ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಶ್ರೀರಾಮುಲು, ರೆಡ್ಡಿ ಪ್ರಚಾರ

KannadaprabhaNewsNetwork |  
Published : Oct 28, 2024, 01:16 AM ISTUpdated : Oct 28, 2024, 01:17 AM IST
ಅ | Kannada Prabha

ಸಾರಾಂಶ

ಕಾಂಗ್ರೆಸ್ ವೋಟಿಗಾಗಿ ಸಮಾಜದಲ್ಲಿನ ಜಾತಿಗಳನ್ನು ಒಡೆಯುವ ಹಾಗೂ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ.

ಸಂಡೂರು: ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪಕ್ಷದ ಮುಖಂಡರಾದ ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ ಅವರೊಂದಿಗೆ ತಾಲೂಕಿನ ಕೃಷ್ಣಾನಗರ, ದೌಲತ್‌ಪುರ, ವೆಂಕಟಗಿರಿ, ಜೈಸಿಂಗಾಪುರ, ಸಿದ್ದಾಪುರ, ಸುಶೀಲಾನಗರ, ನಾರಾಯಣಪುರ, ವಿಠಲನಗರ, ರಣಜಿತ್‌ಪುರ, ನರಸಿಂಗಾಪುರ, ದೋಣಿಮಲೈ, ಭುಜಂಗನಗರ, ಮುರಾರಿಪುರ ಹಾಗೂ ತಾರಾನಗರ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು.

ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಕಾಂಗ್ರೆಸ್ ವೋಟಿಗಾಗಿ ಸಮಾಜದಲ್ಲಿನ ಜಾತಿಗಳನ್ನು ಒಡೆಯುವ ಹಾಗೂ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಅದಕ್ಕಾಗಿ ಭಗವಂತ ೧೫ ವರ್ಷಗಳಿಂದ ಕೇಂದ್ರದಲ್ಲಿ ಅವರಿಗೆ ಅಧಿಕಾರಿ ನೀಡಿಲ್ಲ. ನರೇಂದ್ರ ಮೋದಿ ಎಲ್ಲ ಜಾತಿ ಜನಾಂಗಗಳಿಗೆ ಒಳ್ಳೆಯದನ್ನು ಮಾಡಿರುವುದರಿಂದ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರದಲ್ಲಿ ಮುಂದುವರಿದಿದ್ದಾರೆ ಎಂದರು.

ಹಿಂದು-ಮುಸ್ಲಿಂ ಭಾಯಿ ಭಾಯಿ, ಭಾರತ ಮಾತೆ ನಮ್ಮೆಲ್ಲರ ತಾಯಿ ಎನ್ನುವುದು ಬಿಜೆಪಿ ವಾಕ್ಯವಾಗಿದೆ ಎಂದರು.

ಯಾರಾದರೂ ಜಾತಿ ವಿಷಯ ತಂದರೆ ನಂಬಬೇಡಿ. ಇಂದು ನಮಗೆ ಬೇಕಾಗಿರುವುದು ಒಳ್ಳೆಯ ಅಭಿವೃದ್ಧಿ. ಒಳ್ಳೆಯ ರಸ್ತೆ, ಶುದ್ಧ ಕುಡಿಯುವ ನೀರು, ಹೈಟೆಕ್ ಶಾಲೆಗಳು, ಆಸ್ಪತ್ರೆ, ಯುವಜನತೆಗೆ ಉದ್ಯೋಗ ಸಿಗುವಂತಾಗಬೇಕು. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ದೊರೆತ ಅನುದಾನದಿಂದ ಸಂಡೂರು-ತೋರಣಗಲ್ಲು-ಹೊಸಪೇಟೆ-ಕೂಡ್ಲಿಗಿ, ಶ್ರೀಕುಮಾರಸ್ವಾಮಿ ರಸ್ತೆ ದುರಸ್ತಿ ಮಾಡಲಾಯಿತು.

ಜನತೆ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ಹೇಳಿದರು.

ಮಾಜಿ ಸಚಿವ ಬಿ. ಶ್ರೀರಾಮುಲು ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣವನ್ನು ಲೂಟಿ ಮಾಡಲಾಗಿದೆ. ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಬೆಂಬಲಿಸಿ ಗೆಲ್ಲಿಸಬೇಕು ಎಂದರು.

ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಎಸ್. ದಿವಾಕರ್, ಜಿಲ್ಲಾ ಉಪಾಧ್ಯಕ್ಷ ಜಿ.ಟಿ. ಪಂಪಾಪತಿ, ಸಂಡೂರು ಮಂಡಲ ಅಧ್ಯಕ್ಷ ನಾನಾ ಸಾಹೇಬ್ ನಿಕ್ಕಂ, ಮುಖಂಡರಾದ ಬಂಗ್ಲೆ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.ಸಂಡೂರು ತಾಲೂಕಿನ ದೌಲತ್‌ಪುರದಲ್ಲಿ ಭಾನುವಾರ ಸಿಂಗರಿಸಿದ ಎತ್ತಿನ ಬಂಡಿಯಲ್ಲಿ ಪಕ್ಷದ ಮುಖಂಡರೊಂದಿಗೆ ಸಾಗಿ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಮತಯಾಚನೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯಕೋಮಿನವನ ಜತೆ ಮದುವೆ: ಮೊಮ್ಮಗಳ ಶಿಶು ಕೊಂ*ದ ಅಜ್ಜಿ!
ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ