ಕನ್ನಡಪ್ರಭ ವಾರ್ತೆ ಮಡಿಕೇರಿ
ಶುಕ್ರವಾರ ಕನ್ನಡ ವಿಷಯದ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಿದ್ದು, ಮಡಿಕೇರಿ ತಾಲೂಕಿನಲ್ಲಿ 8, ಸೋಮವಾರಪೇಟೆ ತಾಲೂಕಿನಲ್ಲಿ 11 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 8 ಪರೀಕ್ಷಾ ಕೇಂದ್ರಗಳಿವೆ.
ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸುಗಮವಾಗಿ ಮತ್ತು ಸುರಕ್ಷಿತವಾಗಿ ಸಾಗಿಸಲು ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿತ್ತು ಮತ್ತು ಪ್ರತೀ ಮಾರ್ಗಕ್ಕೆ ಒಬ್ಬರಂತೆ 7 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದ್ದು, ಮಾರ್ಗಾಧಿಕಾರಿಗಳ ವಾಹನ ಭದ್ರತೆಗೆ ಒಬ್ಬರು ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿತ್ತು.ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು ಮತ್ತು ಉಪ ಮುಖ್ಯ ಅಧೀಕ್ಷಕರನ್ನು ಹಾಗೂ ಸ್ಥಾನಿಕ ಜಾಗೃತದಳದ ಸಿಬ್ಬಂದಿ ನೇಮಕಮಾಡಲಾಗಿತ್ತು.ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಸೂಚಿಸಲಾಗಿತ್ತು.ವಿಶೇಷ ಬಸ್ ವ್ಯವಸ್ಥೆ:
ಲಾಭಕ್ಕಾಗಿ ಮದುವೆ, ರಾಜಕೀಯ ಪಕ್ಷಗಳು ನಡೆಸುವ ಕಾರ್ಯಕ್ರಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವವರ ಮಧ್ಯೆ ಮಕ್ಕಳ ಭವಿಷ್ಯವನ್ನು ಮುಂದಿಟ್ಟುಕೊಂಡು ಈ ರೀತಿಯ ಸೇವೆ ನೀಡುವ ಬಸ್ ಮಾಲೀಕರ ಕಾರ್ಯ ಶ್ಲಾಘನೀಯವೆಂದು ಪೋಷಕರಾದ ಗಿರಿಜನ ಮುಖಂಡ ಕಾಳ ಕಾರ್ಮಾಡು ಮತ್ತಿತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.