ಗೋಹತ್ಯೆ ತಡೆ ಕ್ರಮಕ್ಕೆ ಶ್ರೀರಾಮ ಸೇನಾ ಆಗ್ರಹ

KannadaprabhaNewsNetwork |  
Published : May 22, 2026, 01:15 AM IST
21ಕೆಆರ್ ಎಂಎನ್ 2.ಜೆಪಿಜಿಶ್ರೀ ರಾಮಸೇನಾ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರಾಮನಗರ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ, ಅನಧಿಕೃತ ಕಸಾಯಿಖಾನೆಗಳು, ಕಾನೂನುಬಾಹಿರ ಗೋಹತ್ಯೆ ತಡೆ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತುರ್ತು ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀರಾಮ ಸೇನಾ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು

ರಾಮನಗರ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ, ಅನಧಿಕೃತ ಕಸಾಯಿಖಾನೆಗಳು, ಕಾನೂನುಬಾಹಿರ ಗೋಹತ್ಯೆ ತಡೆ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತುರ್ತು ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀರಾಮ ಸೇನಾ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಶ್ರೀರಾಮ ಸೇನಾ ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಾರ್ಜುನಗೌಡ ನೇತೃತ್ವದಲ್ಲಿ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಗೋಹತ್ಯೆ ತಡೆಗೆ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಜಿಲ್ಲೆಯ ಎಲ್ಲಾ ಚೆಕ್‌ಪೋಸ್ಟ್‌ಗಳು, ಗಡಿಭಾಗಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ 24x7 ವಿಶೇಷ ತಪಾಸಣೆ ವ್ಯವಸ್ಥೆ ಜಾರಿಗೆ ತರಬೇಕು. ಗೋವುಗಳನ್ನು ಸಾಗಿಸುವ ವಾಹನಗಳ ದಾಖಲೆಗಳು, ಪರವಾನಗಿ ಹಾಗೂ ಪಶುವೈದ್ಯಕೀಯ ಪ್ರಮಾಣಪತ್ರಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು, ಅನಧಿಕೃತ ಕಸಾಯಿಖಾನೆಗಳು, ಅನುಮಾನಾಸ್ಪದ ಗೋದಾಮುಗಳು ಹಾಗೂ ಖಾಸಗಿ ಸ್ಥಳಗಳ ಮೇಲೆ ವಿಶೇಷ ದಾಳಿ ನಡೆಸಬೇಕು ಎಂದು ಆಗ್ರಹಿಸಿದರು.

ಇದಲ್ಲದೆ ಪೊಲೀಸ್ ಇಲಾಖೆ, ಪಶುಪಾಲನಾ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಜಂಟಿ ಕಾರ್ಯಪಡೆ ರಚಿಸಿ ನಿರಂತರ ನಿಗಾವಹಿಸಬೇಕು, ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ತಕ್ಷಣ ಎಫ್ ಐಆರ್ ದಾಖಲಿಸಿ ವಾಹನ ವಶಪಡಿಕೆ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ರಾತ್ರಿ ಪಾಳಿಯಲ್ಲಿ ವಿಶೇಷ ಪೊಲೀಸ್ ಪೆಟ್ರೋಲಿಂಗ್ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹಾಗೂ ಕಾನೂನುಬಾಹಿರ ಪೋಸ್ಟ್‌ಗಳ ಮೇಲೆ ವಿಶೇಷ ನಿಗಾವಹಿಸಬೇಕೆಂದು ಒತ್ತಾಯಿಸಿದರು.

ತಾಲೂಕು ಮಟ್ಟದಲ್ಲಿ ವಿಶೇಷ ನಿಯಂತ್ರಣ ಕೊಠಡಿ ಸ್ಥಾಪಿಸಿ ಸಾರ್ವಜನಿಕರಿಂದ ದೂರು ಸ್ವೀಕರಿಸಲು ಸಹಾಯವಾಣಿ ಪ್ರಕಟಿಸಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ, 2023 ಅಡಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಕಾನೂನುಗಳ ಗೌರವ ಕಾಪಾಡಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪದಾಧಿಕಾರಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನಾ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಪರಮೇಶಗೌಡ, ವಿಭಾಗೀಯ ಕಾರ್ಯದರ್ಶಿ ನವೀನ್, ರಾಮನಗರ ತಾಲೂಕು ಅಧ್ಯಕ್ಷ ರಾಘವೇಂದ್ರ, ಹಾರೋಹಳ್ಳಿ ತಾಲೂಕು ಅಧ್ಯಕ್ಷ ಕುಮಾರ್ , ಪದಾಧಿಕಾರಿಗಳಾದ ಸಾಗರ್, ರಾಜಗೋಪಾಲ್, ಸ್ವಾಮಿ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.

21ಕೆಆರ್ ಎಂಎನ್ 2.ಜೆಪಿಜಿ

ಶ್ರೀ ರಾಮಸೇನಾ ಪದಾಧಿಕಾರಿಗಳು ರಾಮನಗರ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರಸಭೆ ಅಧ್ಯಕ್ಷರಾಗಿ ಭವ್ಯಾ ಮಂಜುನಾಥ್ ಅವಿರೋಧ ಆಯ್ಕೆ
ಬಿಜೆಪಿ-ಕಾಂಗ್ರೆಸ್‌ ಹೈಡ್ರಾಮ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು