ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Jun 17, 2025, 03:24 AM ISTUpdated : Jun 17, 2025, 03:25 AM IST
16ಕೆಎಂಎನ್ ಡಿ17 | Kannada Prabha

ಸಾರಾಂಶ

ಆರ್‌ಸಿಬಿ ಕಪ್‌ಗೆ ಮುತ್ತಿಡುತ್ತಿರುವ ಡಿ.ಕೆ.ಶಿವಕುಮಾರ್ ಅವರ ಬಿತ್ತಿ ಪತ್ರವನ್ನು ಹಿಡಿದು ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಬಲಿಯಾಗಿದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ವಿರುದ್ಧ ಘೋಷಣೆ ಕೂಗಿದರು.

ಆರ್‌ಸಿಬಿ ಕಪ್‌ಗೆ ಮುತ್ತಿಡುತ್ತಿರುವ ಡಿ.ಕೆ.ಶಿವಕುಮಾರ್ ಅವರ ಬಿತ್ತಿ ಪತ್ರವನ್ನು ಹಿಡಿದು ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಬಲಿಯಾಗಿದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ದೂರಿದರು.

ಪ್ರಕರಣದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಕೂಡಲೇ ರಾಜೀನಾಮೆ ನೀಡಬೇಕು. ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.

ಬಡವರಿಗೆ ಕಡಿಮೆ ದರದಲ್ಲಿ ದೊರೆಯುತ್ತಿದ್ದ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಅಧ್ಯಕ್ಷ ಸತೀಶ್ ಯಾವುದೇ ಕಾರಣಕ್ಕೂ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಬಾರದು. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ಔಷಧಿ ಕೇಂದ್ರಗಳನ್ನು ಮುಚ್ಚದಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಮನ್ಮು ಮಾಜಿ ನಿರ್ದೇಶಕಿ ರೂಪ, ಮುಖಂಡರಾದ ಜಿ.ಸಿ. ಮಹೇಂದ್ರ, ಎಂ.ಸಿ.ಸಿದ್ದು , ಮಮತಾ ರಾಂಕಾ, ನಿತ್ಯಾನಂದ, ಕೆಂಪ ಬೋರಯ್ಯ, ಗೆಜ್ಜಲಗೆರೆ ಯೋಗೇಶ್ , ಎನ್.ಆರ್.ಪ್ರಕಾಶ್, ಡಾಬಾ ಕಿಟ್ಟಿ, ಶೇಖರ, ಶ್ರೀನಿವಾಸ ಶೆಟ್ಟಿ, ಮಧುಕುಮಾರ, ವೀರಭದ್ರ ಸ್ವಾಮಿ, ವಳಗೆರೆಹಳ್ಳಿ ರವಿ, ಜಿ.ಸಿ.ಮಧು ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ