ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ನಂತರ ಪಟ್ಟಣ ಪುರಸಭೆ ಸಭಾಂಗಣದಲ್ಲಿ ಡೀಸಿ ಡಾ.ಕುಮಾರ್ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಈ ಬಾರಿ ದಸರಾವನ್ನು ಅ.4 ರಿಂದ ನಾಲ್ಕು ದಿನಗಳ ಕಾಲ ಆಚರಿಸಲಾಗುತ್ತಿದೆ. ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಕಳೆದ ದಸರಾ ವೇಳೆ ವೇದಿಕೆ ತುಂಬಾ ಚಿಕ್ಕದಿದ್ದ ಕಾರಣ ಸ್ವಲ್ಪ ತೊಂದರೆಯಾಗಿತ್ತು. ಈ ಬಾರಿ ಅಗತ್ಯತೆಗೆ ತಕ್ಕಂತೆ ದೊಡ್ಡದಾಗಿ ನಿರ್ಮಾಣ ಮಾಡಿಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.ದಸರಾ ಆಚರಣೆ ಆಹ್ವಾನ ಪತ್ರಿಕೆಗಳನ್ನು ಆದಷ್ಟು ಬೇಗ ಸಿದ್ಧಪಡಿಸಬೇಕು. ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ಸಂಘ ಸಂಸ್ಥೆಗಳಿಗೆ ವಿತರಿಸಿ ಗೌರವ ಪೂರ್ವಕವಾಗಿ ಆಹ್ವಾನಿಸಬೇಕು. ಯಾವುದೇ ದೂರು ಬಾರದಂತೆ ಆಹ್ವಾನ ಪತ್ರಿಕೆಯೊಂದಿಗೆ ದಸರಾ ಕಾರ್ಯಕ್ರಮಗಳ ವಿವರ ನೀಡುವ 5 ದಸರಾ ಕರಪತ್ರಗಳನ್ನು ಸೇರಿಸಿ ಕೊಡಬೇಕು ಎಂದು ತಾಕೀತು ಮಾಡಿದರು.
ಸ್ವಚ್ಛತೆ ಕಾಪಾಡಲು ಅವಶ್ಯಕ ಪೌರಕಾರ್ಮಿಕ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬೇಕು. ಅಗತ್ಯವಿರುವ ಕಡೆ ಕಸದತೊಟ್ಟಿಗಳನ್ನು ಇಡಬೇಕು. ಸಾರ್ವಜನಿಕರಿಗೆ ಸ್ವಚ್ಛತೆ ಕಾಪಾಡುವಂತೆ ಪ್ರೇರೇಪಿಸಬೇಕು. ಪ್ರತಿ ಗಂಟೆಗೊಮ್ಮೆ ಸುತ್ತಮುತ್ತಲು ಶುಚಿಪಡಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಎಎಸ್ಪಿ ತಿಮ್ಮಯ್ಯ, ಎಸಿ ಶಿವಮೂರ್ತಿ, ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿ ತಾಲೂಕು ಮಟ್ಟದ ಇಲಾಖೆ ಅಧಿಕಾರಿಗಳು ಹಾಜರಿದ್ದರು.