ಹೊಳಲು ಗ್ರಾಮದಲ್ಲಿ ಶ್ರೀರಾಮನವಮಿ ಆಚರಣೆ

KannadaprabhaNewsNetwork |  
Published : Apr 07, 2025, 12:30 AM IST
6ಕೆಎಂಎನ್ ಡಿ25 | Kannada Prabha

ಸಾರಾಂಶ

ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಶ್ರೀಆಂಜನೇಯ ಸರ್ಕಲ್, ಎಚ್.ಎಂ.ನಾಯಕರ ಸರ್ಕಲ್ ಹಾಗೂ ಶ್ರೀಸಿದ್ದಪ್ಪಾಜಿ ದೇವಸ್ಥಾನದಲ್ಲಿ ಶ್ರೀರಾಮ ಆಂಜನೇಯ ಭಕ್ತ ಸಮಿತಿಯಿಂದ ಶ್ರೀರಾಮನವಮಿ ಅಂಗವಾಗಿ ದೇವರಿಗೆ ವಿಶೇಷ ಪೂಜೆ, ಅಪ್ಪುವಿನ ಭಾವಚಿತ್ರಕ್ಕೂ ಸಹ ಪೂಜೆ ಮಾಡಿ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ, ಕೋಸಂಬರಿ, ಹಾಗೂ ಸಿಹಿತಿಂಡಿಯನ್ನು ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಹೊಳಲು ಗ್ರಾಮದ ಶ್ರೀಆಂಜನೇಯ ಸರ್ಕಲ್, ಎಚ್.ಎಂ.ನಾಯಕರ ಸರ್ಕಲ್ ಹಾಗೂ ಶ್ರೀಸಿದ್ದಪ್ಪಾಜಿ ದೇವಸ್ಥಾನದಲ್ಲಿ ಶ್ರೀರಾಮ ಆಂಜನೇಯ ಭಕ್ತ ಸಮಿತಿಯಿಂದ ಶ್ರೀರಾಮನವಮಿ ಅಂಗವಾಗಿ ದೇವರಿಗೆ ವಿಶೇಷ ಪೂಜೆ, ಅಪ್ಪುವಿನ ಭಾವಚಿತ್ರಕ್ಕೂ ಸಹ ಪೂಜೆ ಮಾಡಿ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ, ಕೋಸಂಬರಿ, ಹಾಗೂ ಸಿಹಿತಿಂಡಿಯನ್ನು ವಿತರಿಸಲಾಯಿತು.

ಈ ವೇಳೆ ಶ್ರೀರಾಮ ಸೇನೆ ಸಮಿತಿ ಸದಸ್ಯ ಜಯರಾಮ್, ಕಾರ್ತಿಕ್, ನವೀನ್, ಸಂಜು, ಭರತ್, ಗುರು , ಸಾಗರ್ , ಅನು,

ಕೃಷ್ಣ ಬೇಕರಿ, ಯೋಗೇಶ್, ಬಸವಚಾರಿ, ಸಂಪತ್, ಲಕ್ಷ್ಮಣ್, ವಿಕಾಸ್, ಬೋರಯ್ಯ , ಶಂಕರ್ , ಎಂ.ಪಿ. ಸಂತೋಷ್ ಹಾಗೂ ಹೊಳಲು ಗ್ರಾಮಸ್ಥರು, ಶ್ರೀರಾಮ ಸೇವಾ ಸಮಿತಿಯ ಸದಸ್ಯರು ಹಾಜರಿದ್ದರು.

ತಗ್ಗಹಳ್ಳಿಯಲ್ಲಿಯೂ ಶ್ರೀರಾಮನವಮಿ ಆಚರಣೆ

ಮಂಡ್ಯ:

ತಾಲೂಕಿನ ತಗ್ಗಹಳ್ಳಿಯಲ್ಲಿ ಗ್ರಾಮಸ್ಥರು ಶ್ರೀರಾಮನವಮಿ ಅಂಗವಾಗಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಗ್ರಾಮದ ಸರ್ಕಲ್‌ನಲ್ಲಿ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದ ಗ್ರಾಮಸ್ಥರು, ವಿಶ್ವಮಾನವ ಕುವೆಂಪು ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಯುವಕರು ನಂತರ ಸಾರ್ವಜನಿಕರು, ಭಕ್ತರಿಗೆ ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸಿದರು.

ಈ ವೇಳೆ ಕೇಬಲ್ ಮಂಜು, ರುದ್ರೇಶ್ , ಪ್ರದೀಪ್, ಸ್ವಾಮಿ, ಮಂಜೇಶ್ ಸೇರಿದಂತೆ, ತಗ್ಗಹಳ್ಳಿ, ಪುರ, ಕಮ್ಮನಾಯಕನಹಳ್ಳಿ, ಯಡಗನಹಳ್ಳಿ, ಗೋಪನಹಳ್ಳಿ ಸುತ್ತಾಮುತ್ತಲ ಗ್ರಾಮದ ಮುಖಂಡರು, ಯುವಕರು, ಮಕ್ಕಳು ಸೇರಿದಂತೆ ಹಲವರು ಇದ್ದರು.ಶ್ರೀರಾಮನವಮಿ ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಣೆ

ಕನ್ನಡಪ್ರಭ ವಾರ್ತೆ ಪಾಂಡವಪುರ

ಶ್ರೀರಾಮನವಮಿ ಪ್ರಯುಕ್ತ ಪಟ್ಟಣದ ಹಿರೋಡೆಬೀದಿಯ ಶ್ರೀರಾಮಾಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯಿಂದ ಮಜ್ಜಿಗೆ, ಪಾನಕ ಹಾಗೂ ಕೋಸಂಬರಿಯನ್ನು ವಿತರಿಸಲಾಯಿತು.

ಪಟೇಲ್ ಪ್ರಸಾದ್ ಮತ್ತವರ ಕುಟುಂಬ ಶ್ರೀರಾಮಾಂಜನೇಯ ಹಾಗೂ ಶ್ರೀರಾಮ ಮಂದಿರದ ವಿಶೇಷ ಪೂಜೆ ಸಲ್ಲಿಸಿದರು. ಮಹಾ ಮಂಗಳಾರತಿ ಬಳಿಕ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಿಸಲಾಯಿತು.

ಈ ವೇಳೆ ತಹಸೀಲ್ದಾರ್ ಎಸ್.ಸಂತೋಶ್, ಯಜಮಾನರಾದ ಶಿವಣ್ಣ, ಚಂದ್ರೇಗೌಡ, ಪುರಸಭೆ ಮಾಜಿ ಸದಸ್ಯ ಪಿ.ಎಸ್.ಲಿಂಗರಾಜು (ಗುಣ), ಉಮಶಂಕರ್, ಪೇಟ್ರೋಲ್‌ ಬಾಂಕ್ ರಮೇಶ್, ಗೀರಿಶ್, ಸದಸ್ಯ ಆರ್.ಸೋಮಶೇಖರ್, ದೀಲಿಪ್ಪ, ಚಂದ್ರಶೇಖರ್, ಅರ್ಚಕರಾದ ನಾಗಣ್ಣ, ನರಹರಿ, ಗುರು ಇತರರಿದ್ದರು. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶ್ರೀರಾಮನವಮಿ ಆಚರಣೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಕಾದಶಿ ಪ್ರಯುಕ್ತ ಶರವಣ ಟ್ರಸ್ಟ್‌ನಿಂದ ಲಕ್ಷ ಲಡ್ಡು ಹಂಚಿಕೆ
ಹಳೆ ದ್ವೇಷ: ರಸ್ತೆಯಲ್ಲಿ ಅಟ್ಟಾಡಿಸಿ ಅಪ್ಪ, ಮಗನ ಮೇಲೆ ಹಲ್ಲೆ ನಡೆಸಿ ಪರಾರಿ