ಶ್ರೀ ಚಂದ್ರಮೌಳೇಶ್ವರಸ್ವಾಮಿ ಅದ್ಧೂರಿ ರಥೋತ್ಸವ

KannadaprabhaNewsNetwork |  
Published : Mar 30, 2026, 01:30 AM IST
ಮಾಗಡಿ ತಾಲ್ಲೂಕಿನ ವೀರೇಗೌಡನ ದೊಡ್ಡಿ ಗ್ರಾಮದಲ್ಲಿ ಚಂದ್ರಮೌಳೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ನೆರವೇರಿತು. | Kannada Prabha

ಸಾರಾಂಶ

ಮಾಗಡಿ: ತಾಲೂಕಿನ ವೀರೇಗೌಡನದೊಡ್ಡಿ ಗ್ರಾಮದಲ್ಲಿ ನೆಲೆಸಿರುವ ಸುಪ್ರಸಿದ್ಧ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ ವೈಭವದಿಂದ ನೆರವೇರಿಸಲಾಯಿತು

ಮಾಗಡಿ: ತಾಲೂಕಿನ ವೀರೇಗೌಡನದೊಡ್ಡಿ ಗ್ರಾಮದಲ್ಲಿ ನೆಲೆಸಿರುವ ಸುಪ್ರಸಿದ್ಧ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ ವೈಭವದಿಂದ ನೆರವೇರಿಸಲಾಯಿತು.

ರಥೋತ್ಸವದ ಅಂಗವಾಗಿ ದೇವಸ್ಥಾನಲ್ಲಿ ಬೆಳಿಗ್ಗೆ ಶ್ರೀ ಮಾಯಮ್ಮದೇವಿಗೆ ರುದ್ರಾಭಿಷೇಕ, ರಥಾಂಗ ಹೋಮದ ಬಳಿಕ ಮಧ್ಯಾಹ್ನ 12.15ಕ್ಕೆ ಪುಷ್ಯ ನಕ್ಷತ್ರದ ಶುಭ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ರಥೋತ್ಸವದ ವೇಳೆ ಭಕ್ತರು ತೇರಿಗೆ ಬಾಳೆಹಣ್ಣು ಮತ್ತು ದವನ ಅರ್ಪಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಭಕ್ತ ಮಂಡಳಿಯಿಂದ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಸೇವಾಕರ್ತರು ಪಾನಕ, ಮಜ್ಜಿಗೆ ಮತ್ತು ಕೋಸಂಬರಿ ವಿತರಿಸಿದರು.

ದೇವಸ್ಥಾನದಲ್ಲಿ ಅಜಗಜಾನನ ಪೂಜೆ, ಅಂಕುರಾರ್ಪಣ ಹಾಗೂ ಧ್ವಜಾರೋಹಣ ಶ್ರೀ ಭ್ರಮರಾಂಭ ಅಮ್ಮನವರು ಹಾಗೂ ಶ್ರೀ ಚಂದ್ರಮೌಳೇಶ್ವರ ಸ್ವಾಮಿಯವರಿಗೆ ಕಲ್ಯಾಣೋತ್ಸವ ನೆರವೇರಿತು.

ರಾತ್ರಿ 7 ಗಂಟೆಗೆ ನಂದಿ ವಾಹನೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಅಶ್ವಾರೋಹಣ, ತೀರ್ಥಸ್ನಾನ ಹಾಗೂ ಉಯ್ಯಾಲೆ ಉತ್ಸವಗಳೊಂದಿಗೆ ಜಾತ್ರಾ ಮಹೋತ್ಸವ ಮಾ.31ಕ್ಕೆ ಸಂಪನ್ನಗೊಳ್ಳಲಿದೆ.

ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕರೆ:

ದೇವಸ್ಥಾನ ಪುರಾತನವಾಗಿದ್ದು 2027ರ ಜಾತ್ರಾ ಮಹೋತ್ಸವದ ವೇಳೆಗೆ ಜೀರ್ಣೋದ್ಧಾರಗೊಳಿಸಿ ಹೊಸ ಪೂಜಾ ಮಂದಿರ ಮತ್ತು ನೂತನ ರಥ ನಿರ್ಮಾಣ, ಒಂದು ದೊಡ್ಡ ಹಾಗೂ ಎರಡು ಚಿಕ್ಕ ಗೋಪುರಗಳ ನಿರ್ಮಾಣ, ನೆಲಕ್ಕೆ ಹೊಸ ಕಲ್ಲುಗಳನ್ನು ಅಳವಡಿಸುವುದು ಹಾಗೂ ವಿದ್ಯುತ್ ಸಂಪರ್ಕ ನವೀಕರಣಗೊಳಿಸಲು ದೇವಸ್ಥಾನ ಆಡಳಿತ ಮಂಡಳಿ ತೀರ್ಮಾನಿಸಿದೆ.

ರಥೋತ್ಸವದಲ್ಲಿ ಗ್ರಾಮದ ಮುಖಂಡರು ಅಕ್ಕಪಕ್ಕದ ಗ್ರಾಮಸ್ಥರು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೃಜನಶೀಲತೆಗೆ ಸಾಹಿತ್ಯ ಹುಣ್ಣಿಮೆ ಪ್ರೇರಕ: ಮಂಜುನಾಥ
ಉಚಿತ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಿ: ಅಶೋಕ್