ಸರ್ಕಾರದ ಅನುದಾನದಲ್ಲಿ ಶ್ರೀರಂಗಪಟ್ಟಣ ಮಾದರಿಯಾಗಿ ಅಭಿವೃದ್ಧಿ: ರಮೇಶ ಬಂಡಿಸಿದ್ದೇಗೌಡ

KannadaprabhaNewsNetwork |  
Published : Jun 22, 2025, 01:18 AM IST
20ಕೆಎಂಎನ್ ಡಿ19 | Kannada Prabha

ಸಾರಾಂಶ

ಮಹದೇವಪುರ ಗ್ರಾಮದ ಬಳಿ ಇರುವ ವಿರಿಜಾ ಉಪನಾಲೆಯ ಕೊನೆ ಭಾಗದ ರೈತರಿಗೆ ನೀರು ತಲುಪಲು ಸಮಸ್ಯೆಯಾಗಿತ್ತು. ಸರ್ಕಾರ ನಾಲೆಗಳ ಅಭಿವೃದ್ಧಿಗೆ ನೂರಾರು ಕೋಟಿ ರು. ಬಿಡುಗಡೆ ಮಾಡಿದೆ. ಈ ಭಾಗದ ರೈತರ ಹಿತ ಕಾಯಲು 10 ಕೋಟಿ ರು. ವೆಚ್ಚದಲ್ಲಿ ನಾಲಾ ಆಧುನೀಕರಣ ಕಾಮಗಾರಿ ನಡೆಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸರ್ಕಾರದ ವಿವಿಧ ಅನುದಾನಗಳ ನೆರವಿನೊಂದಿಗೆ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿ ಜಿಲ್ಲೆಯಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದೇನೆ ಎಂದು ಸೆಸ್ಕ್ ಅಧ್ಯಕ್ಷರಾದ ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ತಾಲೂಕಿನ ಮಹದೇವಪುರದ ಬಳಿ ಹರಿಯುವ ವಿರಿಜಾ ಉಪನಾಲೆಯಡಿಯಲ್ಲಿ ಬರ್ಗಿ ಉಪನಾಲೆ ಆಧುನೀಕರಣ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಮಹದೇವಪುರ ಗ್ರಾಮದ ಬಳಿ ಇರುವ ವಿರಿಜಾ ಉಪನಾಲೆಯ ಕೊನೆ ಭಾಗದ ರೈತರಿಗೆ ನೀರು ತಲುಪಲು ಸಮಸ್ಯೆಯಾಗಿತ್ತು. ಸರ್ಕಾರ ನಾಲೆಗಳ ಅಭಿವೃದ್ಧಿಗೆ ನೂರಾರು ಕೋಟಿ ರು. ಬಿಡುಗಡೆ ಮಾಡಿದೆ. ಈ ಭಾಗದ ರೈತರ ಹಿತ ಕಾಯಲು 10 ಕೋಟಿ ರು. ವೆಚ್ಚದಲ್ಲಿ ನಾಲಾ ಆಧುನೀಕರಣ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಿಸಲು ಆರೋಗ್ಯ ಸಚಿವ ದಿನೇಸ್ ಗುಂಡುರಾವ್ ಅವರಿಗೆ ಮನವಿ ಮಾಡಲಾಗಿತ್ತು. ಇದೀಗ 2.5 ಕೋಟಿ ರು ಹಣವನ್ನು ಬಿಡುಗಡೆ ಮಾಡಿದ್ದು, ನೂತನ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದರು.

ಶ್ರೀರಂಗಪಟ್ಟಣವನ್ನು ಮಾದರಿ ಗ್ರಾಮನ್ನಾಗಿ ಮಾಡಲು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಲು ಪ್ರಾಮಾಣಿಕ ಪ್ರಯತ್ನದಲ್ಲಿದ್ದೇನೆ ಎಂದರು.

ಈ ವೇಳೆ ಮಂಡ್ಯ ಡಿಎಚ್‌ಒ ಡಾ.ಮೋಹನ್, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಶ್ವಂತ್, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು, ತಾಪಂ ಮಾಜಿ ಸದಸ್ಯ ಕಾಳೇಗೌಡ ಸೇರಿದಂತೆ ಗ್ರಾಮದ ಇತರ ಮುಖಂಡರು ಹಾಗೂ ವಿವಿದ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ