ಶೃಂಗೇರಿ ಮುಂದುವರಿದ ಮಳೆ ಆರ್ಭಟ : ಅಲ್ಲಲ್ಲಿ ಗುಡ್ಡಕುಸಿತ,

KannadaprabhaNewsNetwork |  
Published : Sep 06, 2024, 01:09 AM IST
್ೋೇೇೇೇ | Kannada Prabha

ಸಾರಾಂಶ

ಶೃಂಗೇರಿ, ತಾಲೂಕಿನಾದ್ಯಂತ ನಾಲ್ಕೈದು ದಿನಗಳಿಂದ ನಿರಂತರವಾಗಿ ಅಬ್ಬರಿಸಿದ ಮಳೆ ಗುರುವಾರವೂ ಹಗಲಿಡೀ ಗುಡುಗು ಸಹಿತ ಭಾರೀ ಮಳೆ ಸುರಿಯಿತು. ಬುಧವಾರ ರಾತ್ರಿಯಿಂದ ಗುರುವಾರ ಸಂಜೆಯವರೆಗೂ ಆರ್ಭಟಿಸಿತು. ಮಳೆಯ ಆರ್ಭಟದಿಂದ ತುಂಗಾನದಿ ಮತ್ತೆ ತುಂಬಿ ಹರಿಯುತ್ತಿದೆ. ತಾಲೂಕಿನ ವಿವಿಧೆಡೆ ಮತ್ತೆ ಗುಡ್ಡಗಳು ಕುಸಿಯುತ್ತಿದ್ದು, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಿದೆ.

ಮತ್ತೆ ತುಂಬಿ ಹರಿಯುತ್ತಿರವ ತುಂಗೆ । ವಿದ್ಯುತ್,ಮೊಬೈಲ್ ನೆಟ್ ವರ್ಕ್ ವ್ಯತ್ಯಯ ಜನರ ಪರದಾಟ

ಕನ್ನಡಪ್ರಭ ವಾರ್ತೆ, ಶೃಂಗೇರಿ

ತಾಲೂಕಿನಾದ್ಯಂತ ನಾಲ್ಕೈದು ದಿನಗಳಿಂದ ನಿರಂತರವಾಗಿ ಅಬ್ಬರಿಸಿದ ಮಳೆ ಗುರುವಾರವೂ ಹಗಲಿಡೀ ಗುಡುಗು ಸಹಿತ ಭಾರೀ ಮಳೆ ಸುರಿಯಿತು. ಬುಧವಾರ ರಾತ್ರಿಯಿಂದ ಗುರುವಾರ ಸಂಜೆಯವರೆಗೂ ಆರ್ಭಟಿಸಿತು. ಮಳೆಯ ಆರ್ಭಟದಿಂದ ತುಂಗಾನದಿ ಮತ್ತೆ ತುಂಬಿ ಹರಿಯುತ್ತಿದೆ. ತಾಲೂಕಿನ ವಿವಿಧೆಡೆ ಮತ್ತೆ ಗುಡ್ಡಗಳು ಕುಸಿಯುತ್ತಿದ್ದು, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಿದೆ.

ಮೊಬೈಲ್ ನೆಟ್ ವರ್ಕ್ ವ್ಯತ್ಯಯಗೊಳುತ್ತಿದ್ದು ಜನರು ಪರದಾಡುವ ಪರಿಸ್ಥಿತಿ ಉಂಟಾಗಿದೆ.ಗೌರೀ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಮಳೆ ಅಬ್ಬರವೂ ಜೋರಾಗುತ್ತಿದ್ದು ಹಬ್ಬದ ಸಂಭ್ರಮದಲ್ಲಿದ್ದ ಜನರಲ್ಲಿ ನಿರಾಸೆ ಮೂಡಿಸಿದೆ.

ಕೆರೆಕಟ್ಟೆ ನೆಮ್ಮಾರು ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೆ ಭಾರೀ ಮಳೆ ಯಾಗುತ್ತಿರುವುದರಿಂದ ತುಂಗಾನದಿಯಲ್ಲಿ ನೀರು ಅಪಾಯದ ಮಟ್ಟಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜಲಾವೃತಗೊಂಡಿದೆ. ಮಳೆ ಮುಂದುವರಿದಲ್ಲಿ ಪ್ರವಾಹದ ಭೀತಿ ಉಂಟಾಗಲಿದೆ. ಕಿಗ್ಗಾ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ನಂದಿನಿ, ನಳಿನಿ ನದಿಗಳು ತುಂಬಿವೆ.

ಭಾರೀ ಮಳೆಯಿಂದ ಮಂಗಳೂರು, ಶೃಂಗೇರಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರ ತ್ಯಾವಣ ಬಳಿ ಗುಡ್ಡ ಕುಸಿಯುತ್ತಿದ್ದು ಮಣ್ಣು ರಸ್ತೆಯ ಮೇಲೆ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ರಾಜಾನಗರ, ಶಂಕರಾಪುರ, ತನಿಕೋಡು, ಶೃಂಗೇರಿ ಕೊಪ್ಪ ಸಂಪರ್ಕ ಕಲ್ಪಿಸುವ ಆನೆಗುಂದ ಬಳಿಯೂ ಗುಡ್ಡ ಕುಸಿಯುತ್ತಿದೆ. ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಅಪಾಯ ತಂದೊಡ್ಡುತ್ತಿದೆ.

ಕಳೆದೆರೆಡು ದಿನಗಳಿಂದ ಆಗಾಗ ವಿದ್ಯುತ್ ಕಡಿತಗೊಳ್ಳುತ್ತಿರುವುದರಿಂದ ಜನರು ಪರದಾಡಬೇಕಿದೆ. ಪಟ್ಟಣ ಗ್ರಾಮೀಣ ಪ್ರದೇಶಗಳಲ್ಲಿ ಹಗಲು ರಾತ್ರಿ ಮೊಬೈಲ್ ನೆಟ್ ವರ್ಕ ಸಮಸ್ಯೆ ಉಂಟಾಗುತ್ತಿದ್ದು ಜನರು ಅಗತ್ಯ ಕೆಲಸ ಕಾರ್ಯಗಳಿಗೆ ಪರದಾಡುವಂತಹ ವಾತಾವರಣ ನಿರ್ಮಾಣವಾಗಿದೆ. ಗುರುವಾರ ಸಂಜೆಯವರೆಗೂ ಮಳೆ ಆರ್ಭಟ ಮುಂದುವರಿದಿತ್ತು.

5 ಶ್ರೀ ಚಿತ್ರ3-

ಶೃಂಗೇರಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ 169 ರ ಶೃಂಗೇರಿ ತ್ಯಾವಣ ಬಳಿ ಗುಡ್ಡಕುಸಿಯುತ್ತಿರುವುದು.

5 ಶ್ರೀ ಚಿತ್ರ 4-

ಶೃಂಗೇರಿ ಸುತ್ತಮುತ್ತ ಭಾರೀ ಮಳೆಯಾಗುತ್ತಿರುವುದರಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!