ಶ್ರೀರಂಗಪಟ್ಟಣ ತಾಪಂ ಅಧಿಕಾರಿಗಳು, ಸಿಬ್ಬಂದಿಗೆ ಕ್ಷಯರೋಗದ ಬಗ್ಗೆ ಅರಿವು

KannadaprabhaNewsNetwork |  
Published : Feb 14, 2025, 12:31 AM IST
13ಕೆಎಂಎನ್ ಡಿ14 | Kannada Prabha

ಸಾರಾಂಶ

ಪುರಸಭೆ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಹೆಚ್ಚು ಕರ್ತವ್ಯ ನಿರ್ವಹಿಸುವ ವೇಳೆ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕ್ಷಯ ರೋಗ ಬೇಗ ಹರಡುವ ಸಾಧ್ಯತೆ ಜಾಸ್ತಿ. ಆದ್ದರಿಂದ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕ್ಷಯರೋಗದ ಬಗ್ಗೆ ಅರಿವು ಹಾಗೂ ತಪಾಸಣೆ ಕಾರ್ಯಕ್ರಮ ನಡೆಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಮಾತನಾಡಿ, ಕ್ಷಯರೋಗದ ಲಕ್ಷಣಗಳು, ಹರಡುವ ವಿಧಾನ, ಪರೀಕ್ಷೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ಹಾಗೂ 100 ದಿನಗಳ ಅಭಿಯಾನದ ಉದ್ದೇಶ ಕುರಿತು ಮಾಹಿತಿ ನೀಡಿದರು.

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳಿಗೆ ಸಿಬ್ಬಂದಿಗೆ ಕ್ಷಯ ರೋಗದ ಬಗ್ಗೆ ಜಾಗೃತಿ ಹಾಗೂ ತಪಾಸಣೆ ನಡೆಸಲಾಗುತ್ತಿದೆ. ಅದಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರ ನೀಡಬೇಕು ಎಂದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ.ಹೇಮಣ್ಣ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ತಾಪಂ ಯೋಜನಾಧಿಕಾರಿ ತ್ರಿವೇಣಿ, ಲೆಕ್ಕ ಸಹಾಯಕ ಅಧಿಕಾರಿ ಪವಿತ್ರ, ವ್ಯವಸ್ಥಾಪಕಿ ದಿವ್ಯ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ.ಮಂಗಳ, ಆರೋಗ್ಯ ನಿರೀಕ್ಷಣಾಧಿಕಾರಿ ಪಣಿಂದ್ರ ಹಾಗೂ ತಾಪಂ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಪುರಸಭೆ ಅಧಿಕಾರಿಗಳು, ಸಿಬ್ಬಂದಿ, ಕಾರ್ಮಿಕರಿಗೆ ಕ್ಷಯರೋಗ ತಪಾಸಣೆ

ಮದ್ದೂರು: ಪಟ್ಟಣದ ಪುರಸಭೆ ಅಧಿಕಾರಿಗಳು ಸಿಬ್ಬಂದಿ ಹಾಗೂ ಪೌರ ಕಾರ್ಮಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು ಹಾಗೂ ತಪಾಸಣೆ ಕಾರ್ಯಕ್ರಮ ನಡೆಸಲಾಯಿತು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತಮ್ಮೇಗೌಡ, ಕ್ಷಯರೋಗ ಹರಡುವ ಬಗ್ಗೆ ಲಕ್ಷಣಗಳು ಪರೀಕ್ಷೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ತಿಳಿಸಿದರು. 100 ದಿನಗಳ ಆಂದೋಲನ, ರೋಗಲಕ್ಷಣಗಳ ಬಗ್ಗೆ ತಿಳಿಸಿ ತಪಾಸಣೆ ನಡೆಸಲಾಯಿತು.

ಪುರಸಭೆ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಹೆಚ್ಚು ಕರ್ತವ್ಯ ನಿರ್ವಹಿಸುವ ವೇಳೆ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕ್ಷಯ ರೋಗ ಬೇಗ ಹರಡುವ ಸಾಧ್ಯತೆ ಜಾಸ್ತಿ. ಆದ್ದರಿಂದ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಿದರು.

ಕ್ಷಯ ಮುಕ್ತ ಮಂಡ್ಯ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು.

ಇದೇ ವೇಳೆ ಕ್ಷಯ ರೋಗ ತಡೆ ಬಗ್ಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ಮೀನಾಕ್ಷಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸಿಬ್ಬಂದಿ ಪೌರಕಾರ್ಮಿಕರು, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಮಣಿ, ಎಸ್‌ಟಿಎಸ್ ಕೆಂಪೇಗೌಡ, ಟಿಬಿಎಚ್‌ವಿ ಮಹೇಂದ್ರ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮರೋಪಾದಿಯಲ್ಲಿ ವಿಜಯೇಂದ್ರ ಪಕ್ಷ ಸಂಘಟನೆ
ಜಿ ರಾಮ್ ಜಿ ಪರ 15ರಿಂದ ಅಭಿಯಾನ: ವಿಜಯೇಂದ್ರ