ಮಾನಸಿಕ ಆರೋಗ್ಯ ಸದೃಢತೆಗೆ ಕ್ರೀಡೆ ಸಹಕಾರಿ

KannadaprabhaNewsNetwork |  
Published : Dec 10, 2025, 01:45 AM IST
೦೮ ವೈಎಲ್‌ಬಿ ೦೧ಯಲಬುರ್ಗಾದ ಕೆಸಿಆರ್ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕ್ರಿಕೆಟ್ ಟೂರ್ನಮೆಂಟ್ ಪಂದ್ಯಾವಳಿಗೆ ಚಾಲನೆ ನೀಡಿ ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ರಂಗಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಇಂದಿನ ಆಹಾರ ಪದ್ಧತಿ, ಒತ್ತಡದ ಬದುಕು ಮತ್ತು ಜೀವನ ಶೈಲಿಯಿಂದಾಗಿ ಮನುಷ್ಯ ನಾನಾ ಕಾಯಿಲೆಗೆ ಒಳಗಾಗುತ್ತಿದ್ದಾನೆ.

ಯಲಬುರ್ಗಾ: ದೈಹಿಕ ಮತ್ತು ಮಾನಸಿಕ ಆರೋಗ್ಯ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜೆ. ರಂಗಸ್ವಾಮಿ ಹೇಳಿದರು.

ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲೂಕು ಕ್ರೀಡಾಂಗಣದಲ್ಲಿ ವಕೀಲರ ಸಂಘದಿಂದ ವಕೀಲರ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ಆಹಾರ ಪದ್ಧತಿ, ಒತ್ತಡದ ಬದುಕು ಮತ್ತು ಜೀವನ ಶೈಲಿಯಿಂದಾಗಿ ಮನುಷ್ಯ ನಾನಾ ಕಾಯಿಲೆಗೆ ಒಳಗಾಗುತ್ತಿದ್ದಾನೆ. ಇಂತಹ ಒತ್ತಡದ ಬದುಕಿನಿಂದ ಹೊರ ಬರಲು ದೈಹಿಕ ಚಟುವಟಿಕೆ, ಕ್ರೀಡೆ ಅವಶ್ಯವಿದೆ ಎಂದರು.

ಸಿವಿಲ್ ನ್ಯಾಯಾಧೀಶ ಸಂಜೀವಕುಮಾರ ಪಚ್ಚಪೋರೆ ಮಾತನಾಡಿ, ನ್ಯಾಯಾಲಯದಲ್ಲಿ ವಾದ, ಪ್ರತಿವಾದಗಳಲ್ಲಿ ನಿರತರಾಗುವ ವಕೀಲರಿಗೆ ಕ್ರಿಕೆಟ್‌ ಪಂದ್ಯಾವಳಿ ಏರ್ಪಡಿಸಿ ಮಾನಸಿಕ ಒತ್ತಡ ಹತೋಟಿಗೆ ತರಲು ಮುಂದಾಗಿರುವುದು ಆರೋಗ್ಯಕರ ಬೆಳವಣಿಗೆ ಎಂದರು.

ವಕೀಲರ ಸಂಘದ ತಾಲೂಕಾಧ್ಯಕ್ಷ ಸುಭಾಷ್ ಹೊಂಬಳ ಅಧ್ಯಕ್ಷತೆ ವಹಿಸಿದ್ದರು.

ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಹಿರಿಯ ವಕೀಲರಾದ ಪ್ರಕಾಶ ಬೇಲೇರಿ, ಎಚ್.ಎಚ್. ಹಿರೇಮನಿ, ಎಸ್.ಎ. ವಾದಿ, ಯು.ಎಸ್. ಮೆಣಸಗೇರಿ, ಪ್ರಕಾಶ ಬೇಲೇರಿ, ಎಂ.ಎಸ್. ನಾಯ್ಕರ, ಆರ್.ಜಿ. ನಿಂಗೋಜಿ, ಡಿ.ಎಚ್. ಪೊಲೀಸ್ ಪಾಟೀಲ್,‌ ಎ.ಎಂ. ಪಾಟೀಲ್, ಆರ್.ಜಿ. ಕುಷ್ಟಗಿಶೆಟ್ಟರ್, ಐ.ಬಿ. ಕೋಳೂರ, ಎಸ್.ಎನ್‌. ಶ್ಯಾಗೋಟಿ, ಎಸ್.ಸಿ. ಗದಗ, ಐ.ಆರ್. ಕೆಂಚಮ್ಮನವರ, ನ್ಯಾಯಾಲಯ ಸಿಬ್ಬಂದಿ ವಿನಾಯಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರೇಕೆರೆ ಒತ್ತುವರಿ ಆರೋಪ: ತುರ್ತು ಕ್ರಮಕ್ಕೆ ಸೂಚನೆ
ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿದೆ: ಮಂಜುಳಾ ಆರೋಪ