ಕಾಫಿ ತೋಟದಲ್ಲಿ ಬೀಡು ಬಿಟ್ಟ ಕಾಡಾನೆ ಅರಣ್ಯಕ್ಕೆ ಅಟ್ಟಿದ ಸಿಬ್ಬಂದಿ

KannadaprabhaNewsNetwork |  
Published : Sep 29, 2024, 01:52 AM IST
ಯಶಸ್ವಿ | Kannada Prabha

ಸಾರಾಂಶ

ದೇವಣಿಗೇರಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಅರಣ್ಯಕ್ಕೆ ಅಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ದೇವಣಿಗೇರಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಅರಣ್ಯಕ್ಕೆ ಅಟ್ಟಿದ್ದಾರೆ.

ದೇವಣಿಗೇರಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟು ಕೃಷಿ ಫಸಲುಗಳನ್ನು ನಾಶಗೊಳಿಸುತ್ತಾ ದಾಂದಲೆ ನಡೆಸುತ್ತಿತ್ತು. ಹಾಗಾಗಿ ಗ್ರಾಮಸ್ಥರು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕು ಹಾಗೂ ಕಾಡಾನೆಗಳನ್ನು ಕಾಡಿಗಟ್ಟಬೇಕು ಎಂದು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಕಾಡಾನೆ ಮರಿಗಳು ಸೇರಿದಂತೆ 7 ಕಾಡಾನೆಗಳು ಪತ್ತೆ ಹಚ್ಚಿ ಅರಣ್ಯಕ್ಕೆ ಅಟ್ಟಲಾಯಿತು ಎಂದು ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಂ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ವಿರಾಜಪೇಟೆ ತಾಲೂಕು ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಆನೆ ಕಾರ್ಯಪಡೆಯ ಪ್ರಶಾಂತ್, ಆರ್.ಆರ್.ಟಿ.ತಂಡದ ಅರುಣ್ ಸೇರಿದಂತೆ ಸಿಬ್ಬಂದಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ