ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ನಂತೂರು ಶ್ರೀ ಭಾರತಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲಿನ ವಿಜ್ಞಾನ ಸಂಘದ ವತಿಯಿಂದ ಶನಿವಾರ ಅಂತರ್ ಶಾಲಾ ಮಟ್ಟದ ‘ಸೈಫೇರ್’ ವಿಜ್ಞಾನ ಮಾದರಿ ರಚನಾ ಸ್ಪರ್ಧೆ ಆಯೋಜಿಸಲಾಯಿತು.ಶಾಲಾ ಆವರಣದಲ್ಲಿರುವ ಶಂಕರಶ್ರೀ ಸಭಾಭವನದಲ್ಲಿ ನಡೆದ ಸಮಾರಂಭವನ್ನು ಸಹ್ಯಾದ್ರಿ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ ಮೆಂಟ್ ನ ಡೀನ್ ರಮೇಶ ಕೆ.ಜಿ. ಉದ್ಘಾಟಿಸಿದರು.ಈ ಸಂದರ್ಭ ರಮೇಶ ಕೆ.ಜಿ. ಅವರು ಮಾತನಾಡಿ, ವಿದ್ಯಾರ್ಥಿಗಳು ಕನಸು ಕಾಣುವುದರ ಜೊತೆಗೆ ಅದನ್ನು ನನಸು ಮಾಡುವ ಛಲವಿರಬೇಕೆಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಸಮೂಹ ಸಂಸ್ಥೆಯ ನಿರ್ದೇಶಕ ಗಿರೀಶ್ ಎಂ. ವಹಿಸಿದ್ದರು. ಸಕ್ಷಮ ಜಿಲ್ಲಾಧ್ಯಕ್ಷ ರಾಜಶೇಖರ ಭಟ್ ಕಾಕುಂಜೆ ಮಾತನಾಡಿ, ಮಕ್ಕಳ ಕಲಿಕೆಯು ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಎಲ್ಲವನ್ನೂ ನೋಡುತ್ತಾ ಮಾಡುತ್ತಾ ಕಲಿಯ ಬೇಕೆಂದು ಸಲಹೆ ನೀಡಿದರು.ಶ್ರೀ ಭಾರತೀ ಸಮೂಹ ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಮುಖ್ಯೋಪಾಧ್ಯಾಯ ಗಂಗಾರತ್ನ ಇದ್ದರು.
ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದರು. ಸಂಸ್ಥೆಯ ವಿದ್ಯಾರ್ಥಿ ಸಂಘದ ಉಪನಾಯಕ ಶ್ರೇಯಸ್ ನಿರೂಪಿಸಿದರು. ವಿದ್ಯಾರ್ಥಿಗಳಾದ ರಿವಾನಿ ಸ್ವಾಗತಿಸಿ ಅನಂತಕೃಷ್ಣ ವಂದಿಸಿದರು.ವಿ.ವಿ. ಘಟಿಕೋತ್ಸವಮಂಗಳೂರು ವಿಶ್ವವಿದ್ಯಾನಿಲಯದ 43ನೇ ವಾರ್ಷಿಕ ಘಟಿಕೋತ್ಸವ ೨೦೨೫ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಲಾಗುತ್ತದೆ.ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ ೨೦೨೩-೨೪ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ ೧೨ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ.
ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆಯ ಕಾರ್ಯಕ್ರಮಗಳನ್ನು ವಿಂಗಡಿಸಲಾಗಿದೆ.ಪ್ರಥಮವಾಗಿ ಘಟಿಕೋತ್ಸವ ಸಂದರ್ಭ ವೇದಿಕೆಯಲ್ಲಿ ಗಣ್ಯರಿಂದ ಪದವಿ ಸ್ವೀಕರಿಸುವ ವಿದ್ಯಾರ್ಥಿಗಳು, ಡಾಕ್ಟರಲ್ ಡಿಗ್ರಿ ಪಡೆಯಲು ಅರ್ಹರಾದ ಅಭ್ಯರ್ಥಿಗಳು, ರಾಂಕ್/ಚಿನ್ನದ /ಪದಕ/ನಗದು ಬಹುಮಾನ ಪಡೆಯುವ ಸ್ನಾತಕೋತ್ತರ ಮತ್ತು ಪದವಿ ಮಟ್ಟದ ಅಭ್ಯರ್ಥಿಗಳು, ದ್ವಿತೀಯವಾಗಿ ಮುಖ್ಯ ಸಭಾ ಕಾರ್ಯಕ್ರಮ ಮುಗಿದ ನಂತರ ಪದವಿ ಪ್ರಮಾಣ ಪತ್ರ ಸ್ವೀಕರಿಸುವ ವಿದ್ಯಾರ್ಥಿಗಳು, ಪದವಿ/ಸ್ನಾತಕೋತ್ತರ ಪದವಿಯಲ್ಲಿ ೬ ಮತ್ತು ೬ಕ್ಕಿಂತ ಹೆಚ್ಚಿನ ಸರಾಸರಿ ನಂಚಿತ ವರ್ಗಾಂಶ (CGPA) ಪಡೆದು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲ ಸ್ನಾತಕ/ಸ್ನಾತಕೋತ್ತರ ಅಭ್ಯರ್ಥಿಗಳು online Registration ಮಾಡಿಕೊಳ್ಳಬೇಕು.
ಬಿ.ಪಿ.ಎಸ್. ಮತ್ತು ಬಿ.ಎಡ್. ಪದವೀಧರರನ್ನು ಸ್ನಾತಕೋತ್ತರ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದಿಲ್ಲ. ಈ ವಿಷಯದಲ್ಲಿ ಪದಕ/ಬಹುಮಾನ ಪಡೆಯಲು ಅರ್ಹರಾದ ಮತ್ತು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಮಾತ್ರ ಘಟಿಕೋತ್ಸವಕ್ಕೆ ಪ್ರವೇಶ ಪಡೆಯಲು ಅರ್ಹರು.ಅರ್ಹ ಅಭ್ಯರ್ಥಿಗಳು ಪದವಿಯನ್ನು ಘಟಿಕೋತ್ಸವದಲ್ಲಿ ಹಾಜರಿ ಅಥವಾ ಗೈರುಹಾಜರಿಯಲ್ಲಿ ಪಡೆದುಕೊಳ್ಳಬಹುದಾಗಿದೆ. ಆದರೆ ಆಗಸ್ಟ್ ೩೧ ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾದ ಎಲ್ಲ ಪುನರಾವರ್ತಿತ ಅಭ್ಯರ್ಥಿಗಳು ಗೈರು ಹಾಜರಿಯಲ್ಲೇ ಪದವಿ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಬೇಕು. ಘಟಿಕೋತ್ಸವದ ಅಧಿಕೃತ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ.
ಹಾಜರಿಯಲ್ಲಿ ಪದವಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯದ ಅಂರ್ತಜಾಲದಲ್ಲಿ ನೊಂದಣಿಗೆ ಅವಕಾಶ ಕಲ್ಪಿಸಿ, ಕೊನೆಯ ದಿನಾಂಕದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ಹಾಜರಾತಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಮಾತ್ರ Online Registration ಮಾಡಿಕೊಳ್ಳಬೇಕು.ಗೈರು ಹಾಜರಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕಾಲೇಜು/ಸ್ನಾತಕೋತ್ತರ ವಿಭಾಗಕ್ಕೆ ಕಳುಹಿಸಿ ಕೊಡಲಾಗುವುದು. ಅಂತಹ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಕಾಲೇಜು ಪ್ರಾಂಶುಪಾಲರಿಂದ / ವಿಭಾಗದ ಅಧ್ಯಕ್ಷರಿಂದ ಪಡೆದುಕೊಳಬೇಕು.
ಪಿ.ಹೆಚ್.ಡಿ./ಡಿ.ಎಸ್ಸಸ್ಪಿ/ಡಿಲಿಟ್ ಪದವಿಯನ್ನು ಪಡೆಯಲು ಅರ್ಹರಾದ ಅಭ್ಯರ್ಥಿಗಳು ಅರ್ಜಿಯೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಬೇಕು.ಎಲ್ಲ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳ ಪ್ರಾಂಶುಪಾಲರುಗಳು/ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು ಎಲ್ಲಾ ಅರ್ಹ ಅಭ್ಯರ್ಥಿಗಳಿಂದ ನಿಗದಿತ ಶುಲ್ಕ ಸಂಗ್ರಹಿಸಿ ರಾಷ್ಟ್ರೀಕೃತ ಬ್ಯಾಂಕಿನ ಶಾಖೆಗಳ ಮುಖಾಂತರ ವಿಶ್ವವಿದ್ಯಾನಿಲಯದ ನಿಧಿಗೆ ಜಮೆ ಆಗುವಂತೆ ಡಿ.ಡಿ./ಚಲನ್ ಮೂಲಕ ಅಥವಾ ವಿಶ್ವವಿದ್ಯಾನಿಲಯದ ಅಂತರ್ಜಾಲದ (www.mangaloreuniversity.ac.in) quick links online fees collection fees Examination Activities 008) ಮೂಲಕ ಪಾವತಿಸಿ ವಿದ್ಯಾರ್ಥಿಗಳ ವಿವರಗಳನ್ನು ಕುಲಸಚಿವರ (ಪ) ಕಚೇರಿಯಿಂದ ನೀಡಲ್ಪಟ್ಟ ನಿಗದಿತ ನಮೂನೆಯಲ್ಲಿ ಜನವರಿ ೧೫ರೊಳಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.