ಚಿಕ್ಕಬೊಮ್ಮನಹಳ್ಳಿಯಲ್ಲಿ ಶ್ರೀರಂಗನಾಥಸ್ವಾಮಿ ರಥೋತ್ಸವ

KannadaprabhaNewsNetwork |  
Published : Apr 01, 2025, 12:50 AM IST
ಅರಕಲಗೂಡು ತಾಲೂಕು ಕೊಣನೂರು ಹೋಬಳಿಯ ಚಿಕ್ಕಬೊಮ್ಮನಹಳ್ಳಿ ದಿವ್ಯ ಕ್ಷೇತ್ರದ ಶ್ರೀ ರಂಗನಾಥಸ್ವಾಮಿ ಮಹಾ ರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. | Kannada Prabha

ಸಾರಾಂಶ

ದೇವಾಲಯದಲ್ಲಿ ಪೂಜೆಯನ್ನು ಪೂರ್ಣಗೊಳಿಸಿದ ನಂತರ ವಿವಿಧ ಬಗೆಯ ಪುಷ್ಪಗಳಿಂದ ಸರ್ವಾಲಂಕೃತಗೊಂಡ ಸ್ವಾಮಿಯ ಉತ್ಸವ ಮೂತಿಯನ್ನು ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಶ್ರೀ ಶಂಭುನಾಥ ಸ್ವಾಮೀಜಿ ರಥಕ್ಕೆ ಪೂಜೆ ಸಲ್ಲಿಸಿ ಕದಲಿ ಕಡಿಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಸ್ವಾಮಿಯ ಹರ್ಷೋಧ್ಘಾರ ಮಾಡುತ್ತಾ ವಿವಿಧೆಡೆಗಳಿಂದ ಆಗಮಿಸಿದ ಭಕ್ತರು ರಥ ಎಳೆದು, ರಥವನ್ನು ದೇವಾಲಯದ ಬಳಿಯಿಂದ ಚಾಮುಂಡೇಶ್ವರಿ ದೇವಾಲಯದವರೆಗೆ ಎಳೆದು ನಂತರ ದೇಗುಲದ ಬಳಿಗೆ ತಂದು ನಿಲ್ಲಿಸಲಾಯಿತು. ರಥದ ಮುಂದೆ ಸಾಗಿದ ಪೂಜಾ ಕುಣಿತ, ವೀರಗಾಸೆ ಕುಣಿತಗಳು ಮನಸೆಳೆದವು.

ಕನ್ನಡಪ್ರಭ ವಾರ್ತೆ ಅರಕಲಗೂಡು

ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಕ್ಷೇತ್ರದ ಶ್ರೀ ರಂಗನಾಥಸ್ವಾಮಿ ಮಹಾರಥೋತ್ಸವದಲ್ಲಿ ಭಕ್ತರು ಭಕ್ತಿಯಿಂದ ರಥ ಎಳೆದರು.

ಕೊಣನೂರು ಹೋಬಳಿಯ ಚಿಕ್ಕಬೊಮ್ಮನಹಳ್ಳಿಯ ಶ್ರೀ ರಂಗನಾಥಸ್ವಾಮಿ ಮಹಾ ರಥೋತ್ಸವದ ಅಂಗವಾಗಿ ದೇಗುಲದ ಆವರಣದಲ್ಲಿ ವಿವಿಧ ಹೋಮಹವನ, ಅಭಿಷೇಕ, ಧಾರ್ಮಿಕ ವಿಧಿವಿದಾನಗಳು ಜರುಗಿದವು.

ದೇವಾಲಯದಲ್ಲಿ ಪೂಜೆಯನ್ನು ಪೂರ್ಣಗೊಳಿಸಿದ ನಂತರ ವಿವಿಧ ಬಗೆಯ ಪುಷ್ಪಗಳಿಂದ ಸರ್ವಾಲಂಕೃತಗೊಂಡ ಸ್ವಾಮಿಯ ಉತ್ಸವ ಮೂತಿಯನ್ನು ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಶ್ರೀ ಶಂಭುನಾಥ ಸ್ವಾಮೀಜಿ ರಥಕ್ಕೆ ಪೂಜೆ ಸಲ್ಲಿಸಿ ಕದಲಿ ಕಡಿಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಸ್ವಾಮಿಯ ಹರ್ಷೋಧ್ಘಾರ ಮಾಡುತ್ತಾ ವಿವಿಧೆಡೆಗಳಿಂದ ಆಗಮಿಸಿದ ಭಕ್ತರು ರಥ ಎಳೆದು, ರಥವನ್ನು ದೇವಾಲಯದ ಬಳಿಯಿಂದ ಚಾಮುಂಡೇಶ್ವರಿ ದೇವಾಲಯದವರೆಗೆ ಎಳೆದು ನಂತರ ದೇಗುಲದ ಬಳಿಗೆ ತಂದು ನಿಲ್ಲಿಸಲಾಯಿತು. ರಥದ ಮುಂದೆ ಸಾಗಿದ ಪೂಜಾ ಕುಣಿತ, ವೀರಗಾಸೆ ಕುಣಿತಗಳು ಮನಸೆಳೆದವು.

ಶ್ರೀ ರಂಗನಾಥಸ್ವಾಮಿ, ಆಂಜನೇಯ, ಲಕ್ಮೀ, ಗಣಪತಿ ವಿಗ್ರಹಗಳಿಗೆ ಮಾಡಿದ್ದ ವಿಶೇಷ ಹೂವಿನ ಅಲಂಕಾರ ಭಕ್ತರ ಮನಸೆಳೆಯಿತು. ನಂತರ ನೆರೆದಿದ್ದ ಭಕ್ತ ಸಮೂಹ ದೇವಾಲಯಕ್ಕೆ ತೆರಳಿ ಶ್ರೀ ರಂಗನಾಥ ಸ್ವಾಮಿಯ ದರ್ಶನ ಪಡೆದರು. ರಥೋತ್ಸವದ ವೇಳೆ ಹಾಸನದ ಬಿಜಿಎಸ್ ಮಹಿಳಾ ಭಜನಾ ಮಂಡಳಿಯ ಮಹಿಳೆಯರು ಮಾಡಿದ ಭಜನೆಯು ರಥೋತ್ಸವಕ್ಕೆ ಮೆರುಗು ತಂದಿತು.

ಕಬ್ಬಳಿಮಠದ ಶಿವಪುತ್ರನಾಥ ಸ್ವಾಮೀಜಿ, ಮಾಳೇನಹಳ್ಳಿ ಅಣ್ಣೆಗೌಡ, ಬನ್ನೂರು ಅಣ್ಣಯ್ಯ, ಬೊಮ್ಮನಹಳ್ಳಿ ಕೋಡಿಗೌಡ್ರು, ಜಿ ಪಂ ಮಾಜಿ ಸದಸ್ಯ ಅಪ್ಪಣ್ಣ, ಹೆಚ್.ಎಸ್. ಶಂಕರ್, ಬೊಮ್ಮನಹಳ್ಳಿ ಕೃಷ್ಣ, ಬೆಟ್ಟಗಳಲೆ ಮಾಧವ, ಆರಕ್ಷಕ ಉಪ ನಿರೀಕ್ಷಿತ ಗಿರೀಶ್, ಪ್ರಾಂಶುಪಾಲ ಹೊಡೆನೂರು ಮಹೇಶ್ ಮತ್ತು ವಿವಿಧೆಡೆಗಳಿಂದ ಆಗಮಿಸಿದ ಭಕ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು