ಕ್ರೀಡೆ ಮಾನಸಿಕ , ದೈಹಿಕ ಸಾಮರ್ಥ್ಯ ವೃದ್ಧಿಸಲು ಸಹಕಾರಿ

KannadaprabhaNewsNetwork |  
Published : Dec 03, 2025, 02:45 AM IST
ನಿರೂಪಿಸಿ | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ದೈಹಿಕ ಸಾಮರ್ಥ್ಯವನ್ನು ಒರೆಗೆ ಹಚ್ಚಲು ಕ್ರೀಡೆ ಒಂದು ಮಾರ್ಗವಾಗಿದೆ ಎಂದು ಡಾ. ಪುಷ್ಪ ಕುಟ್ಟಣ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ದೈಹಿಕ ಸಾಮರ್ಥ್ಯವನ್ನು ಒರೆಗೆ ಹಚ್ಚಲು ಕ್ರೀಡೆ ಒಂದು ಮಾರ್ಗವಾಗಿದೆ ಎಂದು ಅಂತರಾಷ್ಟ್ರೀಯ ಬಾಸ್ಕೆಟ್ ಬಾಲ್ ಕ್ರೀಡಾಪಟು, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಮಂದಪಂಡ ಡಾ .ಪುಷ್ಪ ಕುಟ್ಟಣ್ಣ ಹೇಳಿದರು.ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಶನಿವಾರ ಸ್ಥಳೀಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಕ್ರೀಡಾ ಜ್ಯೋತಿ ಬೆಳಗಿಸಿದ ಬಳಿಕ ಪಥ ಸಂಚಲನ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.ಕ್ರೀಡೆ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ವೃದ್ಧಿಸಲು ಸಹಕಾರಿ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳು ಉತ್ತಮ ಬದುಕನ್ನು ಕಟ್ಟಿಕೊಳ್ಳಬಹುದಾಗಿದೆ. ಆದರೆ ಬಹುತೇಕ ಪೋಷಕರಲ್ಲಿ ಕ್ರೀಡೆಯ ಬಗ್ಗೆ ನಿರ್ಲಕ್ಷ್ಯ ಭಾವನೆ ಇದ್ದು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಅವಕಾಶ ಕಲ್ಪಿಸಿ ಕೊಡದೆ ಇರುವುದು ಬೇಸರದ ವಿಷಯ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಬೆಳವಣಿಗೆ ಸಾಧ್ಯ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ನಿರರ್ಥಕ ಎಂಬ ಮನೋಭಾವನೆಯನ್ನು ಬದಿಗೊತ್ತಿ ಪೋಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.

ದೈಹಿಕವಾಗಿ ಮಾನಸಿಕವಾಗಿ ಬೆಳವಣಿಗೆ ಸಾಧಿಸಬೇಕು: ಪ್ರಸ್ತುತ ವಿದ್ಯಾರ್ಥಿಗಳಿಗೆ ಅವಕಾಶಗಳಿವೆ, ಹಿಂದಿನ ಕಾಲದಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಕ್ರೀಡಾ ಮೈದಾನಗಳಲ್ಲಿ ಅಭ್ಯಾಸ ಮಾಡಿ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ. ಶಾಲೆಗೆ ನಡೆದುಹೋಗುವ ಪರಿಸ್ಥಿತಿ ಇದ್ದು ಕ್ರೀಡೆಗೆ ಅಗತ್ಯವಿರುವ ಸ್ಟಿಕ್ ಗಳನ್ನು, ಚೆಂಡುಗಳನ್ನು ಸಹ ವಿದ್ಯಾರ್ಥಿಗಳು ಮನೆಗಳಿಂದಲೇ ತರಬೇಕಿತ್ತು. ಈಗ ಹಾಗಿಲ್ಲ. ಪರಿಸ್ಥಿತಿ ಬದಲಾಗಿದೆ. ವಿದ್ಯಾರ್ಥಿಗಳ ಆಯ್ಕೆಗೆ ಉತ್ತಮ ಶಾಲೆಗಳಿವೆ. ಶಾಲೆಗಳಲ್ಲಿ ಕ್ರೀಡಾ ಸೌಲಭ್ಯಗಳಿವೆ. ಕ್ರೀಡೆಯ ನೀತಿ ನಿಯಮಗಳನ್ನು ಹೇಳಿಕೊಡುವ ದೈಹಿಕ ಶಿಕ್ಷಕರಿದ್ದಾರೆ. ಇವುಗಳ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಮುಂದೆ ಬರಬೇಕು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಜೀವನದ ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಬರುತ್ತದೆ . ಹೆದರಿಕೆ ಇಲ್ಲದೆ ವಿದ್ಯಾರ್ಥಿಗಳು ಪಾಲ್ಗೊಂಡು ದೈಹಿಕವಾಗಿ ಮಾನಸಿಕವಾಗಿ ಬೆಳವಣಿಗೆ ಸಾಧಿಸಬೇಕು ಎಂದರು.ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ, ಕಾರ್ಯದರ್ಶಿ ನಾಯಕಂಡ ದೀಪಕ್ ಚಂಗಪ್ಪ, ನಿರ್ದೇಶಕರಾದ ನಿವೃತ್ತ ಡಿ ವೈ ಎಸ್ ಪಿ ಬಿದ್ದಾಟಾಂಡ ಮುತ್ತಣ್ಣ, ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ , ಕಲಿಯಂಡ ಕೌಶಿಕ್ ಕುಶಾಲಪ್ಪ, ಭಟ್ಟಿರ ಸುಬ್ಬಯ್ಯ, ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಹಾಗೂ ಹಿರಿಯರಾದ ಮಂದಪಂಡ ಕುಟ್ಟಣ್ಣ ಮತ್ತು ಶಿಕ್ಷಕ ವರ್ಗ ಸಿಬ್ಬಂದಿ, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳಿಂದ ಅಂಗ ಸಾಧನೆ, ಲೇಜಿಮ್, ಪಥಸಂಚಲನ ಸೇರಿದಂತೆ ವಿವಿಧ ಮನರಂಜನ ಕಾರ್ಯಕ್ರಮ ಜರುಗಿದವು, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ, ಆಡಳಿತ ಮಂಡಳಿ ಪದಾಧಿಕಾರಿ ಸದಸ್ಯರಿಗೆ, ಶಿಕ್ಷಕರಿಗೆ, ಸಿಬ್ಬಂದಿಗೆ, ಪೋಷಕರಿಗೆ ಪ್ರತ್ಯೇಕವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಾದವರಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು.ವಿದ್ಯಾರ್ಥಿ ಪರಿಧಿ ಪೂವಮ್ಮ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಯಾಡಿದರು. ಅತಿಥಿಗಳ ಪರಿಚಯವನ್ನು ಶಿಕ್ಷಕಿ ಉದ್ದಿ ಅಂಡ ಲೀಲಾವತಿ ಮಾಡಿ ದೈಹಿಕ ಶಿಕ್ಷಕಿ ಕನ್ನಡ ಸರಿತಾ ಕ್ರೀಡಾ ವರದಿ ವಾಚಿಸಿದರು, ಶಿಕ್ಷಕರಾದ ಮೂಡೇರ ಕಾಳಯ್ಯ ಹಾಗೂ ಶಿಕ್ಷಕಿ ಕಂಗಂಡ ಶ್ವೇತ ಕಾರ್ಯಕ್ರಮ ನಿರೂಪಿಸಿ ಅನಿತಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆ, ತುರ್ತು ಚಿಕಿತ್ಸೆಗೆ ಸಂಸದರ ಕಟ್ಟುನಿಟ್ಟಿನ ಸೂಚನೆ
ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ: ಸಾಗ್ಯ ಕೆಂಪಯ್ಯ