ಕನ್ನಡಪ್ರಭ ವಾರ್ತೆ ಮಂಗಳೂರು
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ, ಈ ಹಬ್ಬವನ್ನು ಇಸ್ಕಾನ್ ದೇವಸ್ಥಾನದಿಂದ ಪ್ರಾರಂಭಿಸಿ ಶಾರದಾ ವಿದ್ಯಾಲಯ ಮೈದಾನದಲ್ಲಿ ಮುಂದುವರಿಸಲಾಗುತ್ತದೆ. ಶ್ರೀಕೃಷ್ಣ ಬಲರಾಮ ದೇವರಿಗೆ ರಾಮ- ಲಕ್ಷ್ಮಣರ ಅಲಂಕಾರ ಮಾಡಿ ಶೋಭಾಯಾತ್ರೆ ನಡೆಸಲಾಗುವುದು. ಸಂಜೆ 4.30ಕ್ಕೆ ಇಸ್ಕಾನ್ ಮಂದಿರದಿಂದ ಶೋಭಾಯಾತ್ರೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಪವಿತ್ರ ರಥದಲ್ಲಿ ಶ್ರೀ ರಾಮ ಲಕ್ಷ್ಮಣ ವಿಗ್ರಹವನ್ನು ಅದ್ಭುತವಾಗಿ ಅಲಂಕರಿಸಿ ಶೋಭಾಯಾತ್ರೆ ನಡೆಸಲಾಗುವುದು. ರಥಯಾತ್ರೆ ಬೆಸಂಟ್ ಶಾಲೆ ರಸ್ತೆ, ಎಂ.ಜಿ.ರಸ್ತೆ, ಪಿವಿಎಸ್ ವೃತ್ತ, ನವಭಾರತ ವೃತ್ತ ರಸ್ತೆಗಳ ಮೂಲಕ ಸಾಗಿ ಶಾರದಾ ವಿದ್ಯಾಲಯ ತಲುಪಲಿದೆ. ರಾಮ, ಲಕ್ಷ್ಮಣ, ಸೀತಾ ಮತ್ತು ಹನುಮಾನ್ ವೇಷ ರೂಪದಲ್ಲಿ ಅಲಂಕರಿಸಿದ ಮಕ್ಕಳು ರಥಯಾತ್ರೆಗೆ ಮೆರುಗು ನೀಡಲಿದ್ದಾರೆ ಎಂದರು.ಶಾರದಾ ವಿದ್ಯಾಲಯದ ಮೈದಾನದಲ್ಲಿ ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ನೃತ್ಯ, ಸಂಗೀತ, ನಾಟಕ ಮತ್ತು ಇತರ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಲಿವೆ. ಸಂಜೆ 6ಕ್ಕೆ ಶ್ರೀರಾಮ, ಲಕ್ಷ್ಮಣ, ಸೀತಾ ಮಹಾ ಅಭಿಷೇಕ, ಸಂಜೆ 6.30ಕ್ಕೆ ಭಜನೆ, ಕೀರ್ತನೆ ಮತ್ತು ಇತರ ಧಾರ್ಮಿಕ ಪ್ರವಚನ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
ಇಸ್ಕಾನ್ ಮಂಗಳೂರು ಸಂಘಟನಾ ಕಾರ್ಯದರ್ಶಿ ಸುಂದರ ಗೌರದಾಸ, ದೇವಕಿತನಯದಾಸ, ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ ಇದ್ದರು.