ಕನ್ನಡಪ್ರಭ ವಾರ್ತೆ ಮಹಾಲಿಂಗಪುರ(ರ-ಬ)
ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೆಸರಗೊಪ್ಪದಲ್ಲಿ ಸಮುದಾಯ ಭವನದ ಕಾಮಗಾರಿ ಆರಂಭಗೊಂಡು ಸುಮಾರು ಒಂದು ದಶಕಗತಿಸಿದ್ದು, ಇನ್ನೂ ೧೦ರಿಂದ ೧೫ ಪ್ರತಿಶತ ಕೆಲಸ ಬಾಕಿ ಇದೆ. ಇಲ್ಲಿಯವರೆಗೆ ಅಂದಾಜು ₹೨.೫ ಕೋಟಿ ವ್ಯಯಿಸಲಾಗಿದೆ. ಈ ಕೆಲಸಕ್ಕೆ ಸರ್ವರೂ ತನು- ಮನ- ಧನ ನೀಡಿ ಸಹಕರಿಸಿದ್ದಾರೆ ಅವರೆಲ್ಲರಿಗೂ ಸಮಾಜದ ವತಿಯಿಂದ ಅಭಿನಂದನೆ ತಿಳಿಸಿದರು.
ಕಾರ್ಯಕ್ರಮ ರೂಪುರೇಷೆ:ಅಂದು ಬೆಳಗ್ಗೆ ೮ ಗಂಟೆಗೆ ಶ್ರೀಭಗೀರಥ ಭಾವ ಚಿತ್ರ, ಪುರುಷೋತ್ತಮಾನಂದಶ್ರೀಗಳ ಬೆಳ್ಳಿ ರಥ ಹಾಗೂ ಕುಂಬ ಮೇಳದೊಂದಿಗೆ ಮೆರವಣಿಗೆ ಶ್ರೀ ಬಿಸಿಲುಸಿದ್ಧೇಶ್ವರ ದೇವಸ್ಥಾನದಿಂದ ಗ್ರಾಮದ ಭಗಿರಥ ದೇವಸ್ಥಾನ ವರೆಗೆ ಸಾಗಿ, ನಂತರ ಹೋಮ ಹವನ ನಡೆಯುವುದು. ಮಧ್ಯಾಹ್ನ ಭಜನೆ ರಾತ್ರಿ ಸೋಲಿಲ್ಲದ ಸರದಾರ ನಾಟಕ ಪ್ರದರ್ಶನ ನಡೆಯುವುದು.
ಸಭೆಯಲ್ಲಿ ಉಪ್ಪಾರ ಸಂಘದ ಭೀಮಪ್ಪ ಸಸಾಲಟ್ಟಿ, ಮಾರುತಿ ಬ್ಯಾಕೋಡ, ಮಾರುತಿ ಕರೋಶಿ, ವಿಠ್ಠಲ್ ಕಲ್ಲಟ್ಟಿ, ಪರಪ್ಪ ಬ್ಯಾಕೋಡ, ಮಾರುತೆಪ್ಪ ತೇಜಪ್ಪಗೋಳ, ಅಲ್ಲಪ್ಪ ದಡ್ಡಿಮನಿ, ಭೀಮಪ್ಪ ಬ್ಯಾಕೋಡ, ಮಲ್ಲಪ್ಪ ತೇಜಪ್ಪಗೋಳ, ಬಾಳಪ್ಪ ದಡ್ಡಿಮನಿ, ತಿಪ್ಪಣ್ಣ ಬ್ಯಾಕೋಡ್, ವಿಠ್ಠಲ್ ಶಿರೋಳ, ಕರೆಪ್ಪ ಬ್ಯಾಕೋಡ, ಶಿವಾನಂದ ಬ್ಯಾಕೋಡ, ವಸಂತ ಜಗದಾಳ ಊರಿನ ಹಾಗೂ ಸಮಾಜದ ಪ್ರಮುಖರಾದ ದುಂಡಪ್ಪ ಜಾಧವ, ಡಾ.ಎಂ. ಬಿ ಪೂಜಾರಿ, ಹುಲೇಪ್ಪ ಬ್ಯಾಕೋಡ, ಮಹಾದೇವ ಸಸಾಲಟ್ಟಿ, ಭೀಮಪ್ಪ ಸಸಾಲಟ್ಟಿ, ಭರಮಪ್ಪ ದಡ್ಡಿಮನಿ, ಬಸವರಾಜ ಜಿಡ್ಡಿಮನಿ, ಅಡಿವೆಯ್ಯ ಮಠಪತಿ, ಶಿವಾಜಿ ತೇಜಪ್ಪಗೋಳ, ಸಂಗಪ್ಪ ಪೂಜಾರಿ, ಧರೆಪ್ಪ ಸಸಾಲಟ್ಟಿ, ಸತೀಶ್ ಬ್ಯಾಕೋಡ ಸೇರಿದಂತೆ ಅನೇಕರಿದ್ದರು.