- ಬಿಜೆಪಿ ಶಾಸಕರಿಗಿಂತ ಪರಾಜಿತ ಅಭ್ಯರ್ಥಿಯಿಂದ ಹೆಚ್ಚಿನ ಅಭಿವೃದ್ಧಿ ಕೆಲಸ
- ಎರಡು ಸಲ ಶಾಸಕರಾದ ಬಿ.ಪಿ. ಹರೀಶ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ?
- ಭೈರನಪಾದ ಯೋಜನೆ ಭೂಮಿ ಪೂಜೆಯಾದರೂ ಕಾಮಗಾರಿ ಯಾಕೆ ಆರಂಭಿಸಿಲ್ಲ?- - -
ಹರಿಹರದಲ್ಲಿ ಕಾಂಗ್ರೆಸ್ನ ಶ್ರೀನಿವಾಸ ನಂದಿಗಾವಿ ಸಿಎಂ ಸೇರಿದಂತೆ ಸಂಬಂಧಿಸಿದ ಸಚಿವರಿಂದ ಅನುದಾನ ತಂದು ಕೆಲಸ ಮಾಡಿಸುತ್ತಿದ್ದಾರೆ. ಅಲ್ಲಿನ ಬಿಜೆಪಿಯಿಂದ ಬಿ.ಪಿ. ಹರೀಶ 2 ಸಲ ಶಾಸಕರಾಗಿ ಏನು ಕೊಡುಗೆ ನೀಡಿದ್ದಾರೆ? ಕ್ಷೇತ್ರಾಭಿವೃದ್ಧಿ ಬಿಟ್ಟು ಕಾಂಗ್ರೆಸ್ ನಾಯಕರ ವಿರುದ್ಧ ಅಪಪ್ರಚಾರ ಮುಂದುವರಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವರುಣ್ ಬೆಣ್ಣೆಹಳ್ಳಿ ಎಚ್ಚರಿಸಿದರು.
ನಾಲ್ಕು ದಶಕಗಳಿಂದ ರಾಜಕಾರಣ ಮಾಡುತ್ತಿದ್ದೀಯಲ್ಲ, ಹರಿಹರ ಕ್ಷೇತ್ರಕ್ಕೆ ನಿನ್ನ ಕೊಡುಗೆ ಏನು? ಹರಿಹರದ ಕಿರ್ಲೋಸ್ಕರ್ ಕಾರ್ಖಾನೆ ಮುಚ್ಚಿತು. ಅದಕ್ಕೆ ಪರ್ಯಾಯವಾಗಿ ಬೇರೆ ಕೈಗಾರಿಕೆ ತರುವ ಕೆಲಸ ಯಾಕೆ ಮಾಡಿಲ್ಲ? ಶಾಸಕರಾಗಿ 30 ತಿಂಗಳು ಕಳೆದಿವೆ. ಸಿಎಂ, ಜಿಲ್ಲಾ ಸಚಿವರು, ಸಂಬಂಧಿಸಿದ ಇಲಾಖೆ ಸಚಿವರಿಗೆ ಎಷ್ಟು ಅರ್ಜಿಗಳನ್ನು ನೀಡಿದ್ದೀರಿ? 2008ರಲ್ಲಿ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ, ಚಿತ್ರನಟಿ ಪೂಜಾ ಗಾಂಧಿಗೆ ಹೆಲಿಕಾಫ್ಟರ್ನಲ್ಲಿ ಕರೆಸಿ, ಭೂಮಿಪೂಜೆ ಮಾಡಿಸಿದ್ದ ಭೈರನಪಾದ ಏತ ನೀರಾವರಿ ಯೋಜನೆ ಕಾಮಗಾರಿ ಯಾಕೆ ಮುಂದುವರಿಯಲಿಲ್ಲ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ, ಪಾಲಿಕೆ ವಿಪಕ್ಷದ ಮಾಜಿ ನಾಯಕ ಎ.ನಾಗರಾಜ ಮಾತನಾಡಿ, ಹರಿಹರ ಶಾಸಕ ಬಿ.ಪಿ.ಹರೀಶ ತಮ್ಮ ಕ್ಷೇತ್ರದ ಶಾಸಕನಾಗಿ ಅಭಿವೃದ್ಧಿ ವಿಚಾರ, ಜನಪರ ಕೆಲಸದ ಬಗ್ಗೆ ಮಾತನಾಡಲಿ. ಇನ್ನು ಮುಂದೆ ಶಾಮನೂರು ಕುಟುಂಬದ ಬಗ್ಗೆ ಮಾತನಾಡಿದರೆ ಕಾಂಗ್ರೆಸ್ ಪಕ್ಷ ತಕ್ಕ ಪಾಠ ಕಲಿಸುತ್ತದೆ. ಅಭಿವೃದ್ಧಿಯ ವಿಚಾರವನ್ನು ನಿಮ್ಮಿಂದ ಕಾಂಗ್ರೆಸ್ ಪಕ್ಷವಾಗಲೀ, ನಮ್ಮ ನಾಯಕರಾಗಲೀ ಕಲಿಯಬೇಕಾಗಿಲ್ಲ ಎಂದು ಹೇಳಿದರು.
- - -
- ಎ.ನಾಗರಾಜ, ಜಿಲ್ಲಾ ಕಾರ್ಯದರ್ಶಿ, ಕಾಂಗ್ರೆಸ್.
-27ಕೆಡಿವಿಜಿ1.ಜೆಪಿಜಿ:
ದಾವಣಗೆರೆಯಲ್ಲಿ ಸೋಮವಾರ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಎ.ನಾಗರಾಜ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವರುಣ್ ಬೆಣ್ಣೆಹಳ್ಳಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.