ಕುಂಟಾಡಿಯಲ್ಲಿ ಶ್ರೀರಾಮಕೃಷ್ಣ ಕ್ರೆಡಿಟ್‌ ಕೋ ಓಪರೇಟಿವ್‌ ಸೊಸೈಟಿ ವಿಸ್ತರಣಾ ಕೌಂಟರ್‌

KannadaprabhaNewsNetwork |  
Published : Jun 19, 2025, 11:50 PM IST
ಶ್ರೀರಾಮಕೃಷ್ಣ ಕ್ರೆಡಿಟ್‌ ಕೋ ಓಪರೇಟಿವ್‌ ಸೊಸೈಟಿಯ ಕುಂಟಾಡಿ ವಿಸ್ತರಣಾ ಕೌಂಟರ್‌ನ್ನು ಡಾ.ಎಂ.ಎನ್‌.ಆರ್‌.ಉದ್ಘಾಟಿಸುತ್ತಿರುವುದು  | Kannada Prabha

ಸಾರಾಂಶ

ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದಲ್ಲಿ ಭಾನುವಾರ ಶ್ರೀರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಕಾರ್ಕಳ ಶಾಖೆಯ ವಿಸ್ತರಣಾ ಕೌಂಟರ್ ಉದ್ಘಾಟನೆ ನೆರವೇರಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಸಹಕಾರಿ ಕ್ಷೇತ್ರವು ಜನರ ಬಳಿ ತೆರಳಿ ಸಮರ್ಪಕ ಸೇವೆ ನೀಡುವುದರಿಂದ, ರಾಷ್ಟ್ರೀಕೃತ ಬ್ಯಾಂಕ್‌ಗಿಂತ ವಿಭಿನ್ನವಾಗಿದೆ. ಗ್ರಾಮಾಂತರ ಪ್ರದೇಶದ ಜನತೆಗೆ ನೆರವಾಗುವ ಉದ್ದೇಶದಿಂದ, ಇದೀಗ ಕುಂಟಾಡಿಯಲ್ಲಿ ವಿಸ್ತರಣಾ ಕೌಂಟರ್ ತೆರೆಯಲಾಗಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದಲ್ಲಿ ಭಾನುವಾರ ಶ್ರೀರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಕಾರ್ಕಳ ಶಾಖೆಯ ವಿಸ್ತರಣಾ ಕೌಂಟರ್ ಉದ್ಘಾಟಿಸಿ ಮಾತನಾಡಿದರು. ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಆಡಳಿತ ಮೊಕ್ತೇಸರ ಕೆ. ಪ್ರಥ್ವಿರಾಜ್ ಬಿ. ರೈ ತಿರ್ತಬೆಟ್ಟು ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮೂರಿನಲ್ಲಿ ಹುಟ್ಟಿದವರು ಐ.ಎ.ಎಸ್, ಕೆ.ಎ.ಎಸ್ ಹಾಗೂ ನ್ಯಾಯಾಧೀಶರು ಆಗಿರುವುದು ಈ ಕುಂಟಾಡಿಯ ಹೆಮ್ಮೆ. ಇದೀಗ ಬ್ಯಾಂಕಿಗ್ ವ್ಯವಹಾರಕ್ಕೂ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸಿ ಕೊಡಲಾಗಿದೆ ಎಂದರು.

ವಿಷನ್ ೨೦೩೦: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ಜೈರಾಜ್ ಬಿ. ರೈ ಮಾತನಾಡಿ, ೨೦೩೦ರ ಸಾಲಿಗೆ ನಮ್ಮ ಸಹಕಾರಿ ಸಂಸ್ಥೆಯು ೨ ಸಾವಿರ ಕೋಟಿ ರು. ವ್ಯವಹಾರ, ೨೦ ರಿಂದ ೨೫ ಕೋಟಿ ರು. ಲಾಭದ ಜೊತೆಗೆ ೩೧ ಶಾಖೆಯಿಂದ ೪೦ ಶಾಖೆಯನ್ನು ಹೊಂದುವ ಗುರಿ ಇರಿಸಿಕೊಂಡಿದ್ದೇವೆ ಎಂದರು.

ಕಾರ್ಕಳದವರೇ ಆದ, ಸಹಕಾರ ರಂಗದ ಅಪೂರ್ವ ಸಾಧಕ ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರನ್ನು ಕುಂಟಾಡಿ ಗ್ರಾಮಸ್ಥರು ಹಾಗೂ ಶ್ರೀ ರಕ್ತೇಶ್ವರೀ ದೈವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಅಭಿಮಾನಪೂರ್ವಕವಾಗಿ ಅಭಿನಂದನೆಯನ್ನು ಸಲ್ಲಿಸಿ ಸನ್ಮಾನಿಸಲಾಯಿತು.

ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಪ್ರಧಾನ ಅರ್ಚಕ ಶ್ರೀ ರಂಗನಾಥ ಭಟ್, ನವೋದಯ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸುನಿಲ್ ಕುಮಾರ್ ಜೈನ್, ಊರಿನ ಪ್ರಮುಖರಾದ ಪ್ರವೀಣ್ ಪಾಂಡಿ ಕುರ್ಮಳಿಗುತ್ತು, ಮೋಹನ್‌ದಾಸ್ ಹೆಗ್ಡೆ ಅಡಪ್ಪಗುತ್ತು, ಸಂಪತ್ ಹೆಗ್ಡೆ ಬಂಜಿನಡ್ಕಗುತ್ತು, ಸುಭಾಶ್ಚಂದ್ರ ಹೆಗ್ಡೆ ಮಾಭಿಗುತ್ತು, ಚಂದ್ರಯ್ಯ ಬೋಂಟ್ರ ಗಡಿ ಪ್ರಧಾನರು, ಬೆರ್ಮನಬೆಟ್ಟು ಬರ್ಕೆ, ಜಯ ಪೂಜಾರಿ ಕುಲಬರ್ಕೆ, ಅಣ್ಣಿಬೋಂಟ್ರ ಪರಾಡಿ ಬರ್ಕೆ, ಯೋಗೀಶ್ ಬೋಂಟ್ರ ಕಲ್ಲಾಪು ಬರ್ಕೆ, ಸಂಘದ ನಿರ್ದೇಶಕರಾದ ರವೀಂದ್ರನಾಥ ಜಿ. ಹೆಗ್ಡೆ, ಕುಂಬ್ರ ದಯಾಕರ ಆಳ್ವ, ಪಿ.ಬಿ. ದಿವಾಕರ ರೈ, ಶಾಖಾ ವ್ಯವಸ್ಥಾಪಕ ನವೀನ್ ಕುಮಾರ್ ಹಾಗೂ ಸಂಘದ ಮಹಾಪ್ರಬಂಧಕ ಗಣೇಶ್ ಜಿ.ಕೆ ಇದ್ದರು.

ಕುಂಟಾಡಿ ಕೃಷ್ಣರಾಜ್ ರೈ ಸ್ವಾಗತಿಸಿದರು. ಪತ್ರಕರ್ತ ನವೀನ್ ಸಾಲಿಯಾನ್ ನಿರೂಪಿಸಿದರು. ನಿರ್ದೇಶಕ ಪಿ.ಬಿ. ದಿವಾಕರ್ ರೈ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು
ಸಿ.ಟಿ.ರವಿ ‘ಪಾಕ್‌ ನಾಲಿಗೆ’ ಹೇಳಿಕೆಗೆ ಸದನವೇ ಬಲಿ