ಹೋಗಿದೆ... ರಾಷ್ಟ್ರೀಯ ಪ್ರತಿಭಾ ಅನ್ವೇಷಣೆ ಪರೀಕ್ಷೆಯಲ್ಲಿ ಸೃಜನ್ ಪ್ರಥಮ

KannadaprabhaNewsNetwork |  
Published : Jun 12, 2026, 01:45 AM IST
9ಎಚ್ಎಸ್ಎನ್5 :  | Kannada Prabha

ಸಾರಾಂಶ

ಅರಕಲಗೂಡು ತಾಲೂಕಿನಲ್ಲಿ ಪ್ರತಿಭಾ ಅನ್ವೇಷಣೆ ವಿದ್ಯಾರ್ಥಿವೇತನ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗ್ರಾಮಕ್ಕೂ ಕೀರ್ತಿ ತಂದಿರುತ್ತಾರೆ. ಅರಕಲಗೂಡು ತಾಲೂಕಿನಲ್ಲಿ ಪ್ರತಿಭಾ ಅನ್ವೇಷಣೆ ವಿದ್ಯಾರ್ಥಿ ವೇತನ ಪರಿಕ್ಷೆಯಲ್ಲಿ 13 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ಬಸವಾಪಟ್ಟಣ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಗ್ರಾಮದ ಕೆಪಿಎಸ್‌ಗೆ ಮತ್ತೊಂದು ಹಿರಿಮೆ ಎನಿಸಿದೆ. ಈ ಶಾಲೆಯ ಸೃಜನಕುಮಾರ ಜಿಲ್ಲೆಯಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ. ಆರ್‌. ಡಿ ಸೌಪರ್ಣಿಕ, ರುಷ್ಯಂತ್, ಸುಚೇಂದ್ರ, ತಾರಿಕ, ಮಾನಸ, ಮೇಘ ಆಯ್ಕೆಯಾಗಿರುವ ವಿದ್ಯಾರ್ಥಿಗಳಾಗಿದ್ದು, ಮೆಲ್ಕಂಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಲಭಿಸಲಿದೆ. ಇದೇ ಶಾಲೆಯ 2025-26ನೇ ಸಾಲಿನ ನಡೆದ ಎಸ್.ಎಸ್.ಎಲ್.ಸಿ ಪರಿಕ್ಷೆಯಲ್ಲಿ ಶೇ. 100 ಸಾಧನೆ ಮಾಡಿದ ಸರ್ಕಾರಿ ಶಾಲೆಯಾಗಿದೆ.

ಕನ್ನಡಪ್ರಭ ವಾರ್ತೆ ಬಸವಾಪಟ್ಟಣ

ಇಲ್ಲಿನ ಕೆಪಿಎಸ್ ಪ್ರೌಢಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಸೃಜನ್ ಕುಮಾರ್ ರಾಷ್ಟ್ರೀಯ ಪ್ರತಿಭಾ ಅನ್ವೇಷಣೆ ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗ್ರಾಮಕ್ಕೆ ಕೀರ್ತಿ ತಂದಿರುತ್ತಾರೆ.

ಅಲ್ಲದೆ ಅರಕಲಗೂಡು ತಾಲೂಕಿನಲ್ಲಿ ಪ್ರತಿಭಾ ಅನ್ವೇಷಣೆ ವಿದ್ಯಾರ್ಥಿವೇತನ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗ್ರಾಮಕ್ಕೂ ಕೀರ್ತಿ ತಂದಿರುತ್ತಾರೆ. ಅರಕಲಗೂಡು ತಾಲೂಕಿನಲ್ಲಿ ಪ್ರತಿಭಾ ಅನ್ವೇಷಣೆ ವಿದ್ಯಾರ್ಥಿ ವೇತನ ಪರಿಕ್ಷೆಯಲ್ಲಿ 13 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ಬಸವಾಪಟ್ಟಣ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಗ್ರಾಮದ ಕೆಪಿಎಸ್‌ಗೆ ಮತ್ತೊಂದು ಹಿರಿಮೆ ಎನಿಸಿದೆ.ಈ ಶಾಲೆಯ ಸೃಜನಕುಮಾರ ಜಿಲ್ಲೆಯಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ. ಆರ್‌. ಡಿ ಸೌಪರ್ಣಿಕ, ರುಷ್ಯಂತ್, ಸುಚೇಂದ್ರ, ತಾರಿಕ, ಮಾನಸ, ಮೇಘ ಆಯ್ಕೆಯಾಗಿರುವ ವಿದ್ಯಾರ್ಥಿಗಳಾಗಿದ್ದು, ಮೆಲ್ಕಂಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಲಭಿಸಲಿದೆ. ಇದೇ ಶಾಲೆಯ 2025-26ನೇ ಸಾಲಿನ ನಡೆದ ಎಸ್.ಎಸ್.ಎಲ್.ಸಿ ಪರಿಕ್ಷೆಯಲ್ಲಿ ಶೇ. 100 ಸಾಧನೆ ಮಾಡಿದ ಸರ್ಕಾರಿ ಶಾಲೆಯಾಗಿದೆ.ಎಸ್.ಡಿ.ಎಂ.ಸಿ ಸದಸ್ಯರು ಗ್ರಾಮದ ಮುಖಂಡರಾದ ನಿರ್ವಣೇಗೌಡ, ಹರೀಶ್, ಚೇತನ್ ಕುಮಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಪ್ರಾಂಶುಪಾಲರಾದ ಹರೀಶ, ವೈದ್ಯಾಧಿಕಾರಿಗಳಾದ ಡಾ. ರಾಜೇಶ್ ಮೊದಲಾದವರು ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹದಿಹರೆಯದಲ್ಲಿ ಮಕ್ಕಳು ಜಾಗ್ರತೆ ವಹಿಸಬೇಕು: ವೈ.ಎಂ.ಲಲಿತ ಸಲಹೆ
ಆತ್ಮವಿಶ್ವಾಸದಿಂದ ಏನನ್ನಾದರೂ ಸಾಧಿಸಲು ಸಾಧ್ಯ: ದರ್ಶನ್