ಬಿಜೆಪಿ ಮುಖಂಡ ಹೇಮಗಿರೀಶ ಹಾವಿನಾಳ ಮಾತನಾಡಿ, ಜೀವನದಲ್ಲಿ ಯುವಕರು ದೈಹಿಕ, ಮಾನಸಿಕವಾಗಿ ಗಟ್ಟಿಯಾಗಿರಬೇಕಾದರೆ ಕ್ರೀಡೆಗೆ ಆದ್ಯತೆ ನೀಡಬೇಕು ಎಂದರು.
ಡಂಬಳ: ಗ್ರಾಮೀಣ ಭಾಗದ ಕ್ರೀಡಾಪಟುಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರೀಡಾ ಇಲಾಖೆಯಿಂದ ಬರುವ ಅನುದಾನವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಕ್ರೀಡಾಪಟುಗಳು ಆಗಬೇಕು ಎಂದು ಬಿಜೆಪಿ ಮುಖಂಡ ಆನಂದಗೌಡ ಎಚ್. ಪಾಟೀಲ್ ತಿಳಿಸಿದರು.
ಡಂಬಳ ಗ್ರಾಮದ ಎಪಿಎಂಸಿ ಆವರಣದಲ್ಲಿ ತೋಂಟದಾರ್ಯ 286ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಳ ಮತ್ತು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಆಶ್ರಯದಲ್ಲಿ ಮುಕ್ತ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಯುವಕರು ಮೊಬೈಲ್ಗಳಿಂದ ದೂರ ಉಳಿದು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಆರೋಗ್ಯದ ಜತೆಗೆ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ ಎಂದರು.
ಬಿಜೆಪಿ ಮುಖಂಡ ಹೇಮಗಿರೀಶ ಹಾವಿನಾಳ ಮಾತನಾಡಿ, ಜೀವನದಲ್ಲಿ ಯುವಕರು ದೈಹಿಕ, ಮಾನಸಿಕವಾಗಿ ಗಟ್ಟಿಯಾಗಿರಬೇಕಾದರೆ ಕ್ರೀಡೆಗೆ ಆದ್ಯತೆ ನೀಡಬೇಕು ಎಂದರು.
ಡಂಬಳ ಮಠದ ವ್ಯವಸ್ಥಾಪಕ ಜಿ.ವಿ. ಹಿರೇಮಠ ಮಾತನಾಡಿ, ಬ್ರಿಟಿಷರು ದೇಶಕ್ಕೆ ಕೊಟ್ಟ ಬಳವಳಿಗಳಲ್ಲಿ ಇಂಗ್ಲಿಷ್ ಭಾಷೆ, ಕ್ರಿಕೆಟ್ ಪ್ರಮುಖವಾಗಿದೆ. ಅಲ್ಲದೇ ಒಡೆದಾಳುವ ನೀತಿ ಬಿಟ್ಟುಹೋಗಿದ್ದಾರೆ. ದೇಶದ ದೇಶಿಯ ಆಟಗಳಿಗೆ ಆದ್ಯತೆ ನೀಡಬೇಕು. ಅಂದಾಗ ದೇಹ ಸದೃಢತೆಗೆ ಕಾರಣವಾಗಲಿದೆ. ಮೊಬೈಲ್ನಿಂದಾಗಿ ಆರೋಗ್ಯ ಹಾಳಾಗುತ್ತಿದೆ. ಇದರಿಂದ ಹೊರಬರಬೇಕು ಎಂದರು.
ಗೋಣಿಬಸಪ್ಪ ಕೊರ್ಲಹಳ್ಳಿ ಮಾತನಾಡಿ, ಕ್ರಿಕೆಟ್ ಕೇವಲ ಆಟವಲ್ಲ, ಅದು ಶಿಸ್ತು, ತಂಡಭಾವನೆ ಹಾಗೂ ನಾಯಕತ್ವವನ್ನು ಬೆಳೆಸುವ ಶ್ರೇಷ್ಠ ಮಾಧ್ಯಮವಾಗಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.