ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಾಗಮಂಗಲ ಉಪ ವಿಭಾಗದ ಪೊಲೀಸ್ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತರ ತಂಡಗಳ ನಡುವೆ ಈಚೆಗೆ ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಬಳಿಕ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಬಹಳ ಮುಖ್ಯ. ಕ್ರಿಕೆಟ್ ಸೇರಿದಂತೆ ಇನ್ನಿತರೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.ಪಂದ್ಯಾವಳಿಯಲ್ಲಿ ಎರಡೂ ತಂಡಗಳು ಉತ್ತಮ ರೀತಿಯಲ್ಲಿ ಪ್ರದರ್ಶನ ಕೊಟ್ಟಿವೆ. ಪೊಲೀಸ್ ತಂಡ ಗೆಲುವು ಸಾಧಿಸಿದೆ. ಇದೊಂದು ಒಳ್ಳೆಯ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಇಲಾಖೆಗಳ ತಂಡಗಳನ್ನು ಸಂಘಟಿಸಿ ಮತ್ತೊಂದು ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ನಿಟ್ಟಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮುಂದಾಳತ್ವ ವಹಿಸಬೇಕು. ಇದಕ್ಕೆ ಪೂರಕವಾಗಿ ಪೊಲೀಸ್ ಇಲಾಖೆ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪೊಲೀಸರು ಮತ್ತು ಪತ್ರಕರ್ತರ ಉತ್ಸಾಹ ನೋಡಿ ಬಹಳ ಸಂತೋಷವಾಗಿದೆ. ಯಾವುದೇ ಒಂದು ಕ್ರೀಡೆಯಲ್ಲಿ ಗೆಲುವಿಗಿಂತ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯವಾಗಿರುತ್ತದೆ ಎಂದರು.
ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ಪೊಲೀಸರ ತಂಡ ಹಾಗೂ ದ್ವಿತೀಯ ಸ್ಥಾನ ಪಡೆದ ಪತ್ರಕರ್ತರ ತಂಡಕ್ಕೆ ಟ್ರೋಪಿ ನೀಡಿ ಪ್ರೋತ್ಸಾಹಿಸಲಾಯಿತು. ಇದಕ್ಕೂ ಮುನ್ನ ಡಿವೈಎಸ್ಪಿ ಲಕ್ಷ್ಮೀನಾರಾಯಣಪ್ರಸಾದ್ ಅವರು ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ಕೊಟ್ಟರು.