ಕನ್ನಡಪ್ರಭವಾರ್ತೆ ಚಳ್ಳಕೆರೆ
ಮಂಗಳವಾರ ನಗರದ ಎಚ್ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಪ್ರಸ್ತುತ 2024-26ನೇ ಸಾಲಿನ ಪದವಿ ಪೂರ್ವ ಕಾಲೇಜು ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಪ್ರತಿ ವರ್ಷವೂ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ರೀಡೆಗಳನ್ನು ಏರ್ಪಡಿಸಿ ವಿಜೇತರಿಗೆ ಆರ್ಹತಾ ಪತ್ರ, ಬಹುಮಾನ ನೀಡಿ ಅವರ ಕ್ರೀಡಾಸ್ಫೂರ್ತಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಗರಸಭೆ ಅಧ್ಯಕ್ಷೆ ಬಿ.ಶಿಲ್ಪಮುರುಳಿ ಮಾತನಾಡಿ, ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ಶಿಕ್ಷಣವನ್ನು ಎಷ್ಟು ಗಂಭೀರವಾಗಿ ಅಭ್ಯಾಸ ಮಾಡುತ್ತೇಯೋ ಅಷ್ಟೇ ಗಂಭೀರವಾಗಿ ಕ್ರೀಡಾಭ್ಯಾಸ ಮಾಡಬೇಕು. ಎಲ್ಲಾ ಕ್ರೀಡೆಗಳು ಇಂದು ವಿಶೇಷ ಮಹತ್ವವನ್ನು ಪಡೆದುಕೊಂಡಿವೆ. ಉತ್ತಮ ಕ್ರೀಡಾಪಟುವಿಗೆ ಸದಾಕಾಲ ಹೆಚ್ಚಿನ ಗೌರವ ಲಭಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಎಚ್ಪಿಪಿಸಿ ಕಾಲೇಜು ಪ್ರಾಂಶುಪಾಲ ಡಾ.ಎಂ.ಕೆ.ದೇವಪ್ಪ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರವಿ, ನಗರಸಭೆ ಉಪಾಧ್ಯಕ್ಷೆ ಕವಿತಾ ವೀರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ನಾಮಿನಿ ಸದಸ್ಯ ಆರ್.ವೀರಭದ್ರಪ್ಪ ಮುಂತಾದವರು ಭಾಗವಹಿಸಿದ್ದರು.