ಶ್ರೀ ಮಹಾವೀರ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

KannadaprabhaNewsNetwork |  
Published : Aug 31, 2025, 02:00 AM IST
ಶ್ರೀ ಮಹಾವೀರ ಕಾಲೇಜುನ ವಿದ್ಯಾರ್ಥಿ ಸಂಘ ಉದ್ಘಾಟನೆ | Kannada Prabha

ಸಾರಾಂಶ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು. ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶುಭಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ವಿದ್ಯಾರ್ಥಿಗಳು ಮಾಡುವ ಕೆಲಸದ ಗುಣಮಟ್ಟ ಅತ್ಯುತ್ತಮವಾಗಿರಬೇಕು. ಹಿಂದಿನವರಿಗೆ ಅವಕಾಶಗಳು ಕಡಿಮೆ ಇದ್ದರೂ ಸಾಧನೆ ಮಾಡುವವರ ಸಂಖ್ಯೆ ಹೆಚ್ಚಿತ್ತು, ಆದರೆ ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ತುಂಬಾ ಇದ್ದರೂ ಅದನ್ನು ಉಪಯೋಗಿಸಿಕೊಳ್ಳುವವರ ಸಂಖ್ಯೆ ಕಡಿಮೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಎಸ್‌ಕೆಎಫ್ ಎಲಿಕ್ಸ್ರ್ ಇಂಡಿಯಾ ಪ್ರೈ ಲಿಮಿಟೆಡ್ ನಿರ್ವಹಣಾ ನಿರ್ದೇಶಕ ಡಾ. ರಾಮಕೃಷ್ಣ ಆಚಾರ್‌ ಹೇಳಿದರು.

ಅವರು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶುಭಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಕಾಲೇಜಿನ ಕಚೇರಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಕೃಷ್ಣಯ್ಯ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಅವರ ಬಗ್ಗೆ ಕಾಲೇಜಿನ ಕಚೇರಿ ಅಧೀಕ್ಷಕ ರಾಜೇಶ್ ಕುಮಾರ್ ಮಾತನಾಡಿದರು. ಕಳೆದ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಪದವಿ ಹಾಗೂ ಪದವಿ ಪೂರ್ವ ತರಗತಿಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿ ನಾಯಕಿ ಸಾಕ್ಷಿ ಎಚ್. ಶೆಟ್ಟಿ ಮಾತನಾಡಿದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥೆ ಸುವರ್ಣಲತಾ ಶೆಣೈ ಸಾಧಕರ ವಿವರ ನೀಡಿದರು. ವಿದ್ಯಾರ್ಥಿ ಸಂಘದ ಪದವಿ ಪೂರ್ವ ವಿಭಾಗದ ಉಪಾಧ್ಯಕ್ಷೆ ಪೂರ್ಣಿಮಾ ಅತಿಥಿ ಪರಿಚಯ ಮಾಡಿದರು. ವಿದ್ಯಾರ್ಥಿ ಸಂಘದ ಪದವಿ ವಿಭಾಗದ ಉಪಾಧ್ಯಕ್ಷ ಮೊಹಮ್ಮದ್ ಜುನೈದ್, ಪದವಿ ಪೂರ್ವ ವಿಭಾಗದ ಜಂಟಿ ಕಾರ್ಯದರ್ಶಿ ಶಾಲಿನಿ ಪದಾಧಿಕಾರಿಗಳ ಪರಿಚಯ ನೀಡಿದರು. ಪದವಿ ವಿಭಾಗದ ಪ್ರಧಾನ ಕಾರ್ಯದರ್ಶಿ ನವ್ಯಾ ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿ ನಿವೇದಿತಾ ವಂದಿಸಿದರು. ಗ್ರಾಹಕ ವೇದಿಕೆ ಕಾರ್ಯದರ್ಶಿ ಹರ್ಷಿಣಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''