ಕೊಟ್ಟೂರೇಶ್ವರನ ಕೃಪೆಗಾಗಿ ಶ್ರೀರಾಮುಲು ಪಾದಯಾತ್ರೆ

KannadaprabhaNewsNetwork |  
Published : Feb 22, 2025, 12:45 AM IST
21ಎಚ್‌ಪಿಟಿ5- ಹೊಸಪೇಟೆ ಮಾಜಿ ಸಚಿವ ಶ್ರೀರಾಮುಲು ಅವರು ಕೂಡ್ಲಿಗಿಯ ಕೊತ್ತಲ ಆಂಜನೇಯ ದೇವಾಲಯದಿಂದ ಕೊಟ್ಟೂರು ಶ್ರೀಗುರುಬಸವೇಶ್ವರ ಸ್ವಾಮಿಯ ರಥೋತ್ಸವ ನಿಮಿತ್ತ ಶುಕ್ರವಾರ ಪಾದಯಾತ್ರೆ ಕೈಗೊಂಡರು. | Kannada Prabha

ಸಾರಾಂಶ

ಶ್ರೀರಾಮುಲು ಕೂಡ್ಲಿಗಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಸ್ವತಃ ಅವರೇ ತಾವು ಸ್ಪರ್ಧಿಸುವುದು ಖಚಿತ ಎಂದೂ ಸಹ ಹೇಳಿದ್ದಾರೆ.

ಹೊಸಪೇಟೆ: ಮಾಜಿ ಸಚಿವ ಬಿ.ಶ್ರೀರಾಮುಲು ಕೊಟ್ಟೂರು ಶ್ರೀ ಗುರು ಬಸವೇಶ್ವರ ಜಾತ್ರೆಯ ನಿಮಿತ್ತ ಶುಕ್ರವಾರ ಸಂಜೆ ಕೂಡ್ಲಿಗಿಯ ಕೊತ್ತಲ ಆಂಜನೇಯ ದೇವಾಲಯದಿಂದ ಪಾದಯಾತ್ರೆ ನಡೆಸಿದರು.

ಇದೇ ಪ್ರಥಮ ಬಾರಿಗೆ ಬಿ. ಶ್ರೀರಾಮುಲು ಕೊಟ್ಟೂರು ಜಾತ್ರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಕೊಟ್ಟೂರು ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಪಾದಯಾತ್ರೆಯ ಮೂಲಕ ಭಕ್ತರು ಮೊದಲಿನಿಂದಲೂ ಆಗಮಿಸುವ ಸಂಪ್ರದಾಯ ಇದೆ.

ಶುಕ್ರವಾರ ಸಂಜೆ 7 ಗಂಟೆಯ ಹೊತ್ತಿಗೆ ಕೂಡ್ಲಿಗಿಯಿಂದ ಹೊರಟಿರುವ ಬಿ. ಶ್ರೀರಾಮುಲು ಮತ್ತು ಅವರ ಬೆಂಬಲಿಗರು 20 ಕಿ.ಮೀ. ಕ್ರಮಿಸಿ ರಾತ್ರಿ 12 ಗಂಟೆಯ ಹೊತ್ತಿಗೆ ಕೊಟ್ಟೂರು ತಲುಪಿದ್ದಾರೆ.

ಶ್ರೀರಾಮುಲು ಕೂಡ್ಲಿಗಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಸ್ವತಃ ಅವರೇ ತಾವು ಸ್ಪರ್ಧಿಸುವುದು ಖಚಿತ ಎಂದೂ ಸಹ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಟ್ಟೂರೇಶ್ವರನ ಕೃಪೆಗಾಗಿ ಪಾದಯಾತ್ರೆ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಪಾದಯಾತ್ರೆಯಲ್ಲಿ ಕೂಡ್ಲಿಗಿ ಬಿಜೆಪಿ ಮಂಡಳ ಅಧ್ಯಕ್ಷ ನಾಗರಾಜ ಕಾಮಶೆಟ್ಟಿ ಹಾಗೂ ಶ್ರೀರಾಮುಲು ಅವರ ನೂರಾರು ಬೆಂಬಲಿಗರು ಕೂಡ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ