ಕನ್ನಡ ಸಾಹಿತ್ಯ ಸೊಬಗು ಪಸರಿಸಿ: ಸು.ತ.ರಾಮೇಗೌಡ

KannadaprabhaNewsNetwork |  
Published : Jan 03, 2026, 02:00 AM IST
ಪೊಟೋ೨ಸಿಪಿಟಿ೧: ಪಟ್ಟಣದ ಸರ್ಕಾರಿ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಾಗೂ ಗಡಿಯಾರ ಫಲಕ ಅನಾವರಣ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಚನ್ನಪಟ್ಟಣ: ಕನ್ನಡ ಸಾಹಿತ್ಯದ ಸೊಬಗನ್ನು ಪಸರಿಸುವ ಕೆಲಸವನ್ನು ಮಾಡಲು ಸರ್ವರೂ ಸನ್ನದ್ಧರಾಗಿ ನಿಲ್ಲಬೇಕಾದ ಅನಿಚಾರ್ಯ ಪರಿಸ್ಥಿತಿ ಇದೆ. ಕನ್ನಡ ಉಳಿವಿನ ಮಾರ್ಗಗಳನ್ನು ಮತ್ತಷ್ಟು ಶೋಧಿಸಬೇಕಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಸು.ತ.ರಾಮೇಗೌಡ ತಿಳಿಸಿದರು.

ಚನ್ನಪಟ್ಟಣ: ಕನ್ನಡ ಸಾಹಿತ್ಯದ ಸೊಬಗನ್ನು ಪಸರಿಸುವ ಕೆಲಸವನ್ನು ಮಾಡಲು ಸರ್ವರೂ ಸನ್ನದ್ಧರಾಗಿ ನಿಲ್ಲಬೇಕಾದ ಅನಿಚಾರ್ಯ ಪರಿಸ್ಥಿತಿ ಇದೆ. ಕನ್ನಡ ಉಳಿವಿನ ಮಾರ್ಗಗಳನ್ನು ಮತ್ತಷ್ಟು ಶೋಧಿಸಬೇಕಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಸು.ತ.ರಾಮೇಗೌಡ ತಿಳಿಸಿದರು.

ಪಟ್ಟಣದ ಸರ್ಕಾರಿ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ಚನ್ನಪಟ್ಟಣ ರೋಟರಿ - ೩೧೯೧ ವತಿಯಿಂದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಾಗೂ ಗಡಿಯಾರ ಫಲಕ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕು ಸಾಹಿತ್ಯ, ಕಲೆ, ಸಂಸ್ಕೃತಿ, ಇತಿಹಾಸ ಇತ್ಯಾದಿ ವಿಷಯಗಳಲ್ಲಿ ವಿಶೇಷತೆ ಮೆರೆದಿದೆ. ಅವುಗಳನ್ನು ಜನಸಾಮಾನ್ಯರ ಸ್ಮೃತಿ ಪಟಲದಲ್ಲಿ ದೀರ್ಘಕಾಲ ನಿಲ್ಲಿಸುವಂತಹ ಪ್ರಯತ್ನಗಳನ್ನು ಸಂಘ ಸಂಸ್ಥೆಗಳು ಮಾಡಬೇಕು. ರೋಟರಿ ಸಂಸ್ಥೆ ಇಂತಹ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ಹೇಳಿದರು.

ಕಕಜವೇ ಜಿಲ್ಲಾಧ್ಯಕ್ಷ ಬೇವೂರು ಯೋಗೀಶ್ ಗೌಡ ಮಾತನಾಡಿ, ಕನ್ನಡದ ಬಗೆಗೆ ಕನ್ನಡಿಗರು ಅಭಿಮಾನ ಮೂಡಿಸಿಕೊಳ್ಳದ ಹೊರತು, ಕನ್ನಡತನ ಉಳಿಯಲು ಸಾಧ್ಯವಿಲ್ಲ. ನೆಲ, ಜಲ, ಭಾಷೆ, ಆಹಾರ, ಸಂಸ್ಕೃತಿ ಇತ್ಯಾದಿ ಅಂಶಗಳು ಹೆಮ್ಮೆಯ ವಿಷಯವಾಗಬೇಕು ಎಂದು ತಿಳಿಸಿದರು.

ಕವಯಿತ್ರಿ ಡಾ.ರಾಜಶ್ರೀ ಮಾತನಾಡಿ, ಕನ್ನಡ ಸಾಹಿತ್ಯವನ್ನು ವಿಶ್ವ ದರ್ಜೆಗೆ ಏರಿಸಿದ ಕೀರ್ತಿ ನಮ್ಮ ಕವಿಗಳಿಗೆ ಸಲ್ಲುತ್ತದೆ. ಕನ್ನಡ ಗಳಿಸಿರುವ ಶ್ರೇಷ್ಠತೆಯನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಟಿ. ಪ್ರಸನ್ನ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ಸಂಸ್ಥೆಯ ಝೋನಲ್ ಗೌರ್ನರ್ ಬಿ. ಪುಟ್ಟಸ್ವಾಮಯ್ಯ, ಅಸಿಸ್ಟೆಂಟ್ ಗೌರ್ನರ್ ಕೆ. ಗವಿರಾಜು, ಕಾರ್ಯದರ್ಶಿ ಎಲೆಕೇರಿ ವಿನಯ್, ಭಾವಿಪ ಮಾಜಿ ಅಧ್ಯಕ್ಷ ವಸಂತಕುಮಾರ್, ಹಿರಿಯ ಕವಿ ಬೋರಲಿಂಗಯ್ಯ ದ್ಯಾವಪಟ್ಟಣ, ಯುವಕವಿ ಸಚಿನ್ ಕೆಲಗೆರೆ, ಬಿವಿಎಸ್ ಸಂಘಟನೆಯ ಕುಮಾರ್, ರೋಟರಿ ಸದಸ್ಯರಾದ ರಾಮ ಪ್ರಸಾದ್, ಸಿ.ಜಿ. ರಮೇಶ್ ಕುಮಾರ್, ಮಂಗಳವಾರಪೇಟೆ ಲೋಕೇಶ್, ಶಿವರಾಜು, ವಕೀಲ ಶಿವಶಂಕರ್, ಗ್ರಂಥಾಲಯ ಮೇಲ್ವಿಚಾರಕ ವೈದ್ಯೇಗೌಡ, ಶಿಲ್ಪಿ ಹರೀಶ್, ಸಾಗರ್, ಆಕಾಶ್ ಜೈನ್, ಸಾಹಿತಿ ಡಾ. ವಿಜಯ್ ರಾಂಪುರ ಮುಂತಾದವರು ಹಾಜರಿದ್ದರು.

ಪೊಟೋ೨ಸಿಪಿಟಿ೧:

ಚನ್ನಪಟ್ಟಣದ ಸರ್ಕಾರಿ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಾಗೂ ಗಡಿಯಾರ ಫಲಕ ಅನಾವರಣ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ