ಸೋಲು ಗೆಲುವಿಗಿಂತ ಕ್ರೀಡಾ ಮನೋಭಾವ ಮುಖ್ಯ: ಎಸ್.ಎನ್.ನಾಗರಾಜ

KannadaprabhaNewsNetwork |  
Published : Feb 02, 2026, 02:00 AM IST
ಪೋಟೋ: 31ಎಸ್‌ಎಂಜಿಕೆಪಿ04 | Kannada Prabha

ಸಾರಾಂಶ

ಬದುಕಿನಲ್ಲಿ ಎದುರಾಗುವ ಸೋಲು ಗೆಲುವಿನ ವಾಸ್ತವತೆಯನ್ನು ನಿರ್ವಹಿಸುವ ಕೌಶಲ್ಯತೆಯನ್ನು ಕ್ರೀಡೆ ನೀಡಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.

ಶಿವಮೊಗ್ಗ: ಬದುಕಿನಲ್ಲಿ ಎದುರಾಗುವ ಸೋಲು ಗೆಲುವಿನ ವಾಸ್ತವತೆಯನ್ನು ನಿರ್ವಹಿಸುವ ಕೌಶಲ್ಯತೆಯನ್ನು ಕ್ರೀಡೆ ನೀಡಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶುಕ್ರವಾರ ಎನ್ಇಎಸ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಬ್ಯಾಡ್ಮಿಂಟನ್ ಜನಪ್ರಿಯವಾದ ಬಳಿಕ ಬಾಲ್ ಬ್ಯಾಡ್ಮಿಂಟನ್ ಕ್ರೀಡೆ ಸ್ವಲ್ಪ ಮಟ್ಟಿಗೆ ಹಿಂದೆ ಸರಿದಿದ್ದರೂ, ಇಂದಿಗೂ ಕಾಲೇಜು ವಿದ್ಯಾರ್ಥಿಗಳ ನಡುವೆ ಅತ್ಯಂತ ಜನಪ್ರಿಯ ಕ್ರೀಡೆಯಾಗಿದೆ. ವಿಶೇಷವಾಗಿ 1970ರ ದಶಕದಲ್ಲಿ ಈ ಕ್ರೀಡೆ ಬಹು ಜನಪ್ರಿಯವಾಗಿದ್ದು, ಒಂದೇ ತಂಡದಲ್ಲಿ ಐದು ಮಂದಿ ಆಟಗಾರರು ಭಾಗವಹಿಸುತ್ತಿದ್ದರು ಎಂದರು.

ಕ್ರೀಡೆಯಲ್ಲಿ ಗೆಲುವು ಸೋಲು ಮುಖ್ಯವಲ್ಲ, ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಮುಖ್ಯ. ಶಿಸ್ತು, ಸೌಹಾರ್ದ ಮತ್ತು ಕ್ರೀಡಾ ಮನೋಭಾವದೊಂದಿಗೆ ಸಕ್ರಿಯವಾಗಿ ಭಾಗವಹಿ ಎಂದು ಕರೆ ನೀಡಿದರು.

ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಅನಿಲ್‌ ಸಾಗರ್ ಮಾತನಾಡಿ, ಕ್ರೀಡಾಕೂಟ ಬಂದಾಗ ಮಾತ್ರ ಕ್ರೀಡಾ ತರಬೇತಿಯಲ್ಲಿ ಭಾಗವಹಿಸುವ ಸಕ್ರಿಯತೆ ತೋರದೆ, ಅಭ್ಯಾಸ ನಿರಂತರವಾಗಿರಲಿ ಎಂದು ಹೇಳಿದರು.

ಕುವೆಂಪು ವಿವಿ ದೈಹಿಕ‌ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಎನ್.ಡಿ.ವಿರೂಪಾಕ್ಷ ಮಾತನಾಡಿದರು. ಪ್ರಾಂಶುಪಾಲರಾದ ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಎ.ಟಿ.ಎನ್.ಸಿ.ಸಿ ವಿಶೇಷ ಕರ್ತವ್ಯಾಧಿಕಾರಿ ಡಾ.ಆರ್.ಎಂ.ಜಗದೀಶ್, ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ವಿ.ನಾರಾಯಣ್, ಎ.ಟಿ.ಎನ್.ಸಿ.ಸಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಂತೋನಿ ಫ್ರಾನ್ಸಿಸ್ ಉಪಸ್ಥಿತರಿದ್ದರು. ವಿಶ್ವವಿದ್ಯಾಲಯ ವ್ಯಾಪ್ತಿಯ ಪುರುಷ ಮತ್ತು ಮಹಿಳೆಯರ 25 ತಂಡಗಳು ಭಾಗವಹಿಸಿದ್ದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ
ರಾಜಕ್ಕೆ ಕೇಂದ್ರ ಬಜೆಟ್ಟಲ್ಲಿ ಚೊಂಬು : ಸಿಎಂ ಸಿಡಿಮಿಡಿ