ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ರೈತಪರ ಹಿರಿಯ ಹೋರಾಟಗಾರ ಕೆ.ಎಸ್ ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಿ.ಸಿ.ಕೃಷ್ಣೇಗೌಡ ನೇತೃತ್ವದಲ್ಲಿ ಪಟ್ಟಣದ ಬಸ್ ನಿಲ್ದಾಣ ವೃತ್ತದ ಬಳಿ ಸೇರಿದ ಸಮಿತಿ ಸದಸ್ಯರು, ಪಂಜುಗಳನ್ನು ಹಿಡಿದು ಸಮಿತಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮಳೆಯು ಇಲ್ಲದೆ ಜಲಾಶಯದಲ್ಲಿ ನೀರಿಲ್ಲದೆ ರಾಜ್ಯದ ಜನರು ಸಂಕಷ್ಟದಲ್ಲಿರುವಾಗಲೇ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸಿ ಎಂದು ಹೇಳಿರುವುದು ಸರಿಯಲ್ಲ. ಕೂಡಲೇ ಸರ್ಕಾರ ಈ ಆದೇಶವನ್ನು ತಿರಸ್ಕರಿಸಿ ನಾಡಿನ ಜನರು, ರೈತರ ಭವಿಷ್ಯವನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ರೈತ ನಾಯಕ ಕೆ.ಎಸ್.ನಂಜುಂಡೇಗೌಡ ಸರ್ಕಾರವನ್ನು ಆಗ್ರಹಿಸಿದರು.ರಾಜ್ಯದಲ್ಲೇ ಕುಡಿಯಲು, ಬೆಳೆಗಳಿಗೆ ನೀರಿಲ್ಲ. ಈ ವೇಳೆ ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಿ ಎಂದು ಸಮಿತಿ ಆದೇಶ ಮಾಡಿರುವುದು ಖಂಡನೀಯ. ಇದರಿಂದ ರೈತರು ಹಾಗೂ ಮಂಡ್ಯ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಒಂದು ವೇಳೆ ಸಮಿತಿ ಆದೇಶಕ್ಕೆ ಮಣಿದು ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.