- ನ್ಯಾಮತಿ ಅರಳೀಕಟ್ಟೆ ವೃತ್ತದಲ್ಲಿ 69ನೇ ಕನ್ನಡ ರಾಜ್ಯೋತ್ಸವ - - - ನ್ಯಾಮತಿ: ಗ್ರಾಮೀಣ ಪ್ರದೇಶಗಳ ಜನರಿಂದಾಗಿ ಇಂದು ಕನ್ನಡ ಭಾಷೆ ಉಳಿದಿದೆ. ಹೃದಯದಲ್ಲಿ ಅಡಗಿರುವ ಕನ್ನಡ ಪ್ರೇಮವನ್ನು ಮಾತಿನ ಮೂಲಕ ವ್ಯಕ್ತಪಡಿಸಿದಾಗ ಭಾಷೆಯ ವೈಶಾಲ್ಯತೆ ಹೆಚ್ಚುತ್ತದೆ ಎಂದು ಕೆಪಿಎಸ್ ಕಾಲೇಜಿನ ಪ್ರಾಂಶುಪಾಲ ವಿ.ಪಿ. ಪೂರ್ಣಾನಂದ ಹೇಳಿದರು.
ತಹಸೀಲ್ದಾರ್ ಎಚ್.ಬಿ.ಗೋವಿಂದಪ್ಪ ಕನ್ನಡ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನ.1ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿವರ್ಷ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು.
ಕಸಾಪ ನ್ಯಾಮತಿ ತಾಲೂಕು ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ, ಪ.ಪಂ. ಮುಖ್ಯಾಧಿಕಾರಿ ಬಿ.ಗಣೇಶ್ ರಾವ್, ಪ.ಪಂ. ಯೋಜನಾಧಿಕಾರಿ ಎಸ್.ಆರ್. ವೀರಭದ್ರಯ್ಯ, ಶಿಕ್ಷಣ ಇಲಾಖೆಯ ಮುದ್ದನಗೌಡ, ಕೆಪಿಎಸ್ ಕಾಲೇಜಿನ ಉಪನ್ಯಾಸಕ ನವುಲೆ ಗಂಗಾಧರ್, ವಿನಾಯಕ ಕನ್ನಡ ಯುವಕ ಸಂಘದ ಅಧ್ಯಕ್ಷ ವೀರಣ್ಣಗೌಡ, ನೌಕರರ ಸಂಘದ ಅಧ್ಯಕ್ಷ ಸಂತೋಷ್, ಕನ್ನಡಪರ ಸಂಘಟನೆಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಮುಖಂಡರು ಮತ್ತಿತರರು ಪಾಲ್ಗೊಂಡು, ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.- - - -ಫೋಟೋ: 12024_647.jpg