ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಅಕ್ಕಿಹೆಬ್ಬಾಳು ವಲಯದ ಹೊನ್ನಾರು ವೇದಿಕೆಯ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಅಕ್ಕಿಹೆಬ್ಬಾಳು ಮತ್ತು ದಡದಹಳ್ಳಿ ಗ್ರಾಮಸ್ಥರ ಆಶ್ರಯದಲ್ಲಿ ಆಯೋಜಿಸಿದ್ದ ಶ್ರೀಸೀತಾರಾಮ ಲಕ್ಷ ತುಳಸಿ ಅರ್ಚನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಆತ್ಮಸ್ಥೆರ್ಯದೊಂದಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಸದೃಢರಾದರೆ ಸಮಾಜದಲ್ಲಿ ಸುಖಿ ಜೀವನ ನಡೆಸಬಹುದೆಂಬ ಮೂಲ ಆಶಯ ಇಟ್ಟುಕೊಂಡು ಗ್ರಾಮಾಭಿವೃದ್ಧಿ ಯೋಜನೆ ಸ್ಥಾಪಿಸಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಕನಸು ನನಸಾಗಿದೆ ಎಂದರು.ಮೈಕ್ರೋ ಪೈನಾಲ್ಸ್ ಗಳ ಕಿರುಕುಳ ಹೆಚ್ಚುತ್ತಿರುವುದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಆದರೆ, ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಸಂಸ್ಥೆ ಮೂಲಕ ಎಲ್ಲರ ರಾಜ್ಯಾದ್ಯಂತ ಸಮಾಜಮುಖಿ ಕಾರ್ಯಕ್ರಮ ಕೈಗೊಂಡು ಒಂದು ನಂಬಿಕೆಯ ಆಧಾರದ ಮೇಲೆ ಯಾವುದೇ ದಾಖಲೆಗಳ ಜಂಜಾಟವಿಲ್ಲದೆ ಸಾಲ ನೀಡುತ್ತಿದೆ ಎಂದರು.
ಜೆಡಿಎಸ್ ಮುಖಂಡ ಎ.ಆರ್.ರಘು ಮಾತನಾಡಿ, ಗ್ರಾಮೀಣ ಮಹಿಳೆಯರ ಆರ್ಥಿಕ ಸದೃಢತೆ, ಆರ್ಥಿಕ ಸಶಕ್ತಿಕರಣ, ಗ್ರಾಮಾಭಿವೃದ್ಧಿ ಪರಿಕಲ್ಪನೆಯಲ್ಲಿ ಸ್ಥಾಪಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಮೂಲ ಉದ್ದೇಶ ಹಲವು ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಶೇ.65 ರಷ್ಟು ಪ್ರಗತಿ ಸಾಧಿಸುತ್ತಿದೆ ಎಂದರು.