ಕನ್ನಡಪ್ರಭ ವಾರ್ತೆ ಉಡುಪಿ
ಪುತ್ತಿಗೆ ಶ್ರೀಪಾದರು ಕಳೆದ ಹತ್ತು ವರ್ಷಗಳಿಂದ ಪಾಡಿಗಾರದಲ್ಲಿರುವ ತಮ್ಮ ಮಠದಲ್ಲಿ ಲೌಕಿಕ - ವೈದಿಕ ಶಿಕ್ಷಣವನ್ನು ಪ್ರಾರಂಭಿಸಿ ಅನೇಕ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಸಮಾಜಕ್ಕೆ ನೀಡುತ್ತಿದ್ದಾರೆ. ಈ ಅನುಭವದ ಪರಿಷ್ಕೃತ ರೂಪವಾಗಿ ಅದಕ್ಕಾಗಿಯೇ ನಿರ್ಮಿಸಿದ ಭವ್ಯ ಕಟ್ಟಡದಲ್ಲಿ ಈ ವರ್ಷದಿಂದಲೇ ಎಲ್ಕೆಜಿಯಿಂದ ಎಸ್ಎಸ್ಎಲ್ಸಿ ವರೆಗಿನ ಶಿಕ್ಷಣವನ್ನು ನೀಡಲು ಶ್ರೀಪಾದರು ಸಂಕಲ್ಪಿಸಿದ್ದಾರೆ.
ಆ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಶ್ರೀಪಾದರು ಶ್ರೀ ವೇದವ್ಯಾಸ ದೇವರ ಪೂಜೆ ನೆರವೇರಿಸಿ ಸರ್ವಜ್ಞ ಪೀಠದಿಂದಲೇ ಮಕ್ಕಳಿಗೆ ಅಕ್ಷರಾಭ್ಯಾಸವನ್ನು ಮಾಡಿಸಿದರು. ಈ ಅಪೂರ್ವವಾದ ಸುಯೋಗವನ್ನು ಹೊಂದಿದ ಮಕ್ಕಳ ಪೋಷಕರು ಧನ್ಯತೆಯ ಭಾವವನ್ನು ವ್ಯಕ್ತಪಡಿಸಿದರು.ಶ್ರೀಪಾದರು ಮಕ್ಕಳ ಕೈಯಿಂದಲೇ ಶ್ರೀ ಕೃಷ್ಣಾಯ ನಮಃ, ಶ್ರೀ ಗಣೇಶಾಯ ನಮಃ ಬರೆಯಿಸುವ ಮೂಲಕ ಮತ್ತು ಶಾಂತಿ ಮಂತ್ರವನ್ನು ಮಕ್ಕಳಿಗೆ ಭೋದಿಸುವ ಮೂಲಕ ಸುಗುಣ ಪಾಠ ಶಾಲೆಗೆ ವಿದ್ಯುಕ್ತ ಚಾಲನೆ ನೀಡಿದರು.
ಈ ಸ್ಕೂಲಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಾರ್ಯದರ್ಶಿ ಪ್ರಮೋದ್ ಸಾಗರ್ ಅವರನ್ನು (+91 9986030899) ರಲ್ಲಿ ಸಂಪರ್ಕಿಸಬಹುದಾಗಿದೆ.