ಕನ್ನಡಪ್ರಭ ವಾರ್ತೆ ಚಳ್ಳಕೆರೆ
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ವಿಷಯಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಸಭೆಗೆ ಬರಬೇಕು. ಅಂತೆ ಕಂತೆಗಳ ವಿವರ ಬೇಕಿಲ್ಲ. ಬರಗಾಲದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮೈ ಚಳಿ ಬಿಟ್ಟು ಕೆಲಸ ಮಾಡಬೇಕು ಎಂದರು.
ಕೃಷಿ ಇಲಾಖೆ ಮೈಯೆಲ್ಲಾ ಕಣ್ಣಾಗಿಸಿಕೊಂಡು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ತೋಟಗಾರಿಕೆ ಇಲಾಖೆಯೊಂದಿಗೆ ನಿಕಟ ಸಂಪರ್ಕ ಸಾಧಿಸಬೇಕು. ರೈತರ ಸಂಖ್ಯೆ, ಹಿಂಗಾರು-ಮುಂಗಾರು ಬಿತ್ತನೆ ಇಂತಹ ಅಂಶಗಳಲ್ಲಿ ವ್ಯತ್ಯಾಸಗಳಿರಬಾರದು. ಕೆಡಿಪಿ ಸಭೆಗಳಿಗೆ ಬರುವ ಹಾಗೆ ಕೈ ಬೀಸಿಕೊಂಡು ಬರಬಾರದೆಂದು ಸೋಮಾರಿಗಳಿಕೆ ಮಾತಿನ ಚಾಟಿ ಬೀಸಿದರು.ಚಳ್ಳಕೆರೆ ತಾಲೂಕು 1 ಲಕ್ಷದ 94 ಸಾವಿರ ಹೆಕ್ಟೇರ್ ವಿಸ್ತೀರ್ಣ ಹೊಂದಿದ್ದು. 98ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ಬಿತ್ತನೆ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸಭೆ ಮಾಹಿತಿ ನೀಡುವಾಗ, ಸಚಿವರು ಮದ್ಯ ಪ್ರವೇಶಿಸಿ ಮಳೆಯ ಮಾಪನಗಳು ಎಲ್ಲೆಲ್ಲಿವೆ? ಪ್ರಶ್ನಿಸಿದರು.
ಕುಡಿಯುವ ನೀರಿನ ಸಮಸ್ಯೆ ಎಲ್ಲಿಯೂ ಕಾಣಬಾರದು. ಅಧಿಕಾರಿಗಳು ರೆಡಿಯಾಗಿರಬೇಕು.
ದೇವರ ಎತ್ತುಗಳಿಗೆ ಮೇವು ವಿತರಣೆ ಸೇರಿದಂತೆ ಬೀದಿ ನಾಯಿಗಳ ಕಾಟಕ್ಕೆ ಮುಕ್ತಿ ನೀಡಬೇಕು. ಬಿಡಾಡಿ ದನಗಳಿಂದ ನಾಗರೀಕರಿಗೆ ವಾಹನ ಚಾಲಕರಿಗೆ ತೊಂದರೆ ಆಗುತ್ತಿರುವುದನ್ನು ತಪ್ಪಿಸಬೇಕು. ಸಿಸಿ ಕ್ಯಾಮೆರಾಗಳ ಕಡೆಗೆ ಗಮನಹರಿಸಬೇಕು ಎಂದು ತಿಳಿಸಿದರು.
ಚಳ್ಳಕೆರೆ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಅಧಿಕಾರಿಗಳ ನೂರಾರು ಸಭೆ ಮಾಡಿದ್ದರು. ಆದರೆ, ಸಚಿವರಾಗಿ ಮೊದಲ ಬಾರಿಗೆ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಚಳ್ಳಕೆರೆಯಲ್ಲಿ ನಡೆಸಿದ್ದು ವಿಶೇಷವಾಗಿತ್ತು. ಜಿಲ್ಲಾ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಆಗಮಿಸಿದ್ದರು.