- ಪ್ರತ್ಯೇಕ ಹಗ್ಗಗಳ ಹಿಡಿದು ರಥ ಎಳೆದ ಪುರುಷರು, ಮಹಿಳೆಯರು
ಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣದ ಕಲ್ಲುಸಾಗರ ಬೀದಿಯ ಬಸವೇಶ್ವರ ದೇವಾಲಯ ಹಿಂಭಾಗದ ಹಿರೇಮಠದ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಶ್ರೀ ಜಗದ್ಗುರು ಪಂಚಾಚಾರ್ಯ ರಥೋತ್ಸವ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ಕೆಂಡದಾರ್ಚನೆ ವಿಜೃಂಭಣೆಯಿಂದ ನೆರವೇರಿತು.ರಥೋತ್ಸವ ನಿಮಿತ್ತ ಶ್ರೀ ಮಠದ ಆವರಣದಲ್ಲಿರುವ ಶ್ರೀ ಪಂಚಾಚಾರ್ಯರ ಮೂರ್ತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ, ಭದ್ರಕಾಳಿ ದೇವರಿಗೆ ಶುಕ್ರವಾರ ಬೆಳಗ್ಗೆ ಅಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಿ, ಪೂಜಿಸಲಾಯಿತು.
ರಥೋತ್ಸವಕ್ಕೆ ಎಡೆಯೂರು ಶ್ರೀ ರೇಣುಕಾಶಿವಾಚಾರ್ಯ ಮಹಾಸ್ವಾಮಿಗಳು, ಹಾಲಸ್ವಾಮಿ ವಿರಕ್ತ ಮಠದ ಶ್ರೀ ಬಸವಜಯಚಂದ್ರ ಮಹಾಸ್ವಾಮೀಜಿ, ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ವೀರಶೈವ ಸಮಾಜದ ಮುಖಂಡರಾದ ರಾಜಶೇಖರಯ್ಯ, ಎಲ್.ಎಂ.ರೇಣುಕಾ, ಜ್ಯೋತಿ ಕೊಟ್ರೇಶ್ ಕೋರಿ, ಸಿ.ಎಂ.ಗುರುಸಿದ್ದಯ್ಯ, ಭಕ್ತರು ಹಾಜರಿದ್ದರು. ಶ್ರೀ ಮಠದ ವತಿಯಿಂದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.
- - - -18ಕೆಸಿಎನ್ಜಿ1.ಜೆಪಿಜಿ:ಚನ್ನಗಿರಿ ಪಟ್ಟಣದ ಕಲ್ಲುಸಾಗರ ಬೀದಿಯ ಬಸವೇಶ್ವರ ದೇವಾಲಯ ಹಿಂಭಾಗದಲ್ಲಿರುವ ಹಿರೇಮಠ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಶ್ರೀ ಜಗದ್ಗುರು ಪಂಚಾಚಾರ್ಯ ರಥೋತ್ಸವ ನಡೆಯಿತು.