- ಶಂಕರ್ ವಿಹಾರ ಬಡಾವಣೆಯಲ್ಲಿ ಶ್ರೀ ಅಂಬಾಭವಾನಿ ದೇವಸ್ಥಾನ ಪ್ರಥಮ ವಾರ್ಷಿಕೋತ್ಸವ
- - -
ಕನ್ನಡಪ್ರಭ ವಾರ್ತೆ ಹರಿಹರ
ನಗರದ ಶಂಕರ್ ವಿಹಾರ ಬಡಾವಣೆಯಲ್ಲಿ ಮಂಗಳವಾರ ನಡೆದ ಶ್ರೀ ಅಂಬಾಭವಾನಿ ದೇವಸ್ಥಾನದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಮ್ಮ ಸಮಾಜದ ಜನ ದಾವಣಗೆರೆಯಂತಹ ನಗರಗಳಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದರೂ, ಕರ್ತವ್ಯನಿಷ್ಠೆ ಮತ್ತು ಉದ್ಯಮಶೀಲತೆಯಿಂದ ಇಡೀ ಊರಿನ ಗಮನ ಸೆಳೆದಿದ್ದಾರೆ. ಸಮಾಜದ ಅಡಿಯಲ್ಲಿ ಪಂಚ ಕಮಿಟಿಗಳು, ದೇವಸ್ಥಾನ, ಶಾಲಾ-ಕಾಲೇಜು ಹಾಗೂ ಬ್ಯಾಂಕುಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.
ಸಮಾಜದ ರಾಜ್ಯ ಕಾರ್ಯದರ್ಶಿ ಅಶೋಕ್ ರಾಯಭಾಗಿ ಮಾತನಾಡಿ, ಭಾರತೀಯ ಸಂಸ್ಕೃತಿ ಹಾಗೂ ಹಿಂದುತ್ವದ ಆಶಯಗಳೊಂದಿಗೆ ಮುನ್ನಡೆಯುತ್ತಿರುವ ಸೂರ್ಯವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ಆಶೋತ್ತರಗಳನ್ನು ಈಡೇರಿಸುವುದು ಸಮಾಜದ ಎಲ್ಲರ ಜವಾಬ್ದಾರಿಯಾಗಿದೆ. ಸಮಾಜದ ಜನರಿಗೆ ಸರ್ಕಾರದ ಮಟ್ಟದಲ್ಲಿ ಸಿಗುವ ಸೌಲಭ್ಯಗಳನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಮಾಜದ ವಿವಿಧ ಸ್ತರದ ಜನರನ್ನು ತಲುಪಲು ಗುರುಪೀಠ, ಪದವೀಧರರ ಸಮಿತಿ, ವೈದ್ಯರ, ಎಂಜಿನಿಯರ್ಗಳ ಹಾಗೂ ಚಾರ್ಟರ್ಡ್ ಅಕೌಂಟೆಂಟ್ಗಳ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುತ್ತಿದೆ. ಸಮಾಜದ ಈ ವಿವಿಧ ಸಮಿತಿಗಳಲ್ಲಿ ರಾಜ್ಯ ಮಟ್ಟದಲ್ಲಿ ಕೆಲಸ ಮಾಡಲು ಆಸಕ್ತಿಯಿರುವ, ಸೇವಾ ಮನೋಭಾವವುಳ್ಳ ವ್ಯಕ್ತಿಗಳು ಮುಂದೆ ಬರಬೇಕು. ಅಂತಹವರ ಬಗ್ಗೆ ಅಧ್ಯಕ್ಷರ ಗಮನಕ್ಕೆ ತರಬೇಕು ಎಂದು ಈ ಸಂದರ್ಭದಲ್ಲಿ ವಿನಂತಿಸಿದರು.
ಸಮಾಜದವರಿಗೆ ಸರ್ಕಾರಿ ಸೌಲಭ್ಯಗಳು ತಲುಪಲು ಇ-ಸೇವಾ ಕೇಂದ್ರವು ಮೊದಲ ಆದ್ಯತೆ ನೀಡುವ ಅಗತ್ಯವಿದೆ. ಸಮಾಜದ ಯಾವುದೇ ಕೆಲಸಗಳಿಗೆ ಮನೆಯ ಮಗನಂತೆ ಕೆಲಸ ಮಾಡುವುದಾಗಿ ಇದೇ ವೇಳೇ ಶ್ರೀನಿವಾಸ ದಾಸಕರಿಯಪ್ಪ ಭರವಸೆ ನೀಡಿದರು.
ಸಮಾಜದ ಜಿಲ್ಲಾಧ್ಯಕ್ಷ ಗಿರಿಧರ್ ಡಿ.ಮೆಹರ್ವಾಡೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕರಿಬಸಪ್ಪ ದಪೇರ್, ಚಂದ್ರಪ್ಪ, ಹರಿಹರ ಎಸ್ಎಸ್ಕೆ ಸಮಾಜದ ಅಧ್ಯಕ್ಷ ಶ್ರೀನಿವಾಸ ಮೆಹರವಾಡೆ, ದಾವಣಗೆರೆ ಜಿಲ್ಲಾ ಸಂಚಾಲಕ ಸಂದೀಪ್ ಭೂತೆ, ಎಸ್ಎಸ್ಕೆ ಸಮಾಜದ ಪ್ರಧಾನ ಕಾರ್ಯದರ್ಶಿ ಮಹೇಶ್ ಕೆ. ಸೋಳಂಕಿ, ಮಹಿಳಾ ಮಂಡಳಿ ಗೌರವಾಧ್ಯಕ್ಷರಾದ ಶುಭಂಜಲಿ ಕಠಾರೆ, ನಾಗರತ್ನ ಬದ್ದಿ, ಜ್ಯೋತಿ ಆಚಾರ್ಯ, ತರುಣ ಮಂಡಳಿ ಅಧ್ಯಕ್ಷ ಭರತ್ ಕಿಶನ್ ಲದ್ವಾ ಇತರರು ಉಪಸ್ಥಿತರಿದ್ದರು.
-29HRR.01:
ಹರಿಹರದ ಶಂಕರ್ ವಿಹಾರ ಬಡಾವಣೆಯಲ್ಲಿ ಶ್ರೀ ಅಂಬಾಭವಾನಿ ದೇವಸ್ಥಾನದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.