ಬಿಡಿಸಿಸಿ ಬ್ಯಾಂಕ್‌ ಚುನಾವಣೆಗೆ ಶ್ರೀಕಾಂತ ಸ್ಪರ್ಧೆ

KannadaprabhaNewsNetwork |  
Published : Aug 15, 2025, 01:02 AM IST
ಬೆಳಗಾವಿಯಲ್ಲಿ ನಡೆದ ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಸದಸ್ಯರ ಸಭೆಯಲ್ಲಿ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು  ಮಾತನಾಡಿದರು.  | Kannada Prabha

ಸಾರಾಂಶ

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಪ್ಯಾನೆಲ್‌ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ಅಕ್ಟೋಬರ್ ತಿಂಗಳಲ್ಲಿ ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಪ್ಯಾನೆಲ್‌ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಕಟಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ರಾಮದುರ್ಗ ತಾಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯವರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಢವಣ ಅವರೇ ಮತ್ತೊಂದು ಬಾರಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಹೆಚ್ಚಿನ ಬಹುಮತದಿಂದ ಆರಿಸಿ ತರುವಂತೆ ಮತದಾರರಿಗೆ ಅವರು ಮನವಿ ಮಾಡಿದರು.

ಬಿಡಿಸಿಸಿ ಬ್ಯಾಂಕಿನ ಚುನಾವಣಾ ಪ್ರಚಾರಕ್ಕೂ ಮುನ್ನ ಅಂದರೆ ಎರಡು ತಿಂಗಳ ಹಿಂದೆಯೇ ರಾಮದುರ್ಗ ತಾಲೂಕಿನ ಅಭ್ಯರ್ಥಿ ಆಯ್ಕೆ ಮಾಡುವುದರ ಸಂಬಂಧ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಸೇರಿದಂತೆ ಅನೇಕ ಗಣ್ಯರ ಅಭಿಪ್ರಾಯ ಕೇಳಲಾಗಿತ್ತು. ಸುಮಾರು ಮೂರು ಬಾರಿ ನಿಯೋಜಿತ ಸಭೆಯನ್ನು ಮುಂದೂಡಲಾಗಿತ್ತು. ಪ್ರತಿ ಸಂದರ್ಭದಲ್ಲೂ ಯಾದವಾಡ ಸಹೋದರರು ಬ್ಯಾಂಕಿನ ಚುನಾವಣೆ ಸಂಬಂಧ ತಮ್ಮ ಗುಟ್ಟನ್ನು ಬಿಟ್ಟುಕೊಡಲಿಲ್ಲ ಎಂದರು.

ಅನೇಕ ಬಾರಿ ಮಹಾದೇವಪ್ಪ ಯಾದವಾಡ ಮತ್ತು ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಅವರನ್ನು ಸಂಪರ್ಕಿಸಿದರೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಸ್ಪಷ್ಟ ನಿರ್ಧಾರ ಹೇಳಲಿಲ್ಲ. ನೀವು ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ಧವೆಂದು ನಂತರ ನಡೆದ ಸಭೆಯಲ್ಲಿ ಹೇಳಿದರು. ಈ ಸಂಬಂಧ ಬೆಳಗಾವಿ, ರಾಮದುರ್ಗ ಮತ್ತು ಮೂಡಲಗಿ ಭೇಟಿಯ ಸಂದರ್ಭದಲ್ಲಿ ಮಲ್ಲಣ್ಣ ಯಾದವಾಡ ಅವರು ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದನ್ನು ಹೇಳಲಿಲ್ಲ ಎಂದು ಹೇಳಿದರು.

ಬದಲಿಗೆ ಬೆಳಗಾವಿಯಲ್ಲಿ ಬಿಡಿಸಿಸಿ ಬ್ಯಾಂಕಿಗೆ ನಾನು ಸಹ ಆಕಾಂಕ್ಷಿಯಾಗಿದ್ದೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಎಲ್ಲರೂ ಸೇರಿಕೊಂಡು ಚುನಾವಣೆಯನ್ನು ಮಾಡೋಣ. ಒಗ್ಗಟ್ಟಿನಿಂದ ಅಭ್ಯರ್ಥಿಯನ್ನು ಹಾಕೋಣವೆಂದರೂ ಇದಕ್ಕೆ ಅವರು ಸೊಪ್ಪು ಹಾಕಲಿಲ್ಲ. ಈಗಾಗಲೇ ಪ್ರಚಾರ ಆರಂಭಿಸಿರುವ ಮಲ್ಲಣ್ಣ ಯಾದವಾಡ ಅವರ ನಿರ್ಧಾರದಿಂದ ನಮ್ಮ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಹೀಗಾಗಿ ರಾಮದುರ್ಗ ತಾಲೂಕಿನ ಎಲ್ಲ ಪಿಕೆಪಿಎಸ್ ಆಡಳಿತ ಮಂಡಳಿಯ ಸದಸ್ಯರನ್ನು ಕರೆದು ಒಟ್ಟಾರೆ ಅಭಿಪ್ರಾಯಗಳನ್ನು ಸಂಗ್ರಹಿಸಲು ಸಭೆಯನ್ನು ಕರೆದಿರುವುದಾಗಿ ಅವರು ಹೇಳಿದರು. ಈಗಲೂ ಕಾಲ ಮಿಂಚಿಲ್ಲ. ನಾವು ಮಲ್ಲಣ್ಣ ಯಾದವಾಡ ಅವರೊಂದಿಗೆ ಚರ್ಚಿಸಲು ತಯಾರಿದ್ದೇವೆ. ಢವಣ ಅವರದ್ದು ಈ ಚುನಾವಣೆಯು ಕಡೆಯದ್ದಾಗಿದೆ. ಇದೊಂದು ಬಾರಿ ಢವಣ ಅವರಿಗೆ ಅವಕಾಶ ಮಾಡಿಕೊಡೋಣ.‌ ಮುಂದಿನ ಬಾರಿ ಮಲ್ಲಣ್ಣ ಅವರು ಸ್ಪರ್ಧೆ ಮಾಡಲಿ ಎಂದು ತಿಳಿಸಿದರು.

ಮಲ್ಲಣ್ಣ ಅವರು ಸ್ಪರ್ಧೆ ಮಾಡುವ ವಿಚಾರವನ್ನು ಯಾರಿಗೂ ತಿಳಿಸದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ನಮ್ಮ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಢವಣ ಅವರೇ ಅಧಿಕೃತ ಅಭ್ಯರ್ಥಿಯಾಗಿದ್ದು, ಈ ಸಂಬಂಧ ಯಾದವಾಡ ಸಹೋದರರೊಂದಿಗೆ ಮಾತುಕತೆಗೆ ಸಿದ್ಧ ಇರುವುದಾಗಿ ಅವರು ಸ್ಪಷ್ಟಪಡಿಸಿದರು.

ಈ ವೇಳೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗೋಡೆ, ಮಾಜಿ ಶಾಸಕ ಅರವಿಂದ ಪಾಟೀಲ, ರಾಜೇಂದ್ರ ಅಂಕಲಗಿ, ಬಿ.ಎಸ್. ಬೆಳವಣಕಿ, ಸಿ.ಬಿ.ಪಾಟೀಲ, ಡಾ. ಕೆ.ವಿ.ಪಾಟೀಲ, ರಾಮದುರ್ಗ ಕ್ಷೇತ್ರದ ಅಭ್ಯರ್ಥಿ ಶ್ರೀಕಾಂತ ಢವಣ ಅವರು ಉಪಸ್ಥಿತರಿದ್ದರು.

ಇಂದಿನ ಸಭೆಯಲ್ಲಿ ರಾಮದುರ್ಗ ತಾಲೂಕಿನ 36 ಪಿಕೆಪಿಎಸ್‌ಗಳ ಪೈಕಿ ಸುಮಾರು 29 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು ಕೂಡಿಕೊಂಡು ಶ್ರೀಕಾಂತ ಢವಣ ಅವರನ್ನು ಅಭ್ಯರ್ಥಿಯನ್ನಾಗಿ ಒಕ್ಕೂರಲಿನಿಂದ ಹೇಳಿದ್ದರಿಂದ ಢವಣ ಅವರ ಹೆಸರನ್ನು ಅಂತಿಮ ಮಾಡಲಾಗಿದೆಂದು ಬಾಲಚಂದ್ರ ಜಾರಕಿಹೊಳಿ, ಶಾಸಕ ಮತ್ತು ಬೆಮುಲ್ ಅಧ್ಯಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ