ಪ್ರಮಾಣಿಕ ಸೇವೆಯೇ ನಿಜವಾದ ಕರ್ತವ್ಯ: ಹಿರೇಮಠ

KannadaprabhaNewsNetwork |  
Published : Jun 19, 2024, 01:03 AM IST
ಹುಣಸಗಿ ತಾಲೂಕಿನ ರಾಜನಕೋಳೂರು ಗ್ರಾಮದಲ್ಲಿ ಪಿಕೆಜಿಬಿ ಬ್ಯಾಂಕ್ ವ್ಯವಸ್ಥಾಪಕ ಅಲ್ಲು ಶಿವಕೃಷ್ಣ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. | Kannada Prabha

ಸಾರಾಂಶ

ಹುಣಸಗಿ ತಾಲೂಕಿನ ರಾಜನಕೋಳೂರು ಗ್ರಾಮದಲ್ಲಿ ಪಿಕೆಜಿಬಿ ಬ್ಯಾಂಕ್ ವ್ಯವಸ್ಥಾಪಕ ಅಲ್ಲು ಶಿವಕೃಷ್ಣ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಕನ್ನಡಪ್ರಭ ವಾರ್ತೆ ಹುಣಸಗಿ

ಕರ್ತವ್ಯದಲ್ಲಿ ಗ್ರಾಹಕರಿಗೆ ಪ್ರಾಮಾಣಿಕವಾಗಿ ನೀಡುವ ಸೇವೆಯೇ ನಿಜವಾದ ಸೇವೆ ಎಂದು ಮುಖಂಡ ಶಿವಾನಂದ ಹಿರೇಮಠ ಹೇಳಿದರು.

ಸಮೀಪದ ರಾಜನಕೋಳೂರು ಗ್ರಾಮದ ಪಿಕೆಜಿಬಿ ಬ್ಯಾಂಕಿನಲ್ಲಿ ಶಾಖಾ ವ್ಯವಸ್ಥಾಪಕ ಅಲ್ಲು ಶಿವಕೃಷ್ಣ ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಗ್ರಾಹಕರಿಗೆ ಯಾವುದೇ ಸಮಸ್ಯೆ ಇದ್ದಾಗ ಸ್ಪಂದಿಸಿ ಪರಿಹರಿಸುವ ಕೆಲಸ ಮಾಡಿದಾಗ ಅದಕ್ಕಿಂತ ಪ್ರಾಮಾಣಿಕ ಕರ್ತವ್ಯ ಮತ್ತೊಂದಿಲ್ಲ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಖಾ ವ್ಯವಸ್ಥಾಪಕ ಅಲ್ಲುಶಿವಕೃಷ್ಣ, ಈ ಭಾಗದ ರೈತಾಪಿ ಜನರು ಬ್ಯಾಂಕಿನೊಂದಿಗೆ ಉತ್ತಮ ಸಂಬಂಧ ಹೊಂದಿದ್ದಲ್ಲದೆ ವಿಶ್ವಾಸ ಪಡೆದಿದ್ದಾರೆ ಎಂದರು.

ಸಂಗಮೇಶ ನಾಯಕ, ನಿವೇದಿತಾ, ವಿಶಾಲ್, ಪ್ರಾಣೇಶ್, ಸಂಗನಬಸವ, ಬಿ.ಸಿ. ಪಾಟೀಲ್, ಅಮರಯ್ಯಸ್ವಾಮಿ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ