ದಾವಣಗೆರೆಯಲ್ಲಿ ಎಸ್ಎಸ್ಎಂ ಜನ್ಮದಿನದ ಅಂಗವಾಗಿ ನಡೆದ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ದಾವಣಗೆರೆ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಜನ್ಮದಿನದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ರಾಜ್ಯಮಟ್ಟದ 3*3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸ್ವತಃ ಬಾಸ್ಕೆಟ್ ಬಾಲ್ ಆಡುವುದರ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಹೆಚ್ಚಾಗುವುದರ ಒತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ. ಈ ರೀತಿಯ ಪಂದ್ಯಾವಳಿಗಳು ಹೆಚ್ಚಾಗಿ ನಡೆಯಲಿ ಎಂದರು.
ಇದರ ಜೊತೆಗೆ 16 ವರ್ಷ ವಯೋಮಿತಿಯ ಬಾಲಕರಿಗೆ ಜಿಲ್ಲಾ ಮಟ್ಟದ 3*3 ಬಾಸ್ಕೆಟ್ ಬಾಲ್ ಪಂದ್ಯಗಳು ನಡೆದವು. ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ರಾಜ್ಯದ ವಿವಿಧ ತಂಡಗಳು ಭಾಗವಹಿಸಿದ್ದವು.
ಈ ವೇಳೆ ಜಿಲ್ಲಾ ಬಾಸ್ಕೆಟ್ ಬಾಲ್ ಕ್ಲಬ್ನ ಗೌರವಾಧ್ಯಕ್ಷ ಸಿ.ರಾಮಮೂರ್ತಿ, ಉಪಾಧ್ಯಕ್ಷ ಗಡಿಗುಡಾಳ್ ಮಂಜುನಾಥ್, ವಸಂತಕುಮಾರ್, ದರ್ಶನ್, ಸಚಿನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.