ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

KannadaprabhaNewsNetwork |  
Published : Aug 21, 2025, 01:00 AM IST
ನೃತ್ಯದ ಒಂದು ದೃಶ್ಯ | Kannada Prabha

ಸಾರಾಂಶ

ಅರಸೀಕೆರೆ ನಗರದ ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಶ್ರೀಕೃಷ್ಣನ ವೇಷದಲ್ಲಿ ಹಾಗೂ ತಾಯಂದಿರು ಯಶೋಧರೆಯ ವೇಷದಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಪ್ರಾಂಶುಪಾಲ ಡಾ. ಸುರೇಶ್ ಕುಮಾರ್ ಕುಂದೂರು ಮಾತನಾಡಿ, ಮನುಷ್ಯನ ಆಧ್ಯಾತ್ಮಿಕ ಚಿಂತನೆಗಳು ಅವನಲ್ಲಿ ಧನಾತ್ಮಕ ಮನೋಭಾವವನ್ನು ಬೆಳೆಸುತ್ತವೆ. ಇಂತಹ ಕಾರ್ಯಕ್ರಮಗಳು ಮಕ್ಕಳ ಮನಸ್ಸನ್ನು ಸದೃಢಗೊಳಿಸಿ ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಹೇಳಿದರು.

ಅರಸೀಕೆರೆ: ನಗರದ ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಶ್ರೀಕೃಷ್ಣನ ವೇಷದಲ್ಲಿ ಹಾಗೂ ತಾಯಂದಿರು ಯಶೋಧರೆಯ ವೇಷದಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಸುರೇಶ್ ಕುಮಾರ್ ಕುಂದೂರು ಮಾತನಾಡಿ, ಮನುಷ್ಯನ ಆಧ್ಯಾತ್ಮಿಕ ಚಿಂತನೆಗಳು ಅವನಲ್ಲಿ ಧನಾತ್ಮಕ ಮನೋಭಾವವನ್ನು ಬೆಳೆಸುತ್ತವೆ. ಇಂತಹ ಕಾರ್ಯಕ್ರಮಗಳು ಮಕ್ಕಳ ಮನಸ್ಸನ್ನು ಸದೃಢಗೊಳಿಸಿ ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆರ್‌. ಅನಂತಕುಮಾರ್ ಮಕ್ಕಳ ಮನಸ್ಸು ಸಸಿಗಳಿದ್ದಂತೆ. ಈ ಮನಸ್ಸಿನಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿದರೆ, ಅವರು ಭವಿಷ್ಯದ ಹೆಮ್ಮೆಯ ಮರಗಳಾಗಿ ಬೆಳೆದು ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣರಾಗುತ್ತಾರೆ. ಈ ಉದ್ದೇಶದಿಂದಾಗಿ ಶಾಲೆಯಲ್ಲಿ ಇಂತಹ ಮೌಲ್ಯಾಧಾರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಮಕ್ಕಳು ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದರು. ಜೊತೆಗೆ ಮಕ್ಕಳಿಂದ ಮತ್ತು ಪೋಷಕರಿಂದ ಕೃಷ್ಣನ ಜೀವನವೃತ್ತಾಂತವನ್ನು ಆಧಾರಿತ ನೃತ್ಯರೂಪಕವೂ ಪ್ರದರ್ಶಿಸಲಾಯಿತು, ಇದು ಸಭಿಕರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್‌. ಅನಂತಕುಮಾರ್‌, ನಿರ್ದೇಶಕರಾದ ಪ್ರಶಾಂತ್ ಅನಂತಕುಮಾರ್ ಹಾಗೂ ಅಭಿನಿತ ಪ್ರಶಾಂತ್, ಪ್ರಾಂಶುಪಾಲ ಡಾ. ಸುರೇಶ್ ಕುಮಾರ್ ಕುಂದೂರು, ಪೋಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ