ಕ್ರೀಡೆ ಆರೋಗ್ಯ, ಭವಿಷ್ಯಕ್ಕೆ ದಾರಿ: ಆನಂದಗೌಡ ಎಚ್. ಪಾಟೀಲ್

KannadaprabhaNewsNetwork |  
Published : Jan 26, 2026, 04:00 AM IST
ಪೋಟೊ ಕ್ಯಾಪ್ಸನ್:ಡಂಬಳ ಗ್ರಾಮದ ಎಪಿಎಮ್ ಸಿ ಆವರಣದಲ್ಲಿ ಶ್ರೀ ಜಗದ್ಗುರು ತೋಂಟದಾರ್ಯ 286ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಳ ಮತ್ತು ‌ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮುಕ್ತ ಹಾಡ್೯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ಬಿಜೆಪಿ ಮುಖಂಡ ಆನಂದಗೌಡ ಎಚ್ ಪಾಟೀಲ್, ಜಿ.ವಿ.ಹಿರೇಮಠ, ಮುಖಂಡ ಹೇಮಗೀರಶ ಹಾವಿನಾಳ ಇದ್ದರು.ಪೋಟೊ ಕ್ಯಾಪ್ಸನ್:ಡಂಬಳ ಗ್ರಾಮದ ಎಪಿಎಮ್ ಸಿ ಆವರಣದಲ್ಲಿ ಶ್ರೀ ಜಗದ್ಗುರು ತೋಂಟದಾರ್ಯ 286ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಳ ಮತ್ತು ‌ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮುಕ್ತ ಹಾಡ್೯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ  ಆಶಾ ಕಾರ್ಯಕರ್ತೆಯರಿಗೆ ಮತ್ತು ಕ್ರೀಡಾ ಪಟುಗಳಿಗೆ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಬಿಜೆಪಿ ಮುಖಂಡ ಹೇಮಗಿರೀಶ ಹಾವಿನಾಳ ಮಾತನಾಡಿ, ಜೀವನದಲ್ಲಿ ಯುವಕರು ದೈಹಿಕ, ಮಾನಸಿಕವಾಗಿ ಗಟ್ಟಿಯಾಗಿರಬೇಕಾದರೆ ಕ್ರೀಡೆಗೆ ಆದ್ಯತೆ ನೀಡಬೇಕು ಎಂದರು.

ಡಂಬಳ: ಗ್ರಾಮೀಣ ಭಾಗದ ಕ್ರೀಡಾಪಟುಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರೀಡಾ ಇಲಾಖೆಯಿಂದ ಬರುವ ಅನುದಾನವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಕ್ರೀಡಾಪಟುಗಳು ಆಗಬೇಕು ಎಂದು ಬಿಜೆಪಿ ಮುಖಂಡ ಆನಂದಗೌಡ ಎಚ್. ಪಾಟೀಲ್ ತಿಳಿಸಿದರು.

ಡಂಬಳ ಗ್ರಾಮದ ಎಪಿಎಂಸಿ ಆವರಣದಲ್ಲಿ ತೋಂಟದಾರ್ಯ 286ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಳ ಮತ್ತು ‌ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಆಶ್ರಯದಲ್ಲಿ ಮುಕ್ತ ಹಾರ್ಡ್‌ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಯುವಕರು ಮೊಬೈಲ್‌ಗಳಿಂದ ದೂರ ಉಳಿದು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಆರೋಗ್ಯದ ಜತೆಗೆ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ ಎಂದರು.

ಬಿಜೆಪಿ ಮುಖಂಡ ಹೇಮಗಿರೀಶ ಹಾವಿನಾಳ ಮಾತನಾಡಿ, ಜೀವನದಲ್ಲಿ ಯುವಕರು ದೈಹಿಕ, ಮಾನಸಿಕವಾಗಿ ಗಟ್ಟಿಯಾಗಿರಬೇಕಾದರೆ ಕ್ರೀಡೆಗೆ ಆದ್ಯತೆ ನೀಡಬೇಕು ಎಂದರು.

ಡಂಬಳ ಮಠದ ವ್ಯವಸ್ಥಾಪಕ ಜಿ.ವಿ. ಹಿರೇಮಠ ಮಾತನಾಡಿ, ಬ್ರಿಟಿಷರು ದೇಶಕ್ಕೆ ಕೊಟ್ಟ ಬಳವಳಿಗಳಲ್ಲಿ ಇಂಗ್ಲಿಷ್ ಭಾಷೆ, ಕ್ರಿಕೆಟ್ ಪ್ರಮುಖವಾಗಿದೆ. ಅಲ್ಲದೇ ಒಡೆದಾಳುವ ನೀತಿ ಬಿಟ್ಟುಹೋಗಿದ್ದಾರೆ. ದೇಶದ ದೇಶಿಯ ಆಟಗಳಿಗೆ ಆದ್ಯತೆ ನೀಡಬೇಕು. ಅಂದಾಗ ದೇಹ ಸದೃಢತೆಗೆ ಕಾರಣವಾಗಲಿದೆ. ಮೊಬೈಲ್‌ನಿಂದಾಗಿ ಆರೋಗ್ಯ ಹಾಳಾಗುತ್ತಿದೆ. ಇದರಿಂದ ಹೊರಬರಬೇಕು ಎಂದರು.

ಗೋಣಿಬಸಪ್ಪ ಕೊರ್ಲಹಳ್ಳಿ ಮಾತನಾಡಿ, ಕ್ರಿಕೆಟ್ ಕೇವಲ ಆಟವಲ್ಲ, ಅದು ಶಿಸ್ತು, ತಂಡಭಾವನೆ ಹಾಗೂ ನಾಯಕತ್ವವನ್ನು ಬೆಳೆಸುವ ಶ್ರೇಷ್ಠ ಮಾಧ್ಯಮವಾಗಿದೆ ಎಂದರು.

ಡಿಎಸ್‌ಎಸ್ ಸಂಚಾಲಕರಾದ ಸೋಮಣ್ಣ ಹೈತಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಡಿಎಸ್ಎಸ್ ಸಂಚಾಲಕ ದುರಗಪ್ಪ ಹರಿಜನ, ಮಲ್ಲಪ್ಪ ಮಠದ, ಕುಬೇರಪ್ಪ ಕೆ. ಬಂಡಿ, ಮಹೇಶ ಗುಡ್ಡದ, ಬಂದುಸಾಬ ಜಲಾಲನವರ, ಕೆ.ಎನ್. ದೊಡ್ಡಮನಿ, ಪ್ರಕಾಶ ಕೋತಂಬ್ರಿ, ನಿಂಗಪ್ಪ ಮಾದರ, ದುರಗಪ್ಪ ಮಾದರ, ಹಾಲಪ್ಪ ತಾಮ್ರಗುಂಡಿ, ಮರಿಯಪ್ಪ ಸಿದ್ದಣ್ಣವರ, ಯಮನೂರ ದೊಡ್ಡಮನಿ, ದೇವಪ್ಪ ತಳಗೇರಿ, ಮುತ್ತಪ್ಪ ತಳಗೇರಿ, ದೇವಪ್ಪ ತಳಗೇರಿ, ಮುತ್ತಪ್ಪ ದೊಡ್ಡಮನಿ, ವೆಂಕಪ್ಪ ತಳಗೇರಿ, ದುರಗಪ್ಪ ಹರಿಜನ ಇತರರು ಇದ್ದರು. ಲಕ್ಷ್ಮಣ ದೊಡ್ಡಮನಿ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುರೇಶ್‌ ಕುಮಾರ್‌ ವಿವಾದಾತ್ಮಕ ಹೇಳಿಕೆ : ಮಹಿಳೆಯರಿಗೆ ಅವಮಾನ ಆರೋಪ- ದೂರು
ಸರ್ಕಾರದಿಂದ ಕುಡುಕರ ಸೃಷ್ಟಿ: ಬಿವೈವಿ