆ, ಕ್ರೀಡಾಕೂಟಗಳಲ್ಲಿ ಯಾವುದೇ ಚಿಂತನೆಗಳು ಬರುವುದಿಲ್ಲ. ಕೇವಲ ಆಟಗಳಲ್ಲಿ ಗಮನವನ್ನು ಕ್ರೇಂದ್ರಿಕರಿಸುವ ಶಕ್ತಿ ಹೊಂದಿದೆ ಎಂದರು.ಯಾವುದೇ ಕ್ರೀಡೆಗಳಾಗಲಿ ಭಾಗವಹಿಸುವುದು ಮುಖ್ಯ. ಪತ್ರಕರ್ತರು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವುದು ಖುಷಿಯ ವಿಚಾರ. ಎಲ್ಲಾ ತಂಡಗಳ ಆಟಗಾರರು ಭಾಗವಹಿಸಿ ಎಂದು ಶುಭ ಹಾರೈಸಿದರು.
ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣೆಗೆ ಡೀಸಿ ಸೂಚನೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಕ್ರೀಡಾಂಗಣಗಳ ನಿರ್ವಹಣೆ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಸೇರಿದಂತೆ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಾಯಿತು. ಕ್ರೀಡಾಂಗಣಗಳ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ಕ್ರೀಡಾಪಟುಗಳಿಗೆ ಉತ್ತಮ ವಾತಾವರಣ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಕ್ರೀಡಾಂಗಣಗಳಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳು, ನಿರ್ವಹಣೆಗೆ ಅಗತ್ಯ ಅನುದಾನ, ಕ್ರೀಡಾ ಪರಿಕರಗಳ ಸಂರಕ್ಷಣೆ ಹಾಗೂ ಸಾರ್ವಜನಿಕರ ಬಳಕೆಗೆ ಕ್ರೀಡಾಂಗಣಗಳನ್ನು ಸುಸಜ್ಜಿತವಾಗಿ ಕಾಯ್ದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.